NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಕರ್ನಾಟಕವನ್ನು ಲಂಚ ಮುಕ್ತ ಮಾಡುತ್ತೇವೆ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಪಥ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕವನ್ನು ಲಂಚ ಮುಕ್ತ ರಾಜ್ಯವನ್ನಾಗಿ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಪಥ ಮಾಡಿದ್ದಾರೆ.

ಮಂಗಳವಾರ ನಗರದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ತಾರತಮ್ಯ ಧೋರಣೆ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಯಾರೂ ಲಂಚ ಕೇಳಬಾರದು. ಲಂಚ ಕೇಳದೆ ಕೆಲಸ ಮಾಡಿಕೊಡಬೇಕು. ನಾವು ಕಾಲ್ ಸೆಂಟರ್ ತೆರೆಯುತ್ತೇವೆ, ನಮ್ಮ ಕಾರ್ಯಕರ್ತರು ಲಂಚ ಕೇಳಿದರೂ ಕೇಸ್ ಹಾಕೋದೇ. ಲಂಚ ಮುಕ್ತ ಕರ್ನಾಟಕ ಆಗಬೇಕು ಎಂದು ಹೇಳಿದರು.

ಇನ್ನು 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಪಡೆಯುವ ಸಂಬಂಧ ನೋಂದಣಿ ಆರಂಭ ಆಗಿದೆ. ಬಹಳ ಆತುರಪಡಬೇಡಿ, ನೂಕುನುಗ್ಗಲು ಮಾಡಬೇಡಿ ಎಲ್ಲರಿಗೂ ಜುಲೈ ಒಂದರಿಂದ ಸೌಲಭ್ಯಸಿಗಲಿದೆ ಆದರೆ ನೋಂದಣಿ ಕಡ್ಡಾಯವಾಗಿ ಮಾಡಿಸಿ ಇನ್ನೂ ಟೈ ಇದೆ ಎಂದರು.

ಸರ್ವರ್ ಕೂಡ ಡೌನ್‌ಆಗಿದೆ ಇದರಿಂದ ಗೃಹಲಕ್ಷ್ಮಿ ಯೋಜನೆಗೆ ನಾವು ಸ್ವಲ್ಪ ಟೈಮ್ ತೆಗೆದುಕೊಂಡಿದ್ದೇವೆ. ನಮ್ಮ ಕಾರ್ಯಕರ್ತರು ಪಕ್ಷ ಬೇಧ ಮರೆತು ಎಲ್ಲರಿಗೂ ಸೌಲಭ್ಯ ಕೊಡಿಸುವಲ್ಲಿ ಮುಂದಾಗಬೇಕು ಆದರೆ, ಬೇಡ ಅಂದೋರಿಗೆ ಬೇಡ, ಬೇಕು ಅಂದೋರಿಗೆ ಕೊಡೋಣ ಎಂದರು.

ರಾಮಲಿಂಗಾರೆಡ್ಡಿಯವರ ಮನೆಯ ಹೆಂಗಸರು ಬಸ್‍ನಲ್ಲಿ ಓಡಾಡಲ್ಲ ಅಂದ್ರೆ ಬೇಡ. ನಾರಾಯಣಸ್ವಾಮಿ ನಿಮ್ಮ ಮನೆಯವರನ್ನು ಕರೆದುಕೊಂಡು ಓಡಾಡಿ. ನಮ್ಮ ಮನೆಯವರು ಬೇಕಾದ್ರೂ ಅರ್ಜಿ ಹಾಕಲಿ ನಾನು ಬೇಡ ಎನ್ನಲ್ಲ. ಎರಡು ಸಾವಿರ ಬೇಕು, ಸಂಸಾರ ನಡೆಸಬೇಕು ಅಂತಿದ್ರೆ ಅರ್ಜಿ ಹಾಕಿಕೊಳ್ಳಲಿ ಎಂದು ಡಿಸಿಎಂ ತಿಳಿಸಿದರು.

ಇನ್ನು ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡ್ತೀವಿ ಅಂತ ಹೇಳಿದ್ದರು. ಪುಕ್ಸಟ್ಟೆ ಅಲ್ಲ, ಕಾಸು ಕಟ್ಟಿಸಿಕೊಂಡು ಕೊಡೋದು. ಈಗ ಎಫ್‍ಸಿಐನಿಂದ ರದ್ದು ಮಾಡಿದ್ದಾರೆ. ಒಂದು ಕಾಳು ಕಡಿಮೆ ಆದ್ರೂ ತೆಗೆದುಕೊಳ್ಳಬೇಡಿ ಅಂತ ಯಡಿಯೂರಪ್ಪ, ಬೊಮ್ಮಾಯಿ ಹೇಳ್ತಿದ್ದಾರೆ. ನಮ್ಮ ಯುವಕರಿಗೆ ಇನ್ನೂ ಉದ್ಯೋಗ ಕೊಡಿಸಿಲ್ಲ ನೀವು. ರೈತರ ಆದಾಯ ಯಾಕೆ ಡಬಲ್ ಮಾಡಲಿಲ್ಲ. 15 ಲಕ್ಷ ಯಾಕೆ ಹಾಕಿಸಲಿಲ್ಲ. ಇದರ ವಿರುದ್ಧ ಮೊದಲು ಪ್ರತಿಭಟನೆ ಮಾಡಬೇಕು ಎಂದು ವಾಗ್ದಾಳಿ ನಡೆಸಿದರು.

ಒಬ್ಬೊಬ್ಬರು ಒಂದೊಂದು ಮಾತಾಡೋದು. ಅಶೋಕ್.. ಓ ಚಕ್ರವರ್ತಿಯವರು ಮಾತಾಡ್ತಾರೆ. ಪಾಪ ಚಕ್ರವರ್ತಿ ನಮ್ಮೂರಿಗೆ ಬಂದಿದ್ರು. ಸಾಮ್ರಾಟ್ ಅಶೋಕ್ ಅವರು ಬಂದಿದ್ದರು ಎಂದು ಇದೇ ವೇಳೆ ಆರ್. ಅಶೋಕ್ ವಿರುದ್ಧ ಡಿಕೆಶಿ ವ್ಯಂಗ್ಯವಾಡಿದರು.

ಇನ್ನು ದೇಶದ ಮತ್ತು ರಾಜ್ಯದ ಜನರಿಗೆ ಕೊಟ್ಟ ಭರವಸೆಯನ್ನು ಈಡೇರಿಸದ ಬಿಜೆಪಿ ಸರ್ಕಾರ ಈಗ ಈಡೇರಿಸುವ ಕೆಲಸಕ್ಕೆ ಕೈ ಹಾಕಿರುವ ನಮಗೂ ಅಡ್ಡಗಾಲು ಹಾಕುತ್ತಿದೆ. ಇದೇ ಬಿಜೆಪಿಯ ನಡೆ ಎಂದು ಕಿಡಿಕಾರಿದರು. ಪ್ರತಿಭಟನೆಯಲ್ಲಿ ತಟ್ಟೆ ಬಡಿದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಬಿಪಿಎಲ್‌ ಕುಟುಂಬದ ಪ್ರತೀ ಸದಸ್ಯನಿಗೂ 10 ಕೆಜಿ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಗೆ ಅಡ್ಡಗಾಲು ಹಾಕುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ  ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿದ್ದ ಯುಪಿಎ ಸರ್ಕಾರದ ಅವಧಿಯಲ್ಲಿ ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದು ಆಹಾರವನ್ನು ಪ್ರತಿಯೊಬ್ಬರ ಹಕ್ಕನ್ನಾಗಿ ಮಾಡಲಾಯಿತು. ಕಾಂಗ್ರೆಸ್‌ ಪಕ್ಷ ನೀಡಿದ್ದ ಪ್ರತಿಯೊಂದು ಭರವಸೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ.

ಆದರೆ, ಅಧಿಕಾರ ಸಿಗದೆ ಹತಾಶೆಯಲ್ಲಿರುವ ಬಿಜೆಪಿ ಸರ್ಕಾರ ನ್ಯಾಯಯುತವಾಗಿ ನಮಗೆ ಸಲ್ಲಬೇಕಾದ ಅಕ್ಕಿ ನೀಡದೆ ರಾಜ್ಯ ಸರ್ಕಾರದ ಹಕ್ಕನ್ನು ಕಸಿಯುತ್ತಿದೆ. ಹೊಟ್ಟೆ ತುಂಬಿದ ಬಿಜೆಪಿ ಸರ್ಕಾರಕ್ಕೆ ಬಡವರ ಹಸಿವು ಅರ್ಥವಾಗುತ್ತಿಲ್ಲ.
ಕನ್ನಡಿಗರ ಆಕ್ರೋಶವನ್ನು ದಿಲ್ಲಿಗೆ ತಲುಪಿಸಬೇಕಿದೆ.

ಈ ನಿಟ್ಟಿನಲ್ಲಿ ಇಂದು ರಾಜ್ಯಾದ್ಯಂತ ಹೋರಾಟ ನಡೆಯುತ್ತಿದ್ದು, ಮಳೆ, ಚಳಿಯನ್ನು ಲೆಕ್ಕಿಸದೆ ಅನೇಕರು ಫ್ರೀಡಂ ಪಾರ್ಕ್‌ಗೆ ಬಂದು ನಮ್ಮ ಹೋರಾಟಕ್ಕೆ ಕೈ ಜೋಡಿಸಿದ್ದಾರೆ ಎಂದು ಡಿಸಿಎಂ ಡಿಕೆಶಿ ಹೇಳಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ