NEWSಕೃಷಿನಮ್ಮಜಿಲ್ಲೆ

ಕಬ್ಬಿನ ಬಾಕಿ ಹಣ ಪಾವತಿಸದ ಬಣ್ಣಾರಿ ಸಕ್ಕರೆ ಕಾರ್ಖಾನೆ ಉಪ ಕಚೇರಿಗೆ ಬೀಗ ಜಡಿದು ರೈತರ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕಬ್ಬಿನ ಬಾಕಿ ಹಣ ಪಾವತಿಸದೆ ಕಾರ್ಖಾನೆಗೆ ಕಬ್ಬು ಕಟಾವು ಅನುಮತಿ ನೀಡಬಾರದು ಎಂದು ಬಣ್ಣಾರಿ ಸಕ್ಕರೆ ಕಾರ್ಖಾನೆ ಉಪ ಕಚೇರಿಗೆ ಬೀಗ ಜಡಿದು ರೈತರು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಕಬ್ಬು ಬೆಳೆಗಾರರ ಸಂಘದ ಮೈಸೂರು ತಾಲೂಕು ಘಟಕದ ವತಿಯಿಂದ ಬಣ್ಣಾರಿ ಅಮ್ಮನ್ ಕಾರ್ಖಾನೆಯ ಮೈಸೂರು ತಾಲೂಕಿನ ಕಡಕೋಳದಲ್ಲಿರುವ ಡಿವಿಜನ್ ಆಫೀಸ್‌ಗೆ ಗುರುವಾರ ಬೀಗ ಜಡಿದು ಪ್ರತಿಭಟನೆ ನಡೆಸಿ ಕಾರ್ಖಾನೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ವರ್ಷದ ಬಾಕಿ ಹಣ ಒಂದು ಟನ್ ಕಬ್ಬಿಗೆ 150 ರೂ. ನೀಡಿ ನಂತರ ಕಾರ್ಖಾನೆ ಕಬ್ಬು ಅರೆಯುವುದನ್ನು ಪ್ರಾರಂಭ ಮಾಡಬೇಏಖು. 24.07.2023ರಂದು ಮೈಸೂರಿನ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲೆಯ ರೈತರು ಮತ್ತು ಕಾರ್ಖಾನೆಯವರ ನಡುವೆ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಆದೇಶ ಮಾಡಿದರು ಸಹ ಕಾರ್ಖಾನೆ ಅವರು ಹಣ ನೀಡದೆ ಕಾರ್ಖಾನೆ ಆರಂಭಿಸಿ ರೈತರಿಗೆ ವಂಚನೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಕಳೆದ ವರ್ಷದ ಬಾಕಿ ಹಣವನ್ನು ಕೊಟ್ಟು ನಂತರ ಕಾರ್ಖಾನೆ ಪ್ರಾರಂಭ ಮಾಡಲಿ ಅಲ್ಲಿಯವರೆಗೂ ಕಬ್ಬು ಕಟಾವು ಮಾಡುವುದು ಬೇಡ ಎಂದು ಬಣ್ಣಾರಿ ಕಾರ್ಖಾನೆಯ ಎಲ್ಲ ತಾಲೂಕಿನ ಶಾಖ ಕಚೇರಿಗಳಿಗೂ ಬೀಗ ಜಡಿದು ಸಂಜೆ ಒಳಗೆ ಹಣ ನೀಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ನಾಳೆಯಿಂದ ಕಾರ್ಖಾನೆ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್ ಎಚ್ಚರಿಕೆ ನೀಡಿದರು.

ವಿಷಯ ತಿಳಿದು ಸ್ಥಳಕ್ಕೆ ಬಂದ ಭಣಾರಿ ಕಾರ್ಖಾನೆಯ ವಿಭಾಗೀಯ ಅಧಿಕಾರಿ ವೈ.ಎನ್.ನಾಗರಾಜ್ ನಿಮ್ಮ ಬೇಡಿಕೆಯನ್ನು ಮೇಲಧಿಕಾರಿಗಳ ಗಮನಕ್ಕೆ ತರುತ್ತೇವೆ ಎಂದು ಕೇಳಿದಾಗ ನಾಳೆಯಿಂದ ಕಾರ್ಖಾನೆ ಹಳೆಯ ಬಾಕಿ ಹಣವನ್ನು ನೀಡುವವರೆಗೂ ಕಚೇರಿಯನ್ನು ತೆರೆಯುವುದಿಲ್ಲ ಎಂದು ಒಪ್ಪಿದರು.

ಈ ವೇಳೆ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದಾಗ ಕಚೇರಿಯ ಕಾರ್ಯನಿರ್ವಹಣಾಧಿಕಾರಿ ನಾಗೇಶ್ ಬಂದು 150 ರೂಪಾಯಿಗೆ ಸಂಬಂಧಪಟ್ಟಂತೆ ನ್ಯಾಯಾಲಯದಲ್ಲಿ ಇರುವುದರಿಂದ ನಾವು ಏನು ಮಾಡಲು ಸಾಧ್ಯವಿಲ್ಲ ಎಂದಾಗ ರೈತರು ಹಾಗಾದರೆ ನೀವು ರೈತರಿಗೆ ಹಳೆ ಬಾಕಿ ಹಣ ನೀಡದೆ ಕಾರ್ಖಾನೆ ತೆರೆಯಲು ಅನುಮತಿ ನೀಡಲಾಗಿದೆಯೇ ಎಂದು ಪ್ರಶ್ನಿಸಿ ಮಾತಿನ ಚಕಮಕಿ ನಡೆಯಿತು.

ನಂತರ ನಾಗೇಶ್ ಅವರು ನಿಮ್ಮ ಬೇಡಿಕೆಯ ಬಗ್ಗೆ ಕಾರ್ಖಾನೆಯ ಆಡಳಿತ ಮಂಡಳಿ ಗಮನಕ್ಕೆ ತಂದು ಇಂದು ಸಂಜೆಯೊಳಗೆ ಬಗೆಹರಿಸುವುದಾಗಿ ಭರವಸೆ ನೀಡಿದ ಬಳಿಕ ನಾಳೆವರೆಗೆ ಗಡುವು ನೀಡಿ ಪೊಲೀಸ್‌ ವೃತ್ತ ನಿರೀಕ್ಷಕರಾದ ಶೇಖರ್ ಅವರ ಸಮ್ಮುಖದಲ್ಲಿ ಚರ್ಚಿಸಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಕ್ತಾಯಗೊಳಿಸಲಾಯಿತು.

ಪ್ರತಿಭಟನೆಯಲ್ಲಿ ಚಾಮರಾಜನಗರ ಜಿಲ್ಲಾ ಉಪಾಧ್ಯಕ್ಷರಾದ ಪಟೇಲ್ ಶಿವಮೂರ್ತಿ, ಮೈಸೂರು ತಾಲೂಕು ಅಧ್ಯಕ್ಷ ಲಕ್ಷ್ಮಿಪುರ ವೆಂಕಟೇಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಕಮಲಮ್ಮ, ಮುಖಂಡರಾದ ಕುರುಬೂರು ಪ್ರದೀಪ್, ಹೆಗ್ಗೂರು ರಂಗರಾಜು, ಅಂಬಳೆ ಮಂಜುನಾಥ್, ವರಕೋಡು ನಾಗೇಶ್, ಜಯರಾಮು, ಮಾರ್ಬಳ್ಳಿ ನೀಲಕಂಠಪ್ಪ,ವಾಜಮಂಗಲ ಮಾದೇವು, ಮಾಲಿಂಗ ನಾಯಕ, ನಾಗರಾಜು, ಹೆಗ್ಗೋಟಾರ ಶಿವ ಸ್ವಾಮಿ, ಉಡಿಗಾಲ ರೇವಣ್ಣ, ಸುಂದರಪ್ಪ, ಕುರುಬೂರು ಜಗ್ಗೇಶ್ ಭಾಗವಹಿಸಿದ್ದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ