NEWSಆರೋಗ್ಯದೇಶ-ವಿದೇಶ

ಕೊರೊನಾ ಅಟ್ಟಹಾಸಕ್ಕೆ ದೇಶದಲ್ಲಿ 7 ಸಾವು

ಕೊರೊನಾ ವೈರಸ್‌ ನಿಯಂತ್ರಣಕ್ಕೆ ಕ್ವಾರಟೈನ್‌ ಒಂದೇ ಸದ್ಯದ ಪರಿಹಾರ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ ಪ್ರಪಂಚವನ್ನೇ ಎಡೆಬಿಡದೆ ಕಾಡುತ್ತಿದರುವ ಕೊರೊನಾ ಸೋಂಕಿಗೆ ಭಾರತದಲ್ಲಿ ಇದುವರೆಗೆಗೆ 7 ಬಲಿಯಾಗಿವೆ. ಭಾನುವಾರ ಬೆಳಗ್ಗೆ ಮಹಾರಾಷ್ಟ್ರದಲ್ಲಿ, ಮಧ್ಯಾಹ್ನದ ವೇಳೆಗೆ ಬಿಹಾರ ಮತ್ತು ಗುಜರಾತ್‌ನಲ್ಲಿ ಒಬ್ಬೊಬ್ಬರು ಮೃತಪಟ್ಟಿದ್ದಾರೆ.

vijayapatha.in - ವಿಜಯಪಥ.ಇನ್‌ ನಿಮಗೆ ವಿಶ್ವಾಸನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅನಿಸಿದರೆ ನಮಗೆ ಆರ್ಥಕವಾಗಿ ಬಲ ನೀಡಿ. ಇನ್ನಷ್ಟು ಸತ್ಯನಿಷ್ಠ ವರದಿಗಳನ್ನು ಮಾಡುವುದಕ್ಕೆ ಬೆಂಬಲ ನೀಡಿ.   ಕನಿಷ್ಠ 100 ರೂ. ಒಮ್ಮೆಗೆ ಹಾಕಿ. ನಮ್ಮನ್ನು ಪ್ರೋತ್ಸಾಹಿಸಿ. 

ಮಹಾರಾಷ್ಟ್ರದ ಮುಂಬೈನಲ್ಲಿ 65 ವರ್ಷದ ಮಹಿಳೆ, ಬಿಹಾರದ ಪಾಟ್ನಾದಲ್ಲಿ 63ವರ್ಷದ ಮತ್ತು ಗುಜರಾತಿನ ಸೂರತ್ ಮೂಲದ 67ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ. ಇವರು ಕಳೆದ ನಾಲ್ಕು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು.

ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಕೊರೋನಾ ಶಂಕಿತರನ್ನು ಆಸ್ಪತ್ರೆಯಲ್ಲಿರಿಸಿ ನಿಗಾ ವಹಿಸಲು ಸಾಧ್ಯವಾಗದ ಕಾರಣ ಅವರನ್ನು ಮನೆಯಲ್ಲೇ ಇರಿಸಿ, 14 ದಿನಗಳ ಕಾಲ ಪ್ರತ್ಯೇಕವಾಗಿರಲು ಸೂಚಿಸಲಾಗಿದೆ. ಮನೆಯಲ್ಲೇ ಸ್ವನಿರ್ಬಂಧಕ್ಕೆ ಆದೇಶಿಸಲಾಗಿರುವ ಕೊರೋನಾ ಶಂಕಿತರ ಕೈ ಮೇಲೆ ಕ್ವಾರಂಟೈನ್ ಸ್ಟಾಂಪ್ ಹಾಕಲು ಸರ್ಕಾರ ಆದೇಶ ಹೊರಡಿಸಿದೆ.

ಕೊರೊನಾ ಮಹಾಮಾರಿ ನಿಯಂತ್ರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಮಾ.22 ಜನತಾ ಕರ್ಫ್ಯೂಗೆ ಕರೆ ನೀಡಿದ್ದರು. ಒಂದು ದಿನ ಜನಸಂಪರ್ಕ ತಡೆಯುವ ಮೂಲಕ ವೈರಸ್‌ ಹರಡುವಿಕೆ ತಡೆಯುವುದು ಜನತಾ ಕರ್ಫ್ಯೂ ಉದ್ದೇಶವಾಗಿತ್ತು.  ಪ್ರಧಾನ ಮಂತ್ರಿಯ ಕರೆಗೆ ಇಡೀ ದೇಶವೇ ಸಕಾರಾತ್ಮಕವಾಗಿ ಸ್ಪಂದಿಸಿದೆ. ರಾಜ್ಯದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ದೇಶದಲ್ಲಿ ಇಂದಿನವರೆಗೆ (ಮಾ22) ಮೃತಪಟ್ಟರು

ನ್ಯೂಡೆಲ್ಲಿ–  1

ಕರ್ನಾಟಕ– 1

ಮಹಾರಾಷ್ಟ್ರ– 2

ಪಂಜಾಬ್ –     1

ಗುಜರಾತ್ –    1

ಬಿಹಾರ್–     1

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು!