NEWSಶಿಕ್ಷಣ-ಸಿನಿಪಥ

ಕನ್ನಡಿಗರ ಪ್ರೀತಿಯ ಕುಳ್ಳ, ಸ್ಯಾಂಡಲ್‌ವುಡ್‌ ಹಿರಿಯ ನಟ ದ್ವಾರಕೀಶ್‌ಗೆ ಗೌರವ ಡಾಕ್ಟರೇಟ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಿಂಗಾಪುರದಲ್ಲಿ ರಾಜಕುಳ್ಳ, ಸ್ಯಾಂಡಲ್‌ವುಡ್‌ನ ಸಕಲಕಲಾವಲ್ಲಭ ಹಿರಿಯ ನಟ ನಮ್ಮ ಪ್ರೀತಿಯ ಕುಳ್ಳ ದ್ವಾರಕೀಶ್ ಅವರು ಗೌರವ ಡಾಕ್ಟರೇಟ್‌ಗೆ ಭಾಜನರಾಗಿದ್ದಾರೆ.

ಹಲವು ವರ್ಷಗಳ ಚಿತ್ರರಂಗದ ದ್ವಾರಕೀಶ್ ಅವರ ಕಲಾಸೇವೆ ಗುರುತಿಸಿ, ಬೆಂಗಳೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ.

ನಟ, ನಿರ್ದೇಶಕ, ನಿರ್ಮಾಪಕ, ಹೀಗೆ ಕನ್ನಡ ಚಲನಚಿತ್ರದ ಮೂಲಕ ಕಲಾಸೇವೆ ಸಲ್ಲಿಸಿರುವ ದ್ವಾರಕೀಶ್‌ ಅವರು ಗೌರವ ಡಾಕ್ಟರೇಟ್‌ಗೆ ಭಾಜನರಾಗಿರುವುದು ಅವರ ಕಲಾ ಸೇವೆಗೆ ಸಂದ ಗೌರವವಾಗಿದೆ.

ನೂರಾರು ಸಿನಿಮಾಗಳಲ್ಲಿ ನಟನೆ, 40ಕ್ಕೂ ಹೆಚ್ಚು ಸಿನಿಮಾಗಳ ನಿರ್ಮಾಣ ಮಾಡಿ ಭೇಸ್‌ ಎನಿಸಿಕೊಂಡಿರುವ ಸ್ಯಾಂಡಲ್‌ವುಡ್‌ನಲ್ಲಿ ಅವರೇ ಕರೆದುಕೊಳ್ಳುವ ಕುಳ್ಳ ದ್ವಾರಕೀಶ್‌ಗೆ ಬೆಂಗಳೂರು ವಿಶ್ವವಿದ್ಯಾಲಯ ತನ್ನ 57ನೇ ಘಟಿಕೋತ್ಸವದಂದು ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಲಿದೆ.

ಚಲನಚಿತ್ರ ವಿಭಾಗದಲ್ಲಿ ದ್ವಾರಕೀಶ್, ಕಾನೂನು ಅಟಾರ್ನಿ ಹಾಗೂ ನ್ಯಾಯ ಸಲಹೆಗಾರರು ವಿಭಾಗ ಅಮರನಾಥ ಗೌಡ, ವರ್ಣ ಚಿತ್ರಕಾರರು ವಿಭಾಗ ಡಾ.ಟಿ. ಅನಿಲ್ ಕುಮಾರ್ ಸೇರಿದಂತೆ ಗೌರವ ಡಾಕ್ಟರೇಟ್ ಅನ್ನು ಡಿ.5ರಂದು ಜ್ಞಾನ ಭಾರತಿ ಆಡಿಟೋರಿಯಂನಲ್ಲಿ ನಡೆಯಲಿರುವ ಘಟಿಕೋತ್ಸವ ಸಮಾರಂಭದಲ್ಲಿ ಪ್ರದಾನ ಮಾಡಿ ಗೌರವಿಸಲಾಗುವುದು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ