NEWSಸಂಸ್ಕೃತಿ

ಕನ್ನಡಿಗರು ನಪುಂಸಕರು: ಸಾಹಿತಿ ಪ್ರೊ. ಕೆ.ಎಸ್. ಭಗವಾನ್

ವಿಜಯಪಥ ಸಮಗ್ರ ಸುದ್ದಿ

ಮೈಸೂರು: “ಕನ್ನಡಿಗರು ನಪುಂಸಕರು” ಎಂದು ಹೇಳುವ ಮೂಲಕ ಸಾಹಿತಿ ಪ್ರೊ. ಕೆ.ಎಸ್. ಭಗವಾನ್ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಆದರೆ ಅವರು ಹೇಳಿರುವುದರ ಬಗ್ಗೆ ಗಂಭೀರವಾಗಿ ಪ್ರತಿಯೊಬ್ಬ ಕನ್ನಡಿಗನೂ ಚಿಂತಿಸಬೇಕಿದೆ.

ಮೈಸೂರು ಜಿಲ್ಲಾ ಕನ್ನಡ ಹೋರಾಟಗಾರರ ಸಂಘ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ನಡೆಸಬೇಕು ಎಂದು ಆಗ್ರಹಿಸಿತ್ತು. ಈ ವೇಳೆ ಮಾತನಾಡಿದ ಪ್ರೊ. ಭಗವಾನ್ “ತಮಿಳರು ಹೋರಾಡಿ ಈ ವಿಚಾರದಲ್ಲಿ ಸಫಲರಾದರು. ಆದರೆ ಕನ್ನಡಿಗರು ನಪುಂಸಕರು, ಈ ವಿಚಾರದಲ್ಲಿ ಒಗ್ಗಟ್ಟಿಲ್ಲ. ” ಎಂದಿದ್ದಾರೆ. ಅಲ್ಲದೆ ಮೇಕೆದಾಟು ವಿಚಾರವಾಗಿ ಕೂಡ ತಮಿಳಿಗರದ್ದೇ ಮೇಲುಗೈ ಆಗಿದೆ ಎಂದು ಆರೋಪಿಸಿದರು.

”ಕನ್ನಡ ಭಾಷೆಯಲ್ಲಿ ಬ್ಯಾಂಕಿಂಗ್‌ ಪರೀಕ್ಷೆ ನಡೆಸಬೇಕು ಎನ್ನುವ ಬಗ್ಗೆ ಇದುವರೆಗೆ ಸಶಕ್ತ ಹೋರಾಟ ನಡೆಸಿಲ್ಲ. ಆ ರೀತಿಯಲ್ಲಿ ಕನ್ನಡಿಗರು ನಪುಂಸಕರು”ಎಂದು ಭಗವಾನ್ ಹೇಳಿದ್ದಾರೆ. ಅಲ್ಲದೆ ಮೇಕೆದಾಟು ವಿಷಯದಲ್ಲಿ ತಮಿಳುನಾಡಿನ ಎಲ್ಲಾ ರಾಜಕೀಯ ಪಕ್ಷಗಳೂ ಒಗ್ಗಟ್ಟಾಗಿ ಕೇಂದ್ರಕ್ಕೆ ಮನವಿ ಸಲ್ಲಿಸಿವೆ. ಆದರೆ ನಮ್ಮಲ್ಲಿ ಒಗ್ಗಟ್ಟಿಲ್ಲ., ರಾಜಕೀಯ ಪಕ್ಷಗಳು ಒಂದಾಗಿಲ್ಲ ಎಂದು ಕಿಡಿಕಾರಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು