NEWSಕೃಷಿನಮ್ಮರಾಜ್ಯ

ಕಬಿನಿ ಜಲಾಶಯ ತುಂಬಲು ಒಂದು ಅಡಿ ಬಾಕಿ, KRSಗೆ ಹೆಚ್ಚಾಯಿತು ಒಳಹರಿವು

ವಿಜಯಪಥ ಸಮಗ್ರ ಸುದ್ದಿ

ಮೈಸೂರು/ಮಂಡ್ಯ: ರಾಜ್ಯದ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದ್ದು, ರಾಜ್ಯದ ನದಿ, ಅಣೆಕಟ್ಟು, ಜಲಾಶಯಗಳು ತುಂಬುತ್ತಿವೆ.

ಅದರಲ್ಲೂ ರಾಜ್ಯದ ಮಂಡ್ಯ ಮತ್ತು ತಮಿಳುನಾಡಿನ ಅನ್ನದಾತರ ಜೀವನದಿ ಕಾವೇರಿಯ ಕೆಆರ್​ಎಸ್​ ಅಣೆಕಟ್ಟೆಗೆ ಒಳ ಹರಿವು ಹೆಚ್ಚಾಗಿದ್ದು, ಇತ್ತ ಕಬಿನಿಯಲ್ಲೂ ನೀರಿನ ಮಟ್ಟ ನಿರಂತರವಾಗಿ ಏರುತ್ತಲೇ ಇದೆ.

ಕಬಿನಿ ಡ್ಯಾಂನ ಗರಿಷ್ಠ ಮಟ್ಟ 84 ಅಡಿಯಿದ್ದು, ಸದ್ಯ ಈಗ 82.65 ಮಟ್ಟ ಏರಿಕೆ ಕಂಡಿದೆ. 14,657 ಕ್ಯೂಸೆಕ್​ ಒಳಹರಿವು ಇದೆ. 20000 ಕ್ಯೂಸೆಕ್​ ನೀರನ್ನು ಹೊರ ಬಿಡಲಾಗುತ್ತಿದೆ.

ಇಂದಿನ ಕಬಿನಿ ಡ್ಯಾಂ ನೀರಿನ ಮಟ್ಟ: ಗರಿಷ್ಠ ಮಟ್ಟ – 84 ಅಡಿ. ಇಂದಿನ ಮಟ್ಟ – 82.65. ಗರಿಷ್ಠ ಸಾಮರ್ಥ್ಯ – 19.52 TMC. ಇಂದಿನ ಸಾಮರ್ಥ್ಯ – 18.52 TMC. ಒಳಹರಿವು : 14657. ಹೊರಹರಿವು : 20000

ಕೆಆರ್‌ಎಸ್ ಅಣಕಟ್ಟೆಗೆ ಒಳಹರಿವಿನಲ್ಲಿ ಭಾರೀ ಹೆಚ್ಚಳ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕೆಆರ್‌ಎಸ್ ಅಣಕಟ್ಟೆಗೆ ಒಳಹರಿವಿನಲ್ಲಿ ಭಾರೀ ಹೆಚ್ಚಳವಾಗಿದೆ.

ನಿನ್ನೆಯಿಂದ ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿದೆ. ಹೀಗಾಗಿ ಮಳೆಯ ಹಿನ್ನೆಲೆ ಕೆಆರ್‌ಎಸ್ ಡ್ಯಾಂಗೆ ನೀರು ಹರಿದು ಬರುತ್ತಿದೆ. 10,121 ಕ್ಯೂಸೆಕ್‌ಗೆ ಒಳಹರಿವು ಏರಿಕೆ ಕಂಡಿದೆ.

ನಿನ್ನೆ 2898 ಕ್ಯೂಸೆಕ್ ಒಳಹರಿವಿತ್ತು. ಆದರಿಂದು 10,121 ಕ್ಯೂಸೆಕ್‌ಗೆ ಏರಿಕೆ ಕಂಡಿದೆ. ಹೀಗಾಗಿ ಕೆಆರ್‌ಎಸ್ ನೀರಿನ ಮಟ್ಟ 105.40 ಅಡಿಗೆ ತಲುಪಿದೆ. ಡ್ಯಾಂ 124.80 ಅಡಿ ಗರಿಷ್ಠ ಮಟ್ಟ ಹೊಂದಿದೆ.

49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ 27.347 ಟಿಎಂಸಿ ನೀರು ಸಂಗ್ರಹವಾಗಿದೆ. ನಾಲೆ ಹಾಗೂ ಕುಡಿಯುವ ನೀರಿಗಾಗಿ 2260 ಕ್ಯೂಸೆಕ್ ನೀರನ್ನ ಹೊರ ಬಿಡಲಾಗುತ್ತಿದೆ.

ಇಂದಿನ ಕೆಆರ್‌ಎಸ್ ನೀರಿನ ಮಟ್ಟ: ಗರಿಷ್ಠ ಮಟ್ಟ – 124.80 ಅಡಿ. ಇಂದಿನ ಮಟ್ಟ – 105.40 ಅಡಿ. ಗರಿಷ್ಠ ಸಾಮರ್ಥ್ಯ – 49.452 ಟಿಎಂಸಿ. ಇಂದಿನ ಸಾಮರ್ಥ್ಯ – 27.347 ಟಿಎಂಸಿ. ಒಳ ಹರಿವು – 10,121 ಕ್ಯೂಸೆಕ್. ಹೊರ ಹರಿವು – 2,260 ಕ್ಯೂಸೆಕ್

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ