NEWSದೇಶ-ವಿದೇಶ

ಕೊರೊನಾ ನಿಯಂತ್ರಣ ಕ್ರಮ ಕುರಿತು ಪ್ರಧಾನಿ ಮೋದಿ- ಡೆನ್ಮಾರ್ಕ್ ಪ್ರಧಾನಿ  ನಡುವೆ ಚರ್ಚೆ

ವಿಜಯಪಥ ಸಮಗ್ರ ಸುದ್ದಿ

ಡೆನ್ಮಾರ್ಕ್:  ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸುವ ಕುರಿತು  ಡೆನ್ಮಾರ್ಕ್‌ನ ಪ್ರಧಾನ ಮಂತ್ರಿ  ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಸಂಭಾಷಣೆ ನಡೆಸಿದರು.

ಕೋವಿಡ್-19 ಸಾಂಕ್ರಾಮಿಕ ರೋಗ ನಿಭಾಯಿಸಲು ಉಭಯ ದೇಶಗಳಲ್ಲಿ ಕೈಗೊಂಡ ಕ್ರಮಗಳನ್ನು ಉಭಯ ನಾಯಕರು ಹೋಲಿಸಿ ಚರ್ಚಿಸಿದರು.  ಸೋಂಕುಗಳ ಹೆಚ್ಚಳಕ್ಕೆ ಕಾರಣವಾಗದೆ ಲಾಕ್‌ಡೌನ್ ನಿರ್ಬಂಧಗಳನ್ನು ತೆಗೆದುಹಾಕಿದ ಡೆನ್ಮಾರ್ಕ್‌ನ ಯಶಸ್ಸನ್ನು ಪ್ರಧಾನಿ ಮೋದಿ ಶ್ಲಾಘಿಸಿದರು. ಪರಸ್ಪರರ ಅನುಭವದಿಂದ ಕಲಿಯಲು ಭಾರತೀಯ ಮತ್ತು ಡ್ಯಾನಿಶ್ ತಜ್ಞರು ಸಂಪರ್ಕದಲ್ಲಿರುವ ಬಗ್ಗೆ ಸಮ್ಮತಿಸಲಾಯಿತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಭಾರತ-ಡೆನ್ಮಾರ್ಕ್ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಬಯಕೆಯನ್ನು ಉಭಯ ನಾಯಕರು ಪುನರುಚ್ಚರಿಸಿದರು ಮತ್ತು ಕೋವಿಡ್ ನಂತರದ ಜಗತ್ತಿನಲ್ಲಿ ಎರಡೂ ದೇಶಗಳು ಒಟ್ಟಾಗಿ ಕೆಲಸ ಮಾಡುವ  ಬಗ್ಗೆಯೂ ಚರ್ಚಿಸಿದರು.

12 ಮೇ 2020 ರಂದು ಉಭಯ ದೇಶಗಳ ವಿದೇಶಾಂಗ ಸಚಿವರ ನಡುವಿನ ಜಂಟಿ ಆಯೋಗದ ಸಭೆಯ ಯಶಸ್ವಿ ಆಯೋಜನೆಯನ್ನು ಅವರು ಸ್ವಾಗತಿಸಿದರು.

ಆರೋಗ್ಯ ಸಂಶೋಧನೆ, ಸ್ವಚ್ಛ ಮತ್ತು ಪರಿಸರ ಸ್ನೇಹಿ ಇಂಧನ, ಹವಾಮಾನ ಬದಲಾವಣೆಯ ಸ್ಥಿತಿಸ್ಥಾಪಕತ್ವ ಮುಂತಾದ ಕ್ಷೇತ್ರಗಳು ಪರಸ್ಪರ ಲಾಭದಾಯಕ ಸಹಯೋಗಕ್ಕೆ ಅಪಾರ ಅವಕಾಶವನ್ನು ನೀಡುತ್ತವೆ ಎಂದು ಒಪ್ಪಿಕೊಂಡ ನಾಯಕರು, ಭಾರತ ಮತ್ತು ಡೆನ್ಮಾರ್ಕ್ ನಡುವೆ ದೃಢವಾದ ಪರಿಸರ ಕಾರ್ಯತಂತ್ರದ ಸಹಭಾಗಿತ್ವವನ್ನು ಸೃಷ್ಟಿಸುವ ಗುರಿಯತ್ತ ಕೆಲಸ ಮಾಡಲು ಉಭಯ ನಾಯಕರು ಸಮ್ಮತಿ ಸೂಚಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ