NEWSನಮ್ಮಜಿಲ್ಲೆರಾಜಕೀಯ

ಕುಮಾರಣ್ಣ, ಜೆಡಿಎಸ್ ಕಾರ್ಯಕರ್ತರಿಗೆ ಯಾವತ್ತೂ ಮೋಸ ಮಾಡಲ್ಲ: ತಿ.ನರಸೀಪುರ ಕ್ಷೇತ್ರದ ಶಾಸಕ ಅಶ್ವಿನ್ ಕುಮಾರ್ ಸ್ಪಷ್ಟನೆ

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ನನಗೆ ರಾಜಕೀಯವಾಗಿ ಜನ್ಮ ನೀಡಿದ ಜೆಡಿಎಸ್ ಪಕ್ಷವನ್ನು ಎಂದಿಗೂ ತೊರೆಯುವುದಿಲ್ಲ ಎಂದು ಶಾಸಕ ಎಂ.ಅಶ್ವಿನ್ ಕುಮಾರ್ ಹೇಳಿದ್ದಾರೆ.

ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷದಿಂದ ಬಂದಿದ್ದೇನೆ, ಜೆಡಿಎಸ್ ನಲ್ಲೇ ಇರುತ್ತೇನೆ ನಮ್ಮ ಪಕ್ಷ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ಮಾಧ್ಯಮಗಳಲ್ಲಿ ಹರಡುತ್ತಿರುವ ವದಂತಿಗಳಿಗೆ ತೆರೆ ಎಳೆದರು.

ಮಾಧ್ಯಮಗಳಲ್ಲಿ ಅಶ್ವಿನ್ ಕುಮಾರ್ ಕಾಂಗ್ರೆಸ್ ಸೇರಲು ತುದಿಗಾಲಿನಲ್ಲಿ ನಿಂತಿದ್ದಾರೆ ಎಂದು ಬರುತ್ತಿದೆ. ಅಶ್ವಿನ್ ಕುಮಾರ್ ಕಾಂಗ್ರೆಸ್ ಸೇರ್ತಾರೆ ಎನ್ನುವುದು ಶುದ್ಧ ಸುಳ್ಳು. ನನ್ನ ಮೇಲೆ ಅಪಪ್ರಚಾರ ಮಾಡಲು ಮಾಡುತ್ತಿರುವ ಪಿತೂರಿ ಇದು. ನಾನು ಯಾವುದೇ ಕಾರಣಕ್ಕೂ ಜೆಡಿಎಸ್ ಪಕ್ಷ ತೊರೆಯಲ್ಲ ಎದು ಸ್ಪಷ್ಟನೆ ನೀಡಿದರು.

ಇನ್ನು ಕುಮಾರಣ್ಣ ಮತ್ತು ಜೆಡಿಎಸ್ ಕಾರ್ಯಕರ್ತರಿಗೆ ಯಾವತ್ತೂ ಮೋಸ ಮಾಡಲ್ಲ. ನಾನು ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಎಲ್ಲೋ ಇದ್ದ ನನ್ನನ್ನು ಶಾಸಕನಾಗಿ ಆಯ್ಕೆ ಮಾಡಿದ್ದೂ ಕುಮಾರಣ್ಣ. ನನ್ನ ರಾಜಕೀಯ ಗುರುಗಳು ಕುಮಾರಸ್ವಾಮಿ ಯವರು. ಅವರು ಮತ್ತು ಪಕ್ಷವನ್ನು ಬಿಟ್ಟು ನಾನು ಎಲ್ಲಿಗೂ ಹೋಗುವುದಿಲ್ಲ ಎಂದು ಹೇಳಿದರು.

ಸದ್ಯದಲ್ಲಿಯೇ ಜಿಲ್ಲಾ ಪಂಚಾಯಿತಿ ಹಾಗೂ ತಾಪಂ ಚುನಾವಣೆಗೆ ಸಜ್ಜಾಗುವಂತೆ ಕಾರ್ಯಕರ್ತರಿಗೆ ತಿಳಿಸಿದ ಅವರು, ವಿಪಕ್ಷದವರು ಮತ್ತು ಆ ಪಕ್ಷದ ಕಾರ್ಯಕರ್ತರು ಜಿಪಂ ಮತ್ತು ತಾಪಂ ಚುನಾವಣೆ ಮುಂದಿಟ್ಟುಕೊಂಡು ಸುಳ್ಳಿನ ಸರಮಾಲೆಯನ್ನೆ ಹಬ್ಬಿಸುತ್ತಿದ್ದಾರೆ ಅವರ ಯಾರ ಮಾತಿಗೂ ಕಿವಿ ಕೊಡಬಾರದು ಎಂದು ಸಲಹೆ ನೀಡಿದರು.

ಇನ್ನು ಈ ಹಿಂದೆಯೂ ಬಿಜೆಪಿಗೆ ಅನೇಕರು ಸೇರ್ಪಡೆಯಾಗುವಂತೆ ಸಲಹೆ ನೀಡಿದ್ದರೂ ನನ್ನ ನಿಷ್ಠೆ ಜೆಡಿಎಸ್ ಪಕ್ಷಕ್ಕೆ ಎಂದು ಹೇಳಿದ್ದೆ. ಆದ್ದರಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಚಿಂತೆಯು ಮಾಡಿಲ್ಲ. ಜತೆಗೆ ನಾನು ಯಾವುದೇ ಮಾಧ್ಯಮಗಳ ಮುಂದೆ ಜೆಡಿಎಸ್ ಪಕ್ಷ ಬಿಟ್ಟು ಕಾಂಗ್ರೆಸ್‌ ಸೇರುತ್ತೇನೆ ಎಂದು ಹೇಳಿಕೆ ನೀಡಿಲ್ಲದಿದ್ದರೂ ಕೆಲವು ಮಾಧ್ಯಮಗಳು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು