NEWSನಮ್ಮಜಿಲ್ಲೆನಮ್ಮರಾಜ್ಯ

ಕರ್ನಾಟಕ ಬಂದ್‌: ಪ್ರಯಾಣಿಕರಿಲ್ಲದೇ ಖಾಲಿಯಾಗಿಯೇ ಓಡಾಡುತ್ತಿರುವ ಸಾರಿಗೆ ಬಸ್‌ಗಳು- ಕೋಟ್ಯಂತರ ರೂ.ನಷ್ಟ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಶುಕ್ರವಾರವಾದ ಇಂದು ಕರ್ನಾಟಕ ಬಂದ್​ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕವಾಘಿ ಇಡೀ ರಾಜ್ಯವೇ ಸ್ತಬ್ಧಗೊಂಡಿರುವುದರಿಂದ ಸಾರಿಗೆ ಬಸ್‌ಗಳು ಪ್ರಯಾಣೀಕರಿಲ್ಲದೆ ಖಾಲಿಯಾಗಿಯೇ ಓಡಾಡುತ್ತಿವೆ.

ನೂರಾರು ಸಂಘಟನೆಗಳು ರಸ್ತೆಗಿಳಿದಿರುವುದರಿಂದ ಬಂದ್​ಗೆ ಸ್ವಯಂಪ್ರೇರಿತರಾಗಿ ನಾಡಿನ 7 ಕೋಟಿ ಜನರು ಸಂಪೂರ್ಣ ಬೆಂಬಲ ನೀಡುತ್ತಿದ್ದಾರೆ. ಹೀಗಾಗಿ ಮಂಗಳೂರು ಭಾಗ ಹೊರತುಪಡಿಸಿ ಇಡೀ ರಾಜ್ಯವೇ ಸ್ತಬ್ಧವಾಗಿದೆ. ಈ ಮೂಲಕ ಬಂದ್​ ಯಶಸ್ವಿಯಾಗುತ್ತಿದೆ.

ಇದರ ನಡುವೆಯೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಸ್‌ಗಳಲ್ಲಿ ಶೇ.40ರಷ್ಟು ಬಸ್‌ಗಳನ್ನು ರಸ್ತೆಗಿಳಿಸಲಾಗಿದೆ. ಆದರೆ, ಆ ಬಸ್‌ಗಳೂ ಕೂಡ ಪ್ರಯಾಣಿಕರಿಲ್ಲದೆ, ಒಬ್ಬಿಬ್ಬರು ಪ್ರಯಾಣಿಕರನ್ನೇ ಕರೆದುಕೊಂಡು ಹೋಗುತ್ತಿವೆ. ಇದರಿಂದ ಸಾರಿಗೆ ನಿಗಮಕ್ಕೆ ಕೋಟ್ಯಂತರ ರೂಪಾಯಿ ನಷ್ಟವೂ ಆಗುತ್ತಿದೆ ಎಂದು ಹೆಸರೇಳಲಿಚ್ಛಿಸದ ಅಧಿಕಾರಿಯೊಬ್ಬರು ವಿಜಯಪಥಕ್ಕೆ ತಿಳಿಸಿದ್ದಾರೆ.

ಕುರುಬೂರು ಶಾಂತಕುಮಾರ್‌ ಆಕ್ರೋಶ: ಪ್ರಮುಖವಾಗಿ ಬೆಂಗಳೂರಿನ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಆಗುತ್ತಿರುವುದು ಕಾವೇರಿ ನದಿ ನೀರಿನಿಂದ. ಈ ಹಿನ್ನೆಯಲ್ಲಿ ಪ್ರಸ್ತುತ ಬೆಳೆ ಬೆಳೆಯುವುದಕ್ಕೆ ನೀರಿಲ್ಲ. ಇನ್ನು ಕುಡಿಯಲಿಕ್ಕೂ ನೀರಿಲ್ಲದ ಪರಿಸ್ಥಿತಿಗೆ ರಾಜ್ಯವನ್ನು ಅದರಲ್ಲೂ ಬೆಂಗಳೂರಿಗರನ್ನು ದೂಡಲು ಹೊರಟಿರುವ ರಾಜ್ಯ ಸರ್ಕಾರದ ನಡೆ ಖಂಡನೀಯ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾಟಾಳ್‌ ನಾಗರಾಜ್‌ ಆಗ್ರಹ: ಇತ್ತ ಮಂಡ್ಯ, ಚಾಮರಾಜನಗರ, ಹಾಸನ, ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಳಗಾವಿ ಸೇರಿದಂತೆ ನಾಡಿನಾದ್ಯಂತ ಬಂದ್‌ ಬಿಸಿ ಜೋರಾಗಿದೆ. ಈ ಮೂಲಕ ಸರ್ಕಾರ ಎಚ್ಚೆತ್ತುಕೊಂಡು ಕೂಡಲೇ ನೀರು ನಿಲ್ಲಿಸಬೇಕು ಎಂದು ಹೋರಾಟಗಾರ ವಾಟಾಳ್‌ ನಾಗರಾಜ್‌ ಆಗ್ರಹಿಸಿದ್ದಾರೆ.

ಒಟ್ಟಾರೆ ಕರ್ನಾಟಕ ಬಂದ್‌ ಹಿನ್ನೆಲೆ ಸಾರಿಗೆ ನಿಗಮಗಳ ಬಸ್‌ಗಳು ಹಾಗೂ ನಮ್ಮ ಮೆಟ್ರೋದಲ್ಲೂ ಜನರ ಓಡಾಟ ವಿರಳವಾಗಿದ್ದು, ರಾಜ್ಯದ ಬಹುತೇಕ ಎಲ್ಲ ಬಸ್‌ ನಿಲ್ದಾಣಗಳು ಜನರಿಲ್ಲದೆ ಬಿಕೋ ಎನುತ್ತಿವೆ. ಇನ್ನು ರಸ್ತೆಗಿಳಿದಿರುವ ಕನ್ನಡಪರ, ರೈತಪರ ಸಂಘಟನೆಗಳು ಸೇರಿದಂತೆ ರಾಜ್ಯದ ಎಲ್ಲ ಸಂಘಟನೆಗಳು ಇಂದಿನ ಬಂದ್‌ನಲ್ಲಿ ಭಾಗಿಯಾಗುವ ಮೂಲಕ ಹೋರಾಟವನ್ನು ತೀವ್ರಗೊಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು