NEWSಕೃಷಿನಮ್ಮರಾಜ್ಯ

ಕಬಿನಿ ಜಲಾಶಯ ತುಂಬಲು ಒಂದು ಅಡಿ ಬಾಕಿ, KRSಗೆ ಹೆಚ್ಚಾಯಿತು ಒಳಹರಿವು

ವಿಜಯಪಥ ಸಮಗ್ರ ಸುದ್ದಿ

ಮೈಸೂರು/ಮಂಡ್ಯ: ರಾಜ್ಯದ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದ್ದು, ರಾಜ್ಯದ ನದಿ, ಅಣೆಕಟ್ಟು, ಜಲಾಶಯಗಳು ತುಂಬುತ್ತಿವೆ.

ಅದರಲ್ಲೂ ರಾಜ್ಯದ ಮಂಡ್ಯ ಮತ್ತು ತಮಿಳುನಾಡಿನ ಅನ್ನದಾತರ ಜೀವನದಿ ಕಾವೇರಿಯ ಕೆಆರ್​ಎಸ್​ ಅಣೆಕಟ್ಟೆಗೆ ಒಳ ಹರಿವು ಹೆಚ್ಚಾಗಿದ್ದು, ಇತ್ತ ಕಬಿನಿಯಲ್ಲೂ ನೀರಿನ ಮಟ್ಟ ನಿರಂತರವಾಗಿ ಏರುತ್ತಲೇ ಇದೆ.

ಕಬಿನಿ ಡ್ಯಾಂನ ಗರಿಷ್ಠ ಮಟ್ಟ 84 ಅಡಿಯಿದ್ದು, ಸದ್ಯ ಈಗ 82.65 ಮಟ್ಟ ಏರಿಕೆ ಕಂಡಿದೆ. 14,657 ಕ್ಯೂಸೆಕ್​ ಒಳಹರಿವು ಇದೆ. 20000 ಕ್ಯೂಸೆಕ್​ ನೀರನ್ನು ಹೊರ ಬಿಡಲಾಗುತ್ತಿದೆ.

ಇಂದಿನ ಕಬಿನಿ ಡ್ಯಾಂ ನೀರಿನ ಮಟ್ಟ: ಗರಿಷ್ಠ ಮಟ್ಟ – 84 ಅಡಿ. ಇಂದಿನ ಮಟ್ಟ – 82.65. ಗರಿಷ್ಠ ಸಾಮರ್ಥ್ಯ – 19.52 TMC. ಇಂದಿನ ಸಾಮರ್ಥ್ಯ – 18.52 TMC. ಒಳಹರಿವು : 14657. ಹೊರಹರಿವು : 20000

ಕೆಆರ್‌ಎಸ್ ಅಣಕಟ್ಟೆಗೆ ಒಳಹರಿವಿನಲ್ಲಿ ಭಾರೀ ಹೆಚ್ಚಳ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕೆಆರ್‌ಎಸ್ ಅಣಕಟ್ಟೆಗೆ ಒಳಹರಿವಿನಲ್ಲಿ ಭಾರೀ ಹೆಚ್ಚಳವಾಗಿದೆ.

ನಿನ್ನೆಯಿಂದ ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿದೆ. ಹೀಗಾಗಿ ಮಳೆಯ ಹಿನ್ನೆಲೆ ಕೆಆರ್‌ಎಸ್ ಡ್ಯಾಂಗೆ ನೀರು ಹರಿದು ಬರುತ್ತಿದೆ. 10,121 ಕ್ಯೂಸೆಕ್‌ಗೆ ಒಳಹರಿವು ಏರಿಕೆ ಕಂಡಿದೆ.

ನಿನ್ನೆ 2898 ಕ್ಯೂಸೆಕ್ ಒಳಹರಿವಿತ್ತು. ಆದರಿಂದು 10,121 ಕ್ಯೂಸೆಕ್‌ಗೆ ಏರಿಕೆ ಕಂಡಿದೆ. ಹೀಗಾಗಿ ಕೆಆರ್‌ಎಸ್ ನೀರಿನ ಮಟ್ಟ 105.40 ಅಡಿಗೆ ತಲುಪಿದೆ. ಡ್ಯಾಂ 124.80 ಅಡಿ ಗರಿಷ್ಠ ಮಟ್ಟ ಹೊಂದಿದೆ.

49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ 27.347 ಟಿಎಂಸಿ ನೀರು ಸಂಗ್ರಹವಾಗಿದೆ. ನಾಲೆ ಹಾಗೂ ಕುಡಿಯುವ ನೀರಿಗಾಗಿ 2260 ಕ್ಯೂಸೆಕ್ ನೀರನ್ನ ಹೊರ ಬಿಡಲಾಗುತ್ತಿದೆ.

ಇಂದಿನ ಕೆಆರ್‌ಎಸ್ ನೀರಿನ ಮಟ್ಟ: ಗರಿಷ್ಠ ಮಟ್ಟ – 124.80 ಅಡಿ. ಇಂದಿನ ಮಟ್ಟ – 105.40 ಅಡಿ. ಗರಿಷ್ಠ ಸಾಮರ್ಥ್ಯ – 49.452 ಟಿಎಂಸಿ. ಇಂದಿನ ಸಾಮರ್ಥ್ಯ – 27.347 ಟಿಎಂಸಿ. ಒಳ ಹರಿವು – 10,121 ಕ್ಯೂಸೆಕ್. ಹೊರ ಹರಿವು – 2,260 ಕ್ಯೂಸೆಕ್

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ