NEWSಕೃಷಿನಮ್ಮಜಿಲ್ಲೆ

ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ರೈತರು ಕೃಷಿಯಲ್ಲಿನ ಉತ್ಪಾದನೆ ಮತ್ತು ಫಲವತ್ತತೆಯನ್ನು ಹೆಚ್ಚಿಸಿಕೊಳ್ಳಲು ಮಣ್ಣಿನ ಪರೀಕ್ಷೆ ಅತ್ಯಗತ್ಯ ಹಾಗಾಗಿ ಕೂಡಲೇ ಮಣ್ಣಿನ ತಪಾಸಣೆ ಮಾಡಿಸುವಂತೆ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಪ್ರಸಾದ್ ಮನವಿ ಮಾಡಿದರು.

ತಾಲೂಕಿನ ಬಸಲಾಪುರ ಗ್ರಾಮದಲ್ಲಿ ಜವರೇಗೌಡ ಎಂಬುವ ರೈತರ ಜಮೀನಿನಲ್ಲಿ ಆಯೋಜಿಸಿದ್ದ ಮಣ್ಣಿನ ಮಾದರಿ ಸಂಗ್ರಹಣೆ ಕುರಿತ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ರೈತ ಅನ್ನ ನೀಡುವ ಭೂಮಿಗೆ ಅಗತ್ಯ ಪೋಷಕಾಂಶಗಳನ್ನು ನೀಡುವ ಬದಲಾಗಿ ಅಧಿಕ ಉತ್ಪಾದನೆಯ ನೆಪದಲ್ಲಿ ಹೆಚ್ಚೆಚ್ಚು ರಾಸಾಯನಿಕಗಳನ್ನು ಬಳಸುತ್ತಿರುವ ಪರಿಣಾಮ ಭೂಮಿಯ ಫಲವತ್ತತೆ ನಾಶವಾಗಿ ಆಹಾರ ಪದಾರ್ಥಗಳು ವಿಷಯುಕ್ತ ವಾಗುತ್ತಿದೆ. ಹಿಂದೆ ರೈತರು ಬೆಳೆಗಳಿಗೆ ತಾವೇ ಗೊಬ್ಬರವನ್ನು ಸಿದ್ಧಪಡಿಸಿಕೊಳ್ಳುತ್ತಿದ್ದರು ಹಾಗಾಗಿ ಮಣ್ಣಿನ ಫಲವತ್ತತೆ ಗುಣಮಟ್ಟದಿಂದ ಕೂಡಿ ಉತ್ತಮ ಬೆಳೆ ಮತ್ತು ಆರೋಗ್ಯ ಸಿಗುತ್ತಿತ್ತು ಎಂದರು.

ಆದರೆ ಇತ್ತೀಚೆಗೆ ಮಣ್ಣನ್ನು ಪರೀಕ್ಷೆಗೆ ಒಳಪಡಿಸದೇ ಬೆಳೆಯನ್ನು ಕೈಗೊಳ್ಳುತ್ತಾ, ಅಗತ್ಯಕ್ಕಿಂತೆ ಹೆಚ್ಚಿನ ರಾಸಾಯನಿಕ ಗೊಬ್ಬರಗಳನ್ನು ಹಾಕುತ್ತಿರುವ ಕಾರಣ ಮಣ್ಣಿನ ಸಾರ ಕಡಿಮೆಯಾಗುತ್ತಿದೆ ಅಲ್ಲದೆ ಕೆಲವು ರೈತರು ಕಷಿ ಇಲಾಖೆಯ ಸವಲತ್ತುಗಳನ್ನು ಪಡೆಯುವ ಸಲುವಾಗಿ ಮಣ್ಣನ್ನು ಅವೈಜ್ಞಾನಿಕವಾಗಿ ಪರೀಕ್ಷೆಗೆ ಒಳಪಡಿಸುತ್ತಿರುವುದು ಮತ್ತೊಂದು ಸಮಸ್ಯೆಗೆ ಎಡೆಮಾಡಿಕೊಟ್ಟಂತಾಗಿದೆ ಎಂದು ಹೇಳಿದರು.

ಇನ್ನು ಇದು ಹೀಗೆ ಇದು ಮುಂದುವರಿದರೆ ಮಣ್ಣಿಗೆ ಅಪಾಯ ಕಟ್ಟಿಟ್ಟ ಬುತ್ತಿ, ಆದ್ದರಿಂದ ರೈತರು ಉತ್ಪಾದನೆಯನ್ನು ಹೆಚ್ಚಿಸಿಕೊಳ್ಳಲು ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಬೇಕು. ಕೃಷಿ ಇಲಾಖೆ ವತಿಯಿಂದ ರೈತರಿಗೆ ಉತ್ತಮ ಗುಣಮಟ್ಟದ ಬೀಜ ಹಾಗೂ ಲಘು ಪೋಷಕಾಂಶಗಳನ್ನು ನೀಡುವುದು, ಕೃಷಿ ಪರಿಕರಗಳನ್ನು ಗ್ರಾಮ ಮಟ್ಟದಲ್ಲಿ ಸಕಾಲದಲ್ಲಿ ದೊರೆಯುವಂತೆ ಮಾಡಲು ಇಲಾಖೆ ಸಿದ್ದವಾಗಿದೆ ಎಂದರು.

ಈಗಾಗಲೇ ತಾಲೂಕು ಮಟ್ಟದಲ್ಲಿ ಬೀಜೋತ್ಪಾದನೆಗೆ ಉತ್ತೇಜನ, ಆಧುನಿಕ ಮಾಹಿತಿ ತಂತ್ರಜ್ಞಾನಗಳ ಬಳಕೆ ಕುರಿತು ರೈತರ ರೈತರಲ್ಲಿ ಅರಿವು ಮೂಡಿಸಲಾಗಿದ್ದು, ಮಣ್ಣು ಮಾದರಿ ಸಂಗ್ರಹಣೆ, ಮಣ್ಣಿನ ಫಲವತ್ತತೆ, ಸಮಗ್ರ ಪೋಷಕಾಂಶ ನಿರ್ವಹಣೆ, ಸಮಗ್ರ ಕೃಷಿ ಪದ್ಧತಿ, ಬೀಜೋಪಚಾರ ಹಾಗೂ ಬೆಳೆಯ ವಿವಿಧ ಹಂತಗಳಲ್ಲಿ ಕೈಗೊಳ್ಳಬಹುದಾದ ಬೆಳೆ ನಿರ್ವಹಣೆ ತಾಂತ್ರಿಕತೆ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಕೃಷಿ ಅಧಿಕಾರಿಗಳಾದ ಮಹೇಶ್, ಹಿತೇಶ್, ಆತ್ಮ ಯೋಜನೆಯ ಸಿಬ್ಬಂದಿಗಳಾದ ವಿದ್ಯಾ, ಸುಷ್ಮಿತಾ, ಚಂದ್ರಕಲಾ, ರೈತ ಜವರೇಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ