NEWSದೇಶ-ವಿದೇಶನಮ್ಮರಾಜ್ಯ

ಕರ್ನಾಟಕ – ಆಂಧ್ರ ಗಡಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸೇವೆ ಹೆಚ್ಚಿಸಿ: ಎರಡೂ ನಿಗಮಗಳ ಎಂಡಿಗಳಿಗೆ ಪ್ರಯಾಣಿಕರ ಒತ್ತಾಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸೆ ಸಾರಿಗೆ ನಿಗಮದ ಬಸ್‌ಗಳು ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿ ಭಾಗದ ಹೆಚ್ಚಾಗಿ ಸಂಚರಿಸದಿರುವುದರಿಂದ ಗಡಿಯಲ್ಲಿರುವ ಮಂದಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗಲು ತುಂಬ ಸಮಸ್ಯೆ ಎದುರಿಸುತ್ತಿದ್ದಾರೆ. ಹೀಗಾಗಿ ಎರಡೂ ರಾಜ್ಯಗಳ ಸಾರಿಗೆ ಎಂಡಿಗಳು ಗಡಿಬಾಗಗಳಲ್ಲಿ ಬಸ್‌ಸೇವೆಗಳನ್ನು ಹೆಚ್ಚಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಶ್ರೀಸಾಯಿ ಎಂಬುವರು ಮನವಿ ಮಾಡಿದ್ದಾರೆ.

ಅದರಲ್ಲೂ ಪ್ರಮುಖವಾಗಿ ಬೆಂಗಳೂರಿನಿಂದ – ಯಲಹಂಕ – ಚಿಂತಾಮಣಿ – ಮದನಪಲ್ಲಿ – ಪೈಲರ್ – ತಿರುಪತಿ ಮಾರ್ಗವಾಗಿ ಕಡಪ – ಮದನಪಲ್ಲಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳ ನಿಯಮಿತ ಸೇವೆ ತೀರಾ ಕಡಿಮೆಯಿದೆ. ಹೀಗಾಗಿ ಈ ಮಾರ್ಗಗಳಲ್ಲಿ ಖಾಸಗಿ ಬಸ್‌ಗಳಿಂದ ಪ್ರಯಾಣಿಕರು ಹಲವಾರು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ಬೆಂಗಳೂರಿನಿಂದ – ಚಿಕ್ಕಬಳ್ಳಾಪುರ ವಿಭಾಗದ ಚಿಂತಾಮಣಿ – ಮದನಪಲ್ಲಿ ಪೈಲರ್ ತಿರುಪತಿ ಮಾರ್ಗವಾಗಿ ಕಡಪ ಮದನಪಲ್ಲಿ ಕರ್ನಾಟಕ ಮತ್ತು ಆಂಧ್ರ ಪ್ರದೇಶದ ಗಡಿಗಳಾಗಿದ್ದು ಈ ಭಾಗದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಭಾರಿ ಬೇಡಿಕೆ ಇದೆ.

ಈ ಮಾರ್ಗಗಳಲ್ಲಿ ಖಾಸಗಿ ಬಸ್‌ಗಳು ಇವೆ. ಆದರೆ, ಬೆಂಗಳೂರಿನಿಂದ ಕಡಪ – ಮದನಪಲ್ಲಿಗೆ ಸಂಚರಿಸಬೇಕಿರುವ ಸಾರ್ವಜನಿಕರಿಗೆ ಹೊರೆಯಾಗುವಂತಹ ಪ್ರಯಾಣ ದರ ವಿಧಿಸುತ್ತಿದ್ದಾರೆ. ಇದರಿಂದ ಪ್ರಯಾಣಿಕರು ಹೆಚ್ಚು ಹಣ ಕೊಟ್ಟು ಪ್ರಯಾಣಿಸುವ ಸ್ಥಿತಿ ಬಂದಿದೆ.

ಹೀಗಾಗಿ ಚಿಂತಾಮಣಿ ಸಾರಿಗೆ ಘಟಕದಿಂದ ಅಂತಾರಾಜ್ಯ ಮಾರ್ಗಗಳಿಗೆ ಯಲಹಂಕ – ಚಿಂತಾಮಣಿ – ಮದನಪಲ್ಲಿ – ಪೈಲರ್ ತಿರುಪತಿ ಮಾರ್ಗವಾಗಿ, ಬೆಂಗಳೂರಿನಿಂದ ಕಡಪ – ಮದನಪಲ್ಲಿ – ತಿರುಪತಿಗೆ ಕೆಎಸ್ಆರ್ಟಿಸಿ ಬಸ್ ಸಂಖ್ಯೆಗಳನ್ನು ಹೆಚ್ಚಿಸಬೇಕು. ಇದರಿಂದ ಈ ಮಾರ್ಗವಾಗಿ ಪ್ರಯಾಣಿಸುವ ಸಾರ್ವಜನಿಕರಿಗೂ ಅನುಕೂಲವಾಗಲಿದ್ದು, ಖಾಸಗಿ ಬಸ್‌ಗಳಲ್ಲಿ ನಡೆಯುತ್ತಿರುವ ಸುಲಿಗೆಯನ್ನು ತಪ್ಪಿಸಬಹುದಾಗಿದೆ.

ವಾರದ ಕೊನೆ ಮತ್ತು ಹಬ್ಬ ಹರಿದಿನಗಳೂ ಸೇರಿದಂತೆ ಸಾಮಾನ್ಯ ದಿನಗಳಲ್ಲೂ ಬಸ್‌ ಸೇವೆ ಒದಗಿಸುವ ಮೂಲಕ ಅಂತಾರಾಜ್ಯ ಕೆಎಸ್‌ಆರ್‌ಟಿಸಿ ನಿಯಮಿತ ಸೇವಾ ಸಮಸ್ಯೆಗಳನ್ನು ಪರಿಹರಿಸಿ. ಕರ್ನಾಟಕ ಮತ್ತು ಆಂಧ್ರ ಗಡಿಗಳಿಂದ ಅಂತಾರಾಜ್ಯ ಪರಸ್ಪರ ಒಪ್ಪಂದದ ಕೆಎಸ್‌ಆರ್‌ಟಿಸಿ ಮತ್ತು ಎಪಿಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ ಮಾಡಿಕೊಡಿ ಎಂದು ವಿನಂತಿಸಿದ್ದಾರೆ ಶ್ರೀಸಾಯಿ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ