CrimeNEWSಆರೋಗ್ಯ

ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಅಕ್ರಮ: ತನಿಖೆ ನಡೆಸಿ 2 ವರದೊಳಗೆ ವರದಿ ಸಲ್ಲಿಸಲು ಸಿಎಂ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಅಕ್ರಮಗಳು ನಡೆದಿವೆ ಎಂದು 15ಕ್ಕೂ ಹೆಚ್ಚು ದೂರುಗಳು ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಸಲ್ಲಿಸಲಾಗಿದೆ. ಹೀಗಾಗಿ ಈ ಬಗ್ಗೆ ತನಿಖೆ ನಡೆಸಿ 2 ವರದೊಳಗೆ ವರದಿ ಸಲ್ಲಿಸುವಂತೆ ಸಿಎಂ ಆದೇಶ ಮಾಡಿದ್ದಾರೆ.

vijayapatha.in - ವಿಜಯಪಥ.ಇನ್‌ ನಿಮಗೆ ವಿಶ್ವಾಸನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅನಿಸಿದರೆ ನಮಗೆ ಆರ್ಥಕವಾಗಿ ಬಲ ನೀಡಿ. ಇನ್ನಷ್ಟು ಸತ್ಯನಿಷ್ಠ ವರದಿಗಳನ್ನು ಮಾಡುವುದಕ್ಕೆ ಬೆಂಬಲ ನೀಡಿ.   ಕನಿಷ್ಠ 100 ರೂ. ಒಮ್ಮೆಗೆ ಹಾಕಿ. ನಮ್ಮನ್ನು ಪ್ರೋತ್ಸಾಹಿಸಿ. 

ಕಿದ್ವಾಯಿ ಆಸ್ಪತ್ರೆಯ ನಿರ್ದೇಶಕರು ಹಾಗೂ ಆಡಳಿತ ವ್ಯವಸ್ಥೆಯ ವೈಫಲ್ಯದಿಂದಾಗಿ ಆಸ್ಪತ್ರೆಯಲ್ಲಿ ಹಲವಾರು ಅಕ್ರಮಗಳು ನಡೆದಿವೆ ಎಂದು ದೂರಲಾಗಿದೆ. ಹೀಗಾಗಿ ಅಕ್ರಮ ನಡೆದಿರುವ ಬಗ್ಗೆ ವರದಿ ಸಲ್ಲಿಸುವುದಕ್ಕೆ ಡಾ.ಅರುಂಧತಿ ಚಂದ್ರಶೇಖರ್ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು, ಈ ತಂಡಕ್ಕೆ ಜವಾಬ್ದಾರಿಯನ್ನು ನೀಡಲಾಗಿದೆ.

ಸಿದ್ದರಾಮಯ್ಯ ಅವರಿಗೆ 15ಕ್ಕೂ ಹೆಚ್ಚು ದೂರುಗಳು ಲಿಖಿತವಾಗಿ ಸಲ್ಲಿಕೆಯಾಗಿವೆ. ಹೀಗಾಗಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಸಿದ್ದರಾಮಯ್ಯರವರು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಲು ವೈದ್ಯಕೀಯ ಶಿಕ್ಷಣ ಇಲಾಖೆ ಡಾ.ಅರುಂಧತಿ ಚಂದ್ರಶೇಖರ್ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆ ಮಾಡಿದೆ.

ಸಿಎಂಗೆ ಸಲ್ಲಿಸಿದ ದೂರಿನಲ್ಲಿ ಏನಿದೆ?: ಆಸ್ಪತ್ರೆಯ ಪೆಟ್‌ಸ್ಕ್ಯಾನ್ ಟೆಂಡರ್ ನಿಯಮ ಉಲ್ಲಂಘನೆ ಮಾಡಲಾಗಿದ್ದು ಅವಧಿಗೂ ಮುನ್ನವೇ ನಿರ್ದೇಶಕರಿಂದ ಟೆಂಡರ್ ಕೆರೆಯಲಾಗಿದೆ. ವಸ್ತುಗಳ ಪೂರೈಕೆಗೂ ಮುನ್ನವೇ ಬಿಲ್ಲಿಂಗ್ ಹಾಗೂ ಹೆಚ್ಚುವರಿ ಹಣ ವಸೂಲಿ ಮಾಡಲಾಗಿದೆ.

ನಿಯಮ ಉಲ್ಲಂಘಿಸಿರುವ ಆಡಳಿತ ಮಂಡಳಿ ಮಾನವ ಸಂಪನ್ಮೂಲನ ಪೂರೈಕೆ ಮಾಡಿದೆ. ಕಳಪೆ ಮಟ್ಟದ ಪೆಟ್‌ಸ್ಕ್ಯಾನ್ ಯಂತ್ರ ಖರೀದಿಸಿ ಇದರಲ್ಲಿ ಜಿಎಸ್‌ಟಿ ವಂಚನೆ ಮಾಡಿದ್ದಾರೆ. ಇದು ಅಲ್ಲದೇ ಸರ್ಕಾರದ ಅನುಮೋದನೆ ಇಲ್ಲದೆ ಟೆಂಡರ್‌ದಾರರಿಗೆ ಈಗಾಗಲೇ ಹಣ ಸಂದಾಯ ಮಾಡಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

ಪಿಪಿಪಿ ಮಾದರಿಯ ನಿಯಮ ಉಲ್ಲಂಘನೆ ಮಾಡಿದ್ದು ಕಳಪೆ ಗುಣಮಟ್ಟದ ಔಷಧ, ಔಷಧಗಳ ಖರೀದಿಯಲ್ಲಿ ಅಕ್ರಮ ನಡೆಸಲಾಗಿದೆ. ಆಸ್ಪತ್ರೆಯಲ್ಲಿ ರೋಗಿಗಳ ಸಾವಿನ ಸಂಖ್ಯೆ ಕೂಡ ಹೆಚ್ಚಳವಾಗುತ್ತಿರುವುದು ಆತಂಕಕಾರಿ ಎಂದು ಆಡಳಿತ ವ್ಯವಸ್ಥೆಯ ವಿಫಲತೆ ಬಗ್ಗೆ ಸಿಎಂ ವಿವರವಾದ ದೂರು ಸಲ್ಲಿಸಲಾಗಿದೆ.

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು!