CrimeNEWSದೇಶ-ವಿದೇಶವಿದೇಶ

ಕೀನ್ಯಾದ ಕ್ರೈಸ್ತ ಪಾದ್ರಿಯೊಬ್ಬರ ಜಮೀನಿನಲ್ಲಿ 47 ಕ್ಕೂ ಅಧಿಕ ಶವಗಳು ಪತ್ತೆ – ಸ್ವರ್ಗದ ಆಸೆಗೆ ಜೀವಂತ ಸಮಾಧಿ

ಜಮೀನಿನಲ್ಲಿ ಪತ್ತೆಯಾದ 47 ಶವಗಳು, ಭಯ ಹುಟ್ಟಿಸುತ್ತೆ ಈ ಸಾವಿನ ಹಿಂದಿರುವ ಕಾರಣ

ವಿಜಯಪಥ ಸಮಗ್ರ ಸುದ್ದಿ

ಕೀನ್ಯಾ: ಪಾದ್ರಿ ಮಾತನ್ನು ನಂಬಿ, ಸ್ವರ್ಗಕ್ಕೆ ಹೋಗುವ ಆಸೆಯಲ್ಲಿ 47ಕ್ಕೂ ಅಧಿಕ ಮಂದಿ ಜೀವಂತ ಸಮಾಧಿಯಾಗಿದ್ದಾರೆ ಎನ್ನುವ ಆಘಾತಕಾರಿ ಸುದ್ದಿಯೊಂದು ಬಯಲಾಗಿದೆ.

ಹೌದು! ಕೀನ್ಯಾದಲ್ಲಿ ಪಾದ್ರಿಯೊಬ್ಬರ ಜಮೀನಿನಲ್ಲಿ ಬರೋಬ್ಬರಿ 47 ಶವಗಳು ಪತ್ತೆಯಾಗಿವೆ. ಒಂದೊಮ್ಮೆ ನೀವು ಸ್ವರ್ಗಕ್ಕೆ ಹೋಗಬಯಸುತ್ತೀರಿ ಎಂದರೆ ಉಪವಾಸವಿರಿ ಬಳಿಕ ಜೀವಂತ ಸಮಾಧಿಯಾಗಿ ಎಂದು ಪಾದ್ರಿ ಸಲಹೆ ನೀಡಿದ್ದರಂತೆ.

ಉಪವಾಸವಿರುವ ನಿಮ್ಮನ್ನು ಸಮಾಧಿ ಮಾಡಿದರೆ ಸ್ವರ್ಗಕ್ಕೆ ಹೋಗುತ್ತೀರಿ, ಯೇಸುವನ್ನು ಭೇಟಿಯಾಗುತ್ತೀರಿ ಎಂದು ಹೇಳಿದ್ದ ಕಾರಣ ಎಲ್ಲರೂ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ಮೂರು ದಿನಗಳಿಂದ ಮೃತದೇಹವನ್ನು ಹೊರತೆಗೆಯುವ ಕಾರ್ಯ ನಡೆಯುತ್ತಿದೆ.

ಕೀನ್ಯಾ ಪೊಲೀಸರು ಒಂದೇ ಕುಟುಂಬದ ಐವರ ಮೃತದೇಹಗಳನ್ನು ಸಮಾಧಿಯಿಂದ ತೆಗೆದಿದ್ದಾರೆ. ಇಲ್ಲಿಯವರೆಗೆ 65 ಸಮಾಧಿಗಳನ್ನು ಪತ್ತೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗಲಿದೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಇನ್ನು ಯಾರಾದರೂ ಸಮಾಧಿಯೊಳಗೆ ಬದುಕಿರಬಹುದೆಂಬ ನಿರೀಕ್ಷೆಯಲ್ಲಿ ಸಮಾಧಿಯನ್ನು ಅಗೆಯುತ್ತಿದ್ದಾರೆ. ಸಿಕ್ಕಿರುವ ಮೃತದೇಹಗಳಲ್ಲಿ ಮಕ್ಕಳೂ ಇದ್ದಾರೆ.

ಈ ವಿಷಯ ಬಹಿರಂಗವಾದ ನಂತರ, ಪೊಲೀಸರು ಪಾಲ್ ಮೆಕೆಂಜಿ ಎಂಬ ಪಾದ್ರಿಯನ್ನು ಬಂಧಿಸಿದ್ದಾರೆ. ಈ ವೇಳೆ ವಿಚಾರಣೆಗೆ ಒಳಪಟ್ಟ ಪಾದ್ರಿ ಆತ್ಮಹತ್ಯೆಗೆ ಅವರನ್ನು ಪ್ರೇರೇಪಿಸಲಿಲ್ಲ ಎಂದು ಹೇಳಿದ್ದಾರೆ. 2019ರಲ್ಲೇ ಚರ್ಚ್​ ಅನ್ನು ಮುಚ್ಚಲಾಗಿದೆ ಎಂದಿದ್ದಾರೆ. ಪೊಲೀಸರು ಈಗ ಎಲ್ಲ ಮೃತ ದೇಹಗಳಿಂದ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸುತ್ತಿದ್ದಾರೆ.

ಇನ್ನು ಇದರಿಂದ ಜನರು ಹಸಿವಿನಿಂದ ಸತ್ತರು ಎಂದು ಸಾಬೀತುಪಡಿಸಬಹುದು. ಈ ಹಿಂದೆ ಇಬ್ಬರು ಮಕ್ಕಳ ಸಾವಿಗೆ ಪಾದ್ರಿ ಪಾಲ್ ಮೆಕೆಂಜಿ ಕಾರಣರಾಗಿದ್ದರು. ನಂತರ ಪೋಷಕರ ದೂರಿನ ಮೇರೆಗೆ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಹೀಗಾಗಿ ಚರ್ಚನ್ನು ಮುಚ್ಚಲಾಗಿತ್ತು ಎಂದು ಹೇಳಲಾಗುತ್ತಿದೆ.

ಒಟ್ಟಾರೆ ಪಾದ್ರಿಯ ಮೌಡ್ಯಕ್ಕೆ ಒಳಗಾದ 47ಕ್ಕೂ ಹೆಚ್ಚು ಮಂದಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದು, ಇದರಿಂದ ಕೀನ್ಯಾದಲ್ಲೂ ಸೂತಕದ ಛಾಯೆ ಮನೆ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ