CrimeNEWSಕೃಷಿ

ಕೊಡಗು: ಬೆಳ್ಳಂಬೆಳಗ್ಗೆ ಕಾಡಾನೆ ದಾಳಿಗೆ ಬಲಿಯಾದ ಕಾಫಿ ಬೆಳೆಗಾರ

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ಕೊಡಗಿನಲ್ಲಿ ಕಾಡಾನೆ ಮತ್ತು ಮಾನವನ ನಡುವಿನ ಸಂಘರ್ಷ ನಿಲ್ಲುವಂತೆ ಕಾಣಿಸುತ್ತಿಲ್ಲ. ಮೇಲಿಂದ ಮೇಲೆ ಕಾಡಾನೆ ದಾಳಿಗೆ ಬಲಿಯಾಗುತ್ತಿರುವ ಪ್ರಕರಣಗಳು ನಡೆಯುತ್ತಿದ್ದು, ಸೋಮವಾರ ಬೆಳಗ್ಗೆ ದಕ್ಷಿಣಕೊಡಗಿನಲ್ಲಿ ಕಾಡಾನೆ ಬೆಳೆಗಾರರೊಬ್ಬರನ್ನು ಬಲಿ ಪಡೆದಿದೆ.

ಅಯ್ಯಮಾಡ ಮಾದಯ್ಯ(63) ಕಾಡಾನೆ ದಾಳಿಗೆ ಬಲಿಯಾದವರು. ಇವರು ಬೆಳಗ್ಗೆ 6.45ರ ಸಮಯದಲ್ಲಿ ತೋಟಕ್ಕೆ ತೆರಳುತ್ತಿದ್ದ ಸಂದರ್ಭ ಪೊನ್ನಂಪೇಟೆ ತಾಲೂಕು ಬೀರುಗ ಗ್ರಾಮದ ಚಾಮುಂಡಿ ಮುತ್ತಪ್ಪ ಕೊಲ್ಲಿ ರಸ್ತೆಯಲ್ಲಿ ದಿಢೀರ್ ಬಂದ ಕಾಡಾನೆ ದಾಳಿ ಮಾಡಿದ್ದು, ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಈಗಾಗಲೇ ಕೊಡಗಿನಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಹಲವರನ್ನು ಬಲಿಪಡೆದಿದೆ. ಆದರೆ ಅರಣ್ಯ ಇಲಾಖೆ ಯಾವುದೇ ರೀತಿಯ ಕ್ರಮಕೈಗೊಳ್ಳದ ಕಾರಣದಿಂದ ಮೇಲಿಂದ ಮೇಲೆ ಘಟನೆಗಳು ನಡೆಯುತ್ತಿವೆ.

ಇದೀಗ ಬೆಳೆಗಾರರು ಮೃತಪಟ್ಟ ಪ್ರದೇಶದಲ್ಲಿ ಕಾಡಾನೆ ಹಾವಳಿ ಜಾಸ್ತಿಯಾಗಿದೆ. ಇನ್ನು ಬೀರುಗ ಹಾಗೂ ಕುರ್ಚಿ ಭಾಗದಲ್ಲಿ 40ಕ್ಕೂ ಹೆಚ್ಚು ಕಾಡನೆಗಳು ವಿವಿಧ ತೋಟಗಳಲ್ಲಿ ಬೀಡು ಬಿಟ್ಟಿದ್ದು, ಅವುಗಳು ತೋಟದಲ್ಲಿ ಎಲ್ಲೆಂದರಲ್ಲಿ ಅಡ್ಡಾಡುತ್ತಿರುವುದರಿಂದ ಕಾಫಿ ತೋಟ ನಾಶವಾಗುತ್ತಿದೆ.  ಜತೆಗೆ ಜನ ಅಡ್ಡಾಡಲು ಭಯಪಡುವಂತಾಗಿದೆ.

ಕಾಡಾನೆಗಳ ಹಾವಳಿಯಿಂದಾಗಿ ರೈತರು ಕಾಫಿ, ಬೆಳೆಗಾರರು, ಕಾರ್ಮಿಕರು ಇಲ್ಲಿ ಬದುಕುವುದೇ ಕಷ್ಟವಾಗಿದೆ ವನ್ಯಪ್ರಾಣಿಗಳ ಉಪಟಳದಿಂದ ಈ ಭಾಗದ ಜನರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ರೈತ ಸಂಘದ ಮುಖಂಡರಾದ ಅಜ್ಜಮಾಡ ಚಂಗಪ್ಪ ಅಳಲು ತೋಡಿಕೊಂಡಿದ್ದಾರೆ.

ಬಿಸಿಲಿನಿಂದಾಗಿ ಅರಣ್ಯದಲ್ಲಿ ಮೇವು ಮತ್ತು ನೀರಿಲ್ಲದ ಕಾರಣ ಕಾಡಾನೆಗಳೆಲ್ಲವೂ ನಾಡಿನತ್ತ ಲಗ್ಗೆಯಿಡುತ್ತಿದ್ದು ಇದರಿಂದ ಈ ವ್ಯಾಪ್ತಿಯಲ್ಲಿ ತೋಟದಲ್ಲಿ ಕೆಲಸ ಮಾಡಲು ಜನ ಹೆದರುವಂತಾಗಿದೆ.

ಎಷ್ಟೇ ಜಾಗ್ರತೆ ವಹಿಸಿದರೂ ತೋಟದ ನಡುವೆ ಇರುವ ಕಾಡಾನೆಗಳು ಗೊತ್ತೇ ಆಗದಂತೆ ದಾಳಿ ಮಾಡಿಬಿಡುತ್ತವೆ. ಹೀಗಾಗಿ ತೋಟದಲ್ಲಿರುವ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವ ತನಕ ಈ ವ್ಯಾಪ್ತಿಯ ಜನ ನೆಮ್ಮದಿಯಾಗಿ ಇರಲು ಸಾಧ್ಯವಾಗದಂತಾಗಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ