NEWSಕೃಷಿನಮ್ಮರಾಜ್ಯ

ಕಬ್ಬಿನ ದರ ನಿಗದಿಗೆ ಆಗ್ರಹ: 3ನೇ ದಿನದ ಸರದಿ ಉಪವಾಸ ಸತ್ಯಾಗ್ರಹ ಯಶಸ್ವಿ- ನಾಳೆಯಿಂದ ನಿರಂತರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ರಾಜಧಾನಿಯ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರ ರೈತರ ಆಹೋ ರಾತ್ರಿ ಧರಣಿ 37ನೇ ದಿನ ಪೂರೈಸಿದೆ‌. ಇತ್ತ ಅದೇ ಸ್ಥಳದಲ್ಲಿ ಕಳೆದ ಮೂರನೇ ದಿನದ ಸರದಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದು ನಾಳೆಯಿಂದ (ಡಿ.29 ) ನಿರಂತರ ಉಪವಾಸ ಸತ್ಯಾಗ್ರಹ ಮಾಡುವ ಎಚ್ಚರಿಕೆಯನ್ನು ಸರ್ಕಾರಕ್ಕೆ ನೀಡಿದ್ದಾರೆ.

ನ್ಯಾಯ ಸಮ್ಮತ ಕಬ್ಬುದರ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ಮೂರು ದಿನದಿಂದ ಐದು ರೈತರಂತೆ ಸರದಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ. ಹೀಗಾಗಿ ಇಂದು ಬೆಳಗಿನಿಂದಲೇ ಆಹಾರ ತ್ಯಜಿಸಿ ಸಂಜೆ 6 ಗಂಟೆ ತನಕ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಕುಮಾರ್ ಬುಬಾಟಿ ಪರಶುರಾಮಡಂಗೆ, ರಾಜು ಧಾರವಾಡಕರ, ಉದಾಯ ಧಾರವಾಡಕರ, ಪರಶುರಾಮ ಮಂಜನ್ನವರ ಈ ಎಲ್ಲ ಹಳಿಯಾಳದ ರೈತರು ಸರದಿ ಉಪವಾಸ ಸತ್ಯಾಗ್ರಹ ಮಾಡಿದರು. ಉಳಿದ ರೈತರು ಹಾಗೂ ರಾಜ್ಯಾಧ್ಯಕ್ಷ ಕುರುಬೂರ್ ಶಾಂತ ಕುಮಾರ್ ಧರಣಿಯಲ್ಲಿ ಭಾಗವಹಿಸಿದರು.

ಈ ವೇಳೆ ಮಾತನಾಡಿದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್, ಕಳೆದ 14 ದಿನಗಳ ಹಿಂದೆ ಧರಣಿ ನಿರತ ರೈತ ಮುಖಂಡರ ಜತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾತುಕತೆ ನಡೆಸಿ ಕಬ್ಬಿನ ದರ ಏರಿಕೆ ಭರವಸೆ ನೀಡಿ, ಈ ತನಕ ಯಾವುದೇ ನಿರ್ಧಾರ ಪ್ರಕಟಿಸಿಲ್ಲ, ಬರಿ ಮಾತಿನ ಭರವಸೆ ಬೇಡ ನುಡಿದಂತೆ ನಡೆಯಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ರೈತರ ಹೋರಾಟವನ್ನು ಲಘುವಾಗಿ ಕಾಣಬಾರದು ವಚನಭ್ರಷ್ಟರಾಗಬಾರದು, ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ನಾಳೆಯಿಂದ ನಿರಂತರ ಉಪವಾಸ ಕೈಗೊಳ್ಳಲಾಗುವುದು. ಮುಖ್ಯಮಂತ್ರಿಗಳು ಕಬ್ಬು ದರ ಏರಿಕೆ ಮಾಡಲು ಸರ್ಕಾರಕ್ಕೆ ಸಾಧ್ಯವಿಲ್ಲ ಎನ್ನುವಂಥಾದರೆ ಬಹಿರಂಗವಾಗಿ ತಿಳಿಸಿ ಎಂದು ಒತ್ತಾಯಿಸಿದರು.

ಇನ್ನು ರಾತ್ರಿ ವೇಳೆಯಲ್ಲಿ ಮುಂಜಾಗ್ರತಾ ಕ್ರಮವೆಂದು ರೈತ ಮುಖಂಡರನ್ನು ಬಂಧಿಸುವುದು, ಚಳವಳಿಯನ್ನು ದಿಕ್ಕು ತಪ್ಪಿಸುವುದು. ಪೊಲೀಸ್ ಬಲದ ಮೂಲಕ ಹತ್ತಿಕುವುದು ಸರ್ಕಾರಕ್ಕೆ ಶೋಭೆತರುವುದಿಲ್ಲ. ಕಬ್ಬು ಬೆಳೆಗಾರ ರೈತರಿಗೆ ಯಾವುದೇ ಅಡಚಣೆ ಇಲ್ಲದೆ ಜಾಥಾ ನಡೆಸಲು ಅವಕಾಶ ನೀಡಲಿ, ನಮ್ಮ ಶಕ್ತಿ ತೋರುತ್ತೇವೆ, ಸದಾ ರೈತಪರ ಎನ್ನುವ ಈ ಸರ್ಕಾರ ರೈತರ ಕಣ್ಣಿಗೆ ಮಣ್ಣೆರೆಚಬಾರದು ಎಂದು ಎಚ್ಚರಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ