NEWSನಮ್ಮರಾಜ್ಯವಿಡಿಯೋ

ಕಣ್ಣೀರಿನಲ್ಲಿ ಕೈ ತೊಳೆಯುತ್ತಿರುವ ಸಾರಿಗೆ ನೌಕರರ ಕುಟುಂಬಗಳು- ಕ್ವಾರ್ಟರ್ಸ್ ಖಾಲಿ ಮಾಡಿ ಇಲ್ಲ ದುಪ್ಪಟು ಬಾಡಿಗೆ ಕಟ್ಟಿ: ನೋಟಿಸ್‌ ಜಾರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರದ ವೇಳೆ 3 ಸಾವಿರಕ್ಕೂ ಹೆಚ್ಚು ನೌಕರರನ್ನು ವಜಾ ಮಾಡಿದ್ದು, ಈಗ ಸಾರಿಗೆ ನೌಕರರಿಗೆ ನಾಲ್ಕೂ ನಿಗಮಗಳ ಅಧಿಕಾರಿಗಳು ಶಾಕ್ ಕೊಡುತ್ತಿದ್ದಾರೆ.

ಈಗಾಗಲೇ ವಜಾಗೊಂಡಿದ್ದರು ನೀವು ವಾಸವಿರುವ ಮನೆ (ಕ್ವಾರ್ಟರ್ಸ್) ಖಾಲಿ ಮಾಡಬೇಕು ಇಲ್ಲವಾದ್ರೆ ಬಾಡಿಗೆ ಹಣವನ್ನು ತಿಂಗಳಿಂದ ತಿಂಗಳಿಗೆ ಹೆಚ್ಚು ಕಟ್ಟಬೇಕು ಎಂದು ನೋಟಿಸ್ ಜಾರಿ ಮಾಡುತ್ತಿದ್ದಾರೆ. ಆ ನೋಟಿಸ್ ನೀಡಿದ ಹಿನ್ನೆಲೆ ಆತಂಕದಿಂದ ನೌಕರರ ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ.

ನಮ್ಮ ಯಜಮಾನ್ರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಈಗ ರೀತಿ ನೋಟಿಸ್‌ ಕೊಡುತ್ತಿದ್ದಾರೆ ನಾವೇನು ಮಾಡಬೇಕು. ಏಕಾಏಕಿ ಈ ರೀತಿ ಮನೆ ಖಾಲಿ ಮಾಡಿ ಅಂದರೆ ಮಕ್ಕಳನ್ನ ಕಟ್ಟಿಕೊಂಡು ಎಲ್ಲಿಗೆ ಹೋಗಬೇಕು ಎಂದು ಮಹಿಳೆಯರು ಸಾರಿಗೆ ಅಧಿಕಾರಿಗಳು ಮತ್ತು ಸರ್ಕಾರವನ್ನು ಶಪಿಸುತ್ತಿದ್ದಾರೆ.

ರಾಜ್ಯ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಿದ್ರೆ ನಾವೇಕೆ ಈ ರೀತಿ ಮಾಡ್ತಿದ್ದೀವಿ. ಈ ಎಲ್ಲ ಗೊಡ್ಡು ಬೆದರಿಕೆಗಳಿಗೆ ನಾವು ಹೆದರಲ್ಲ. ನಮ್ಮವರಾರು ಮನೆ ಖಾಲಿ ಮಾಡಬೇಡಿ ಅಂತಾ ಕಡ್ಡಿ ತುಂಡು ಮಾಡಿದಂತೆ ಸಂಘಟನೆಗಳು ಹೇಳುತ್ತಿವೆ.

ಆರನೇ ವೇತನ ಆಯೋಗದ ವರದಿ ಜಾರಿಗೆ ಆಗ್ರಹಿಸಿ ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ ನೌಕರರು ನಡೆಸುತ್ತಿದ್ದ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ ಎಂದು ಸಿಬ್ಬಂದಿಗಳಿಗೆ ಈ ಹಿಂದೆ ಹಿರಿಯ ಅಧಿಕಾರಿಗಳು ವಸತಿಗೃಹ ಖಾಲಿ ಮಾಡಿಸಲು ನೋಟಿಸ್ ನೀಡುವ ಮೂಲಕ ಬೆದರಿಕೆ ಹಾಕಿದ್ದರು. ಈಗ ಮನೆ ಖಾಲಿ ಮಾಡದಿದ್ದರೆ ಬಾಡಿಗೆ ಹೆಚ್ಚಾಗಿ ಕಟ್ಟಬೇಕು ಎಂದು ನೋಟಿಸ್‌ ನೀಡುತ್ತಿರುವುದು ಸರಿಯಲ್ಲ. ಈಗ ಕೆಲಸವಿಲ್ಲದೆ ನೌಕರರು ಜೀವನ ಸಾಗಿಸುವುದೇ ಕಷ್ಟವಾಗಿದೆ. ಈ ವೇಳೆ ಈ ರೀತಿ ನೋಟಿಸ್‌ ನೀಡುವುದು ಸರಿಯಲ್ಲ ಎಂದು ನೌಕರರ ಒಕ್ಕೂಟದ ಪದಾಧಿಕಾರಿ ಆನಂದ್‌ ಹೇಳಿದ್ದಾರೆ.

ಇನ್ನು ಬಿಎಂಟಿಸಿಯ ಅಧ್ಯಕ್ಷ ನಂದೀಶ್‌ ರೆಡ್ಡಿ ಮತ್ತು ಅಧಿಕಾಗಳಿಗೂ ಅವರು ಒತ್ತಾಯಿಸಿದ್ದು, ಮುಷ್ಕರದ ವೇಳೆ ವಜಾಗೊಂಡ ನೌಕರರ ಪ್ರಕರಣ ಇನ್ನೂ ಹೈ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ವೇಳೆ ಈ ರೀತಿ ನೌಕರರ ವಿರುದ್ಧ ನಡೆಕೊಳ್ಳಬಾರದು ಎಂದು ಒತ್ತಾಯಿಸಿದ್ದಾರೆ.

ಸಾರಿಗೆ ನೌಕರರಿಗೆ ವಸತಿ ಗೃಹವಿದ್ದು, ಅಲ್ಲಿ ಕೆಲವರಿಗೆ ಕ್ವಾರ್ಟರ್ಸ್ ಗಳನ್ನು  ಹಂಚಿಕೆ ಮಾಡಲಾಗಿದೆ. ಏ.7ರಿಂದ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮತ್ತು ನೌಕರರು ಅನಿರ್ದಿಷ್ಟ ಕಾಲ ಮುಷ್ಕರ ನಡೆಸಿದ್ದರು. ಹೀಗಾಗಿ, ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಕ್ವಾರ್ಟರ್ಸ್ ನಲ್ಲಿ ವಾಸವಾಗಿರುವ ಕುಟುಂಬಗಳನ್ನು ಖಾಲಿ ಮಾಡಿಸಲು ನೋಟಿಸ್ ಜಾರಿ ಮಾಡಿದ್ದು ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸಿತ್ತು. ಈಗ ದುಪ್ಪಟ್ಟು ಬಾಡಿಗೆ ಕಟ್ಟಬೇಕು ಎಂದು ಬೆದರಿಸುತ್ತಿರುವುದು ಸರಿಯಲ್ಲ ಎಂಬ ಕೂಗ ಸಾರ್ವಜನಿಕ ವಲಯದಿಂದಲೂ ಕೇಳಿ ಬರುತ್ತಿದೆ.

ನೋಟಿಸ್ ನೀಡುತ್ತಿರುವುದರಿಂದ ನೌಕರರು ಭಯಭೀತರಾಗಿದ್ದಾರೆ. ಮತ್ತೊಂದೆಡೆ ಮೇಲಧಿಕಾರಿಗಳ ಒತ್ತಡ ಮತ್ತು ಬೆದರಿಕೆ ಹಾಕುತ್ತಿರುವುದು ಸಾರಿಗೆ ನೌಕರರನ್ನು ಹೈರಾಣರಾಗುಂತೆ ಮಾಡುತ್ತಿರುವುದಂತು ಸತ್ಯ.

ಇನ್ನು ಸಾರಿಗೆ ನೌಕರರ ಬೇಡಿಕೆಗಳು ಯಾವಾಗ ಈಡೆರುತ್ತವೋ ಅವರಿಗೆ ನೆಮ್ಮದಿಯ ಜೀವನ ಸಾಗಿಸಲು ಇನ್ನು ಎಷ್ಟು ಕಾಲ ಕಾಯಬೇಕೋ? ಇದಕ್ಕೆಲ್ಲ ಆ ದೇವರೆ ಉತ್ತರ ಕೊಡಬೇಕು ಅಷ್ಟೇ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು