NEWSನಮ್ಮಜಿಲ್ಲೆ

ಕೊರೊನಾ ನಿಯಂತ್ರಣಕ್ಕೆ “ಬಿಬಿಎಂಪಿ ಟೆಲಿ ಹೆಲ್ತ್ ಲೈನ್” ಆರಂಭ

07447118949ಕ್ಕೆ ಉಚಿತವಾಗಿ ಕರೆ ಮಾಡಿ ಅಗತ್ಯ ಮಾಹಿತಿ ಪಡೆಯಿರಿ ಎಂದ ಮೇಯರ್‌ ಗೌತಮ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೋವಿಡ್-19 ಹಿನ್ನೆಲೆ ನಗರದ ನಾಗರೀಕರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಬಿಬಿಎಂಪಿಯು ಬ್ಲೂಮ್ ಬರ್ಗ್ ಫಿಲಾಂಥ್ರಪಿಸ್ ಹಾಗೂ ವೈಟಲ್ ಸ್ಟ್ರಾಟಜೀಸ್ ಸಂಸ್ಥೆಗಳ ಸಹಯೋಗದಲ್ಲಿ ಕೋವಿಡ್-19 ಹಾಗೂ ಇನ್ನಿತರೆ ರೋಗಗಳ ಬಗ್ಗೆ ನಾಗರಿಕರಿಗೆ ಪಾಲಿಕೆ ವೈದ್ಯರು ಮಾಹಿತಿ ನೀಡುವ ನಿಟ್ಟಿನಲ್ಲಿ “ಬಿಬಿಎಂಪಿ ಟೆಲಿ ಹೆಲ್ತ್ ಲೈನ್” ಆರಂಭಿಸಲಾಗಿದ್ದು, 07447118949ಗೆ ಉಚಿತವಾಗಿ ಕರೆ ಮಾಡಿ ಅಗತ್ಯ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು  ಮೇಯರ್‌ ಗೌತಮ್‌ ಕುಮಾರ್‌  ತಿಳಿಸಿದರು.

ಬಿಬಿಎಂಪಿ ಕಚೇರಿಯಲ್ಲಿ ಇಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತಮನಾಡಿ, ನಾಗರಿಕರಿಗೆ ಅಗತ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಈ ಸೇವೆಯನ್ನು ಜಾರಿಗೊಳಿಸಲಾಗಿದ್ದು, ಅದಕ್ಕಾಗಿ ಪಾಲಿಕೆ 42 ವೈದ್ಯರು ನಾಗರಿಕರಿಗೆ ಅಗತ್ಯ ಮಾಹಿತಿ ನೀಡಿಲಿದ್ದಾರೆ. ಹೆಲ್ತ್ ಲೈನ್ ಸಂಖ್ಯೆ 07447118949ಗೆ ಕರೆ ಮಾಡಿ, ಆರೋಗ್ಯ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ.  ಇಂದಿನಿಂದಲೇ ಈ ಸೇವೆ ಆರಂಭವಾಗಲಿದ್ದು, ನಾಲ್ಕು ಪಾಳಿಯಲ್ಲಿ ವೈದ್ಯರು ಕಾರ್ಯನಿರ್ವಹಿಸಲಿದ್ದಾರೆ. ಬೆಳಗ್ಗೆ 8 ರಿಂದ 11, ಬೆಳಗ್ಗೆ 11 ರಿಂದ ಮಧ್ಯಾಹ್ನ 2, ಮಧ್ಯಾಹ್ನ 2 ರಿಂದ ಸಂಜೆ 5, ಸಂಜೆ 5 ರಿಂದ ರಾತ್ರಿ 8 ಗಂಟೆಯವರೆಗೆ ವೈದ್ಯರು ಕಾರ್ಯನಿರ್ವಹಿಸಲಿದ್ದಾರೆ. ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಈ ಸೇವೆ ಲಭ್ಯವಿರಲಿದೆ ಎಂದು ಹೇಳಿದರು.

ಹೆಲ್ತ್ ಲೈನ್‌ಗೆ ಕರೆಮಾಡಿದ ತಕ್ಷಣ ಕಾಲ್ ಸೆಂಟರ್‌ಗೆ ಮಾಹಿತಿ ತಲುಪಿ, ಬಂದಂತಹ ಕರೆಗಳನ್ನು ವೈದ್ಯರಿಗೆ ವರ್ಗಾಯಿಸಲಾಗುತ್ತದೆ. ಕರೆ ಮಾಡಿದ ಪ್ರತಿಯೊಬ್ಬರಿಗೂ ಪ್ರತ್ಯೇಕ ಗುರುತಿನ ಸಂಖ್ಯೆ ನೀಡಲಾಗುತ್ತದೆ. ಹೆಚ್ಚಿನ ಅವಶ್ಯಕತೆ ಇದ್ದಲ್ಲಿ ವೈದ್ಯರು ರೋಗಿಗಳ ಜೊತೆ ಸಮಾಲೋಚನೆ ನಡೆಸಲು ವೀಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಕೂಡ ಮಾಡಲಾಗಿದೆ. ಕೊರೋನಾ ವೈರಸ್ ಸೋಂಕು ಸಂಕಷ್ಟದ ಸಮಯದಲ್ಲಿ ಜನರು ವೈದ್ಯರ ಬಳಿ ಹೋಗಲು ಹಿಂಜರಿಯುತ್ತಿದ್ದಾರೆ. ಇದರ ಪ್ರಯೋಗವನ್ನು ಈಗಾಗಲೇ ಮಾಡಲಾಗಿದೆ. ಸಾರ್ವಜನಿಕರು ಈ ಹೆಲ್ಪ್ ಲೈನ್ ಬಳಸಿಕೊಳ್ಳಬಹುದು. ಮುಂಬರುವ ದಿನಗಳಲ್ಲಿ ಖಾಸಗಿ ವೈದ್ಯರು ಕೂಡಾ ಇದರ ಜೊತೆ ಕೈಜೋಡಿಸಬಹುದು. ಮುಂಬರುವ ದಿನದಲ್ಲಿ ಇದನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲಾಗುವುದು ಎಂದರು.

ಆಯುಕ್ತ  ಬಿ.ಎಚ್.ಅನಿಲ್ ಕುಮಾರ್‌ ಮಾತನಾಡಿ, ಕೊರೋನಾ ವೈರೆಸ್ ಸೋಂಕು ಆರಂಭವಾದ ಬಳಿಕ ಸಾಕಷ್ಟು ಖಾಸಗಿ ಆಸ್ಪತ್ರೆಗಳು ಸೇವೆ ನೀಡುವುದನ್ನು ನಿಲ್ಲಿಸಿಬಿಟ್ಟಿವೆ. ಈ ಪೈಕಿ ಎಲ್ಲಾ ಖಾಸಗಿ ನರ್ಸಿಂಗ್ ಹೋಂಗಳಿಗೆ ಕೊರೊನಾ ಹೊರತುಪಡಿಸಿ, ಡಯಾಬಿಟಿಸ್, ಹೃದಯ, ಕಿಡ್ನಿ ಸಂಬಂಧಿತ ಕಾಯಿಲೆಗಳಿಗೆ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿತ್ತು. ಆದರೂ ಅನೇಕ ಕಡೆ ಸಾರ್ವಜನಿಕರು ಫೀವರ್ ಕ್ಲಿನಿಕ್‌ಗಳಿಗೆ ತೆರಳಲು ಕೂಡಾ ಹಿಂಜರಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ “ಬಿಬಿಎಂಪಿ ಟೆಲಿ ಹೆಲ್ತ್ ಲೈನ್” ಮೂಲಕ ವೈದ್ಯರನ್ನು ನೇರವಾಗಿ ಸಂಪರ್ಕಿಸಿ, ರೋಗದ ಲಕ್ಷಣಗಳನ್ನು ತಿಳಿಸಿ ಅದಕ್ಕೆ ಸೂಕ್ತ ಔಷಧ ಪಡೆಯಬಹುದು. ಇ-ಮೇಲ್ ಅಥವಾ ವಾಟ್ಸಾಪ್ ಮೂಲಕ ವೈದ್ಯರು ಔಷಧದ ವಿವರಗಳನ್ನು ನೀಡಲಾಗುತ್ತದೆ ಎಂದು ಹೇಳಿದರು.

ಉಪಮಹಾಪೌರ ರಾಮಮೋಹನ ರಾಜು, ಆಡಳಿತ ಪಕ್ಷದ ನಾಯಕರು ಮುನೀಂದ್ರ ಕುಮಾರ್, ವಿರೋಧ ಪಕ್ಷದ ನಾಯಕರು ಅಬ್ದುಲ್ ವಾಜೀದ್, ಜೆ.ಡಿ.ಎಸ್ ಪಕ್ಷದ ನಾಯಕಿ ನೇತ್ರಾನಾರಾಯಣ್, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್ ರಾಜು.ಜಿ,  ವಿಶೇಷ ಆಯುಕ್ತ ಡಾ. ರವಿಕುಮಾರ್ ಸುರಪುರ, ಮುಖ್ಯ ಆರೋಗ್ಯಾಧಿಕಾರಿ ಡಾ. ವಿಜೇಂದ್ರ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ