NEWSನಮ್ಮರಾಜ್ಯ

ಕಡಿಮೆ ತೂಕ, ಮುದ್ರೆಯಿಲ್ಲದ ಯಂತ್ರಗಳ ಬಳಕೆ

ನ್ಯಾಯ ಬೆಲೆ ಅಂಗಡಿಗಳ ವಿರುದ್ಧ 16 ಮೊಕದ್ದಮೆ ದಾಖಲು 

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕಲಬುರಗಿ ಜಿಲ್ಲೆಯ ನ್ಯಾಯ ಬೆಲೆ ಅಂಗಡಿ ಮತ್ತು ಸಗಟು ಮಾರಾಟ ಮಳಿಗೆಗಳಲ್ಲಿ ಸತ್ಯಾಪನೆ ಮತ್ತು ಮುದ್ರೆ ಇಲ್ಲದ ತೂಕದ ಯಂತ್ರಗಳ ಬಳಕೆ ಮತ್ತು ಕಡಿಮೆ ತೂಕದಲ್ಲಿ ಮಾರುತ್ತಿದ್ದ ಅಂಗಡಿಗಳ ಮೇಲೆ ಅಧಿಕಾರಿಗಳ ತಂಡ ದಾಳಿ ಮಾಡಿ 16  ಮೊಕದ್ದಮೆಗಳನ್ನು ದಾಖಲಿಸಿದೆ.

ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ರಫೀಕ್ ಲಾಡಜಿ ನೇತೃತ್ವದ ಅಧಿಕಾರಿಗಳ ತಂಡ ಕಳೆದ ಏಪ್ರಿಲ್ 7 ರಿಂದ 10ರ ವರೆಗೆ ಜಿಲ್ಲೆಯಾದ್ಯಂತ ಸುಮಾರು 82 ನ್ಯಾಯ ಬೆಲೆ ಅಂಗಡಿ ಹಾಗೂ ಸಗಟು ಮಾರಾಟ ಮಳಿಗೆಗಳ ಮೇಲೆ ದಾಳಿ ಮಾಡಿ ತಪಾಸಣೆ ನಡೆಸಿದೆ.

ಇದರಲ್ಲಿ ಕಡಿಮೆ ತೂಕದಲ್ಲಿ ಮಾರುತ್ತಿದ್ದದವರ ಮೇಲೆ 6 ಮೊಕದಮ್ಮೆ ಹಾಗೂ ಸತ್ಯಾಪನೆ  ಮತ್ತು ಮುದ್ರೆ ಇಲ್ಲದ ತೂಕದ  ಯಂತ್ರಗಳ ಬಳಸುತ್ತಿದ್ದಕ್ಕಾಗಿ 10 ಮೊಕದಮ್ಮೆ ಸೇರಿ ಒಟ್ಟು 16 ಮೊಕದಮ್ಮೆ ದಾಖಲಿಸಿ 28000 ರೂ. ಅಭಿ ಸಂಧಾನ ದಂಡ ವಿಧಿಸಲಾಗಿದೆ ಎಂದು ರಫೀಕ್ ಲಾಡಜಿ ತಿಳಿಸಿದಾರೆ.

ದಾಳಿಯ ತಂಡದಲ್ಲಿ ಕಾನೂನು ಮಾಪನಶಾಸ್ತ್ರ ಇಲಾಖೆಯ ನಿರೀಕ್ಷಕರಾದ ಅಮರೇಶ್ ಹೊಸಮನಿ,  ಅಶ್ವತ್ ಕುಮಾರ್ ಪತ್ತಾರ್ ಮತ್ತು ವಿಶ್ವನಾಥ್ ರೆಡ್ಡಿ ಇದ್ದರು.

ನ್ಯಾಯಬೆಲೆ ಅಂಗಡಿಗಳ ತೂಕದಲ್ಲಿ ವ್ಯತ್ಯಾಸವಿದಲ್ಲಿ ಗ್ರಾಹಕರು ದೂರವಾಣಿ ಸಂಖ್ಯೆ: 08472-278678 ಕರೆ ಮಾಡಿ ದೂರು ದಾಖಲಿಸಬಹುದು ಎಂದು ಸಹಾಯಕ ನಿಯಂತ್ರಕ ರಫೀಕ್ ಲಾಡಜಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...