NEWS

ಕೊರೊನಾದಿಂದ ಮೃತಪಟ್ಟ ಕಲಬುರಗಿ ವೃದ್ಧನ ಪುತ್ರಿ ಗುಣಮುಖ

ಆಸ್ಪತ್ರೆಯಿಂದ ಬಿಡುಗಡೆ l ಜಿಲ್ಲಾಧಿಕಾರಿ ಶರತ್ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕೊರೊನಾ ಸೋಂಕಿನಿಂದ‌ ಮೃತರಾದ ಕಲಬುರಗಿಯ 76 ವರ್ಷದ ವಯೋವೃದ್ಧನ ಮಗಳು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಬಿ. ಶರತ್ ತಿಳಿಸಿದ್ದಾರೆ.

ಇದೇ ಮಾರ್ಚ್ 10 ರಂದು ವೃದ್ಧರೊಬ್ಬರು ವಯೋಸಹಜ ಕಾಯಿಲೆಯ ಜತೆಗೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದ. ಇದರಿಂದ ಕಲಬುರಗಿ ರೆಡ್ ಅಲರ್ಟ್ ಆಗಿ ಮಾರ್ಪಟ್ಟಿತ್ತು. ಮೃತನ ನೇರ ಸಂಪರ್ಕದಲ್ಲಿ ಬಂದಿದ್ದ ಆತನ 45 ವರ್ಷದ ಮಗಳನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಪಾಸಿಟಿವ್ ದೃಢವಾದ ಹಿನ್ನೆಲೆಯಲ್ಲಿ ಕಲಬುರಗಿ ಇ.ಎಸ್.ಐ.ಸಿ ಮೆಡಿಕಲ್ ಕಾಲೇಜಿನ ಐಸೋಲೇಷನ್ ವಾರ್ಡ್ ನಲ್ಲಿಟ್ಟು ತೀವ್ರ ನಿಗಾದಡಿ ಚಿಕಿತ್ಸೆ ನೀಡಲಾಗಿತ್ತು.

ಚಿಕಿತ್ಸೆಯ 14 ದಿನಗಳ ನಂತರ ಈ ಮಹಿಳೆಗೆ ಕೋವಿಡ್-19 ಪರೀಕ್ಷೆ ಮಾಡಿದಾಗ ನೆಗೆಟಿವ್ ಕಂಡುಬಂದಿದೆ. 24 ಗಂಟೆ‌ ನಂತರ‌ ಮತ್ತೊಮ್ಮೆ ಪರೀಕ್ಷಿಸಿದಾಗ ಸಹ ನೆಗೆಟಿವ್ ವರದಿ ಬಂದಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ