CrimeNEWSದೇಶ-ವಿದೇಶವಿದೇಶ

ಕೀನ್ಯಾದ ಕ್ರೈಸ್ತ ಪಾದ್ರಿಯೊಬ್ಬರ ಜಮೀನಿನಲ್ಲಿ 47 ಕ್ಕೂ ಅಧಿಕ ಶವಗಳು ಪತ್ತೆ – ಸ್ವರ್ಗದ ಆಸೆಗೆ ಜೀವಂತ ಸಮಾಧಿ

ಜಮೀನಿನಲ್ಲಿ ಪತ್ತೆಯಾದ 47 ಶವಗಳು, ಭಯ ಹುಟ್ಟಿಸುತ್ತೆ ಈ ಸಾವಿನ ಹಿಂದಿರುವ ಕಾರಣ

ವಿಜಯಪಥ ಸಮಗ್ರ ಸುದ್ದಿ

ಕೀನ್ಯಾ: ಪಾದ್ರಿ ಮಾತನ್ನು ನಂಬಿ, ಸ್ವರ್ಗಕ್ಕೆ ಹೋಗುವ ಆಸೆಯಲ್ಲಿ 47ಕ್ಕೂ ಅಧಿಕ ಮಂದಿ ಜೀವಂತ ಸಮಾಧಿಯಾಗಿದ್ದಾರೆ ಎನ್ನುವ ಆಘಾತಕಾರಿ ಸುದ್ದಿಯೊಂದು ಬಯಲಾಗಿದೆ.

ಹೌದು! ಕೀನ್ಯಾದಲ್ಲಿ ಪಾದ್ರಿಯೊಬ್ಬರ ಜಮೀನಿನಲ್ಲಿ ಬರೋಬ್ಬರಿ 47 ಶವಗಳು ಪತ್ತೆಯಾಗಿವೆ. ಒಂದೊಮ್ಮೆ ನೀವು ಸ್ವರ್ಗಕ್ಕೆ ಹೋಗಬಯಸುತ್ತೀರಿ ಎಂದರೆ ಉಪವಾಸವಿರಿ ಬಳಿಕ ಜೀವಂತ ಸಮಾಧಿಯಾಗಿ ಎಂದು ಪಾದ್ರಿ ಸಲಹೆ ನೀಡಿದ್ದರಂತೆ.

ಉಪವಾಸವಿರುವ ನಿಮ್ಮನ್ನು ಸಮಾಧಿ ಮಾಡಿದರೆ ಸ್ವರ್ಗಕ್ಕೆ ಹೋಗುತ್ತೀರಿ, ಯೇಸುವನ್ನು ಭೇಟಿಯಾಗುತ್ತೀರಿ ಎಂದು ಹೇಳಿದ್ದ ಕಾರಣ ಎಲ್ಲರೂ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ಮೂರು ದಿನಗಳಿಂದ ಮೃತದೇಹವನ್ನು ಹೊರತೆಗೆಯುವ ಕಾರ್ಯ ನಡೆಯುತ್ತಿದೆ.

ಕೀನ್ಯಾ ಪೊಲೀಸರು ಒಂದೇ ಕುಟುಂಬದ ಐವರ ಮೃತದೇಹಗಳನ್ನು ಸಮಾಧಿಯಿಂದ ತೆಗೆದಿದ್ದಾರೆ. ಇಲ್ಲಿಯವರೆಗೆ 65 ಸಮಾಧಿಗಳನ್ನು ಪತ್ತೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗಲಿದೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಇನ್ನು ಯಾರಾದರೂ ಸಮಾಧಿಯೊಳಗೆ ಬದುಕಿರಬಹುದೆಂಬ ನಿರೀಕ್ಷೆಯಲ್ಲಿ ಸಮಾಧಿಯನ್ನು ಅಗೆಯುತ್ತಿದ್ದಾರೆ. ಸಿಕ್ಕಿರುವ ಮೃತದೇಹಗಳಲ್ಲಿ ಮಕ್ಕಳೂ ಇದ್ದಾರೆ.

ಈ ವಿಷಯ ಬಹಿರಂಗವಾದ ನಂತರ, ಪೊಲೀಸರು ಪಾಲ್ ಮೆಕೆಂಜಿ ಎಂಬ ಪಾದ್ರಿಯನ್ನು ಬಂಧಿಸಿದ್ದಾರೆ. ಈ ವೇಳೆ ವಿಚಾರಣೆಗೆ ಒಳಪಟ್ಟ ಪಾದ್ರಿ ಆತ್ಮಹತ್ಯೆಗೆ ಅವರನ್ನು ಪ್ರೇರೇಪಿಸಲಿಲ್ಲ ಎಂದು ಹೇಳಿದ್ದಾರೆ. 2019ರಲ್ಲೇ ಚರ್ಚ್​ ಅನ್ನು ಮುಚ್ಚಲಾಗಿದೆ ಎಂದಿದ್ದಾರೆ. ಪೊಲೀಸರು ಈಗ ಎಲ್ಲ ಮೃತ ದೇಹಗಳಿಂದ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸುತ್ತಿದ್ದಾರೆ.

ಇನ್ನು ಇದರಿಂದ ಜನರು ಹಸಿವಿನಿಂದ ಸತ್ತರು ಎಂದು ಸಾಬೀತುಪಡಿಸಬಹುದು. ಈ ಹಿಂದೆ ಇಬ್ಬರು ಮಕ್ಕಳ ಸಾವಿಗೆ ಪಾದ್ರಿ ಪಾಲ್ ಮೆಕೆಂಜಿ ಕಾರಣರಾಗಿದ್ದರು. ನಂತರ ಪೋಷಕರ ದೂರಿನ ಮೇರೆಗೆ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಹೀಗಾಗಿ ಚರ್ಚನ್ನು ಮುಚ್ಚಲಾಗಿತ್ತು ಎಂದು ಹೇಳಲಾಗುತ್ತಿದೆ.

ಒಟ್ಟಾರೆ ಪಾದ್ರಿಯ ಮೌಡ್ಯಕ್ಕೆ ಒಳಗಾದ 47ಕ್ಕೂ ಹೆಚ್ಚು ಮಂದಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದು, ಇದರಿಂದ ಕೀನ್ಯಾದಲ್ಲೂ ಸೂತಕದ ಛಾಯೆ ಮನೆ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ.

Leave a Reply

error: Content is protected !!
LATEST
ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ