NEWS

ಕಬಿನಿ, ಕಾವೇರಿ ನೀರು ತಮಿಳುನಾಡಿಗೆ ಹರಿಸಿ ರೈತರಿಗೆ ದ್ರೋಹ: ಸರ್ಕಾರದ ವಿರುದ್ಧ ಖಾಲಿ ಬಿಂದಿಗೆ ಹಿಡಿದು ರೈತರ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕಬಿನಿ, ಕಾವೇರಿ ನೀರು ತಮಿಳುನಾಡಿಗೆ ಹರಿಸಿ ರೈತರಿಗೆ ಸರ್ಕಾರ ದ್ರೋಹ ಬಗೆದಿದೆ ಎಂದು ಆರೋಪಿಸಿ ಖಾಲಿ ಬಿಂದಿಗೆ ಹಿಡಿದು ರೈತರು ಪ್ರತಿಭಟನೆ ನಡೆಸಿದರು.

ತಮಿಳುನಾಡಿಗೆ ನದಿ ಮೂಲಕ ಹರಿಸುತ್ತಿರುವ ನೀರು ನಿಲ್ಲಿಸಿ ರಾಜ್ಯದ ರೈತರನ್ನು ಉಳಿಸಿ ಕಾವೇರಿ ಭಾಗದ ರೈತರ ಮರಣ ಶಾಸನ ತಪ್ಪಿಸಿ. ರಾಜ್ಯ ಸರ್ಕಾರ ರೈತರಿಗೆ ದ್ರೋಹವೆಸಗಿದ್ದು, ರೈತ ಮುಖಂಡರನ್ನು ಹೊರಗಿಟ್ಟು ನಾಟಕೀಯವಾಗಿ ಸರ್ವ ಪಕ್ಷ ಸಭೆ ನಡೆಸುವ ಕಾರ್ಯಕ್ಕೆ ಧಿಕ್ಕಾರವಿರಲಿ. ಕೂಡಲೇ ನೀರು ನಿಲ್ಲಿಸದಿದ್ದರೆ ರಾಜ್ಯ ವ್ಯಾಪಿ ಚಳವಳಿ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚರಿಕೆ ನೀಡಿದರು.

ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಕನ್ನಡಪರ ಸಂಘಟನೆಗಳು, ಅಮ್ಮಾ ಅದ್ಮೀ ಪಕ್ಷ ಇಂದು ಕುವೆಂಪು ಉದ್ಯಾನವನದಲ್ಲಿ ಸಭೆ ಸೇರಿ ಚರ್ಚಿಸಿ ಪ್ರತಿಭಟನೆ ಮೆರವಣಿಗೆ ಮೂಲಕ ನೀರಾವರಿ ಇಲಾಖೆ ಮುಖ್ಯ ಇಂಜಿನಿಯರ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆದು ಡೆಪ್ಯೂಟಿ ಚೀಫ್ ಇಂಜಿನಿಯರ್ ರಂಗನಾಥ್ ಅವರನ್ನು ಪ್ರತಿಭಟನೆ ಸ್ಥಳಕ್ಕೆ ಕರೆತಂದರು.

ಈ ವೇಳೆ ಮಾತನಾಡಿದ ರಂಗನಾಥ್, ಈಗಾಗಲೇ ಕಬಿನಿ ಕಾವೇರಿಯಿಂದ ನೀರು ಬಿಡುವುದನ್ನು ಕಡಿಮೆ ಮಾಡಿದ್ದೇವೆ ಇವತ್ತಿನ ನಿಮ್ಮ ಹೋರಾಟದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಕಾವೇರಿ ನೀರು ನಮ್ಮದು ಬೇಕೇ ಬೇಕು, ನ್ಯಾಯ ಬೇಕು, ರೈತ ದ್ರೋಹಿ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗುತ್ತಾ ಮೆರವಣಿಗೆ ಹೂರಟ ರೈತರು ಕಾವೇರಿ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಕಚೇರಿಗೆ ನುಗಲು ಯತ್ನಿಸಿದಾಗ ಪೊಲೀಸರು ತಡೆದರು.

ಈ ವೇಳೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ನಾವೇನು ಮುಖ್ಯ ಇಂಜಿನಿಯರ್ ಕಚೇರಿ ದರೋಡೆ ಮಾಡಲು ಬಂದಿಲ್ಲ ಇದು ರಾಜ್ಯದ ರೈತರ ಹಿತ ಶಕ್ತಿ ಕಾಪಾಡುವ ಕಚೇರಿಯಾಗಿದ್ದರೆ ಕೂಡಲೇ ನದಿಗೆ ಹರಿಸುವ ನೀರು ನಿಲ್ಲಿಸಿ ಇಲ್ಲವೇ ಕಚೇರಿ ಬಾಗಿಲು ಮುಚ್ಚಿ ಮನೆಗೆ ಹೋಗಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರು ಹೋರಾಟ ನಡೆಸುತ್ತಿದ್ದರು ರಾಜ್ಯ ಸರ್ಕಾರ ಕಣ್ಣು ಮುಚ್ಚಿ ಕುಳಿತಂತೆ ಕಾಣುತ್ತಿದೆ. ನೀರು ಖಾಲಿಮಾಡಿ ಸಭೆ ನಡೆಸುವ ನಾಟಕವಾಡುತ್ತಿದೆ. ಮಂತ್ರಿಗಳು ರೈತರಿಗೆ ಕಟ್ಟು ನೀರು ಹರಿಸುತ್ತೇವೆ ಎಂದು ಪಾಠ ಹೇಳುತ್ತಾರೆ. ಆದರೆ ತಮಿಳುನಾಡಿಗೆ ನಿರಯಾಸವಾಗಿ ನೀರು ಬಿಡುತ್ತಿದ್ದಾರೆ ಇದು ರಾಜ್ಯದ ರೈತರಿಗೆ ಬಗೆದ ದ್ರೋಹ ಎದು ಕಿಡಿಕಾರಿದರು.

ಆಮ್ ಆದ್ಮೀ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ, ರಾಜ್ಯ ಸರ್ಕಾರ ತುಳಿತಕ್ಕೆ ಒಳಗಾದ ರೈತ ಮುಖಂಡರನ್ನು ಹೊರಗಿಟ್ಟು ರೈತರಿಗೆ ಅನ್ಯಾಯ ಮಾಡುವವರೇ ಸರ್ವ ಪಕ್ಷದ ಸಭೆ ನಡೆಸುವುದು ಎಷ್ಟು ಸಮಂಜಸ? ಎಲ್ಲ ಪಕ್ಷಗಳು ನೀರಿನ ವಿಚಾರದಲ್ಲಿ ರೈತರಿಗೆ ವಂಚನೆ ಮಾಡುತ್ತಲೆ ಬಂದಿದ್ದಾರೆ ಅಂತಹವರೇ ಇಂದು ಸಭೆ ನಡೆಸುತ್ತಿದ್ದಾರೆ ಇವರಿಂದ ರಾಜ್ಯದ ರೈತರಿಗೆ ನ್ಯಾಯ ಸಿಗಲು ಸಾಧ್ಯವೇ ಎಂದು ಗುಡುಗಿದರು.

ರಾಷ್ಟ್ರೀಯ ಜಲನೀತಿಗಾಗಿ ಬಹಳ ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ, ರಾಜ್ಯದ ನೆಲ ಜಲ ವಿಷಯ ಬಂದಾಗ ಒಂದಾಗಿ ಹೋರಾಡುವುದು ರಾಜ್ಯದ ಹಿತರಕ್ಷಣೆಗೆ ಅನುಕೂಲವಾಗುತ್ತದೆ. ಈ ದಿಕ್ಕಿನಲ್ಲಿ ಸರ್ಕಾರ ಯೋಚನೆ ಮಾಡಬೇಕು ಎಂದರು.

ಪ್ರತಿಭಟನೆಯಲ್ಲಿ ಚನ್ನರಾಯಪಟ್ಟಣದ ರೈತ ಮುಖಂಡ ಮೀಸೆ ಮಂಜಣ್ಣ, ಅತ್ತಹಳ್ಳಿ ದೇವರಾಜ್, ಪಿ.ಸೋಮಶೇಖರ್, ಬರಡನಪುರ ನಾಗರಾಜು, ಹಳ್ಳಿಕರೆಹುಂಡಿ ಬಾಗ್ಯರಾಜ್, ಕಿರಗಸೂರ ಶಂಕರ, ಕಮಲಮ್ಮ ಸಿದ್ದೇಶ, ವೆಂಕಟೇಶ, ರವಿ, ಕನ್ನಡ ಸಂಘಟನೆಗಳ ಮಂಜುನಾಥ್, ಅಮ್ಮ್ ಅದ್ಮೀ ಪಕ್ಷದ ಮೋಹನ್ ದಾಸರಿ, ಕುಶಾಲಸ್ವಾಮಿ, ನಂಜಪ್ಪ ಕಾಳೇಗೌಡ, ಮಾಳವಿಕಾ, ರಂಗಯ್ಯ, ರಾಜಶ್ರೀ, ಸಿದ್ದರಾಜು ಹಾಗೂ ನೂರಾರು ರೈತರು ಭಾಗವಹಿಸಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು