CrimeNEWSನಮ್ಮಜಿಲ್ಲೆ

ಕನಕಪುರ: ಬಿಸಿಲ ಬೇಗೆಯಿಂದ ಬಳಲಿ ಮೃತಪಟ್ಟ 14 ವರ್ಷದ ಕಾಡಾನೆ

ವಿಜಯಪಥ ಸಮಗ್ರ ಸುದ್ದಿ

ಕನಕಪುರ: ಅತ್ತ ನೀರಿಲ್ಲದೆ ಇತ್ತ ವಾತಾವರಣದ ಬಿಸಿ ತಾಳಲಾರದೆ ಕಾಡಾಣೆಯೊಂದು ಮೃತಪಟ್ಟ ಘಟನೆ ಯಲವನತ್ತ ವನ್ಯ ಜೀವಿ ಸಂರಕ್ಷಣಾ ಪ್ರದೇಶದಲ್ಲಿ ನಡೆದಿದೆ.

ರಾಂನಗರ ಜಿಲ್ಲೆಯ ಕನಕಪುರ ವಲಯದ ಬೆಟ್ಟಹಳ್ಳಿ ಬೀಟ್‌ನಲ್ಲಿ ಕಾಡಾನೆಯೊಂದು ಮೃತಪಟ್ಟಿದೆ. ಕಳೆದ ಮೂರು ದಿನಗಳ ಹಿಂದೆ ನಿತ್ರಾಣಗೊಂಡಿದ್ದ 14 ವರ್ಷದ ಗಂಡಾನೆ ಕಾಡಂಚಿನಲ್ಲಿ ಕೊನೆಯುಸಿರೆಳೆದಿದೆ. ನಿತ್ರಾಣಗೊಂಡಿದ್ದ
ಕಾಡಾನೆಗೆ ಅರಣ್ಯ ಸಿಬ್ಬಂದಿಗಳು ಚಿಕಿತ್ಸೆ ಕೊಡಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ.

ಇತ್ತೀ ಚೆಗಷ್ಟೆ ನಿತ್ರಾಣಗೊಂಡಿದ್ದ ಕಾಡಾನೆಗೆ ಚಿಕಿತ್ಸೆ ನೀಡಿ ಅರಣ್ಯಾಧಿಕಾರಿಗಳು ಕಾಡಿಗಟ್ಟಿದ್ದರು. ಆದರೀಗ ಬಿಸಿಲಿನ ಬೇಗೆ ಹೆಚ್ಚುತ್ತಿದ್ದು, ಕಾಡಿನಲ್ಲಿ ನೀರು ಸಿಗದೆ ಆನೆ ಕೊನೆಯುಸಿರೆಳೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಡಿಎಫ್ಒ ರಾಮಕೃಷ್ಣಪ್ಪ , ಕನಕಪುರ ಎಸಿಎಫ್ ಗಣೇಶ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಸಾವಿನ ಬಗ್ಗೆ ನಿಖರ ಮಾಹಿತಿ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು