VIJAYAPATHA.IN > ವಿಜಯಪಥ > NEWS > ವಿಡಿಯೋ > ಕೊರೊನಾ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವರು ಹೇಳೋದೇನು
ಕೊರೊನಾ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವರು ಹೇಳೋದೇನು
admin.savhnMarch 21, 2020
ಬೆಂಗಳೂರು: ಕೊರೊನಾ ವೈರಸ್ ತಡೆಗಟ್ಟಲು ರಾಜ್ಯದ ಎಲ್ಲಾ ಗ್ರಾಪಂಗಳ ಪಿಡಿಒಗಳು, ತಾಲೂಕು ಕಾರ್ಯನಿರ್ವಾಹಣಾಧಿಕಾರಿಗಳು ಮುಂಜಾಗ್ರತೆ ವಹಿಸಬೇಕು. ಈಗಾಗಲೇ ಾಯಾಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಮಾಡಲಾಗಿದೆ. ಈ ಸಮಿತಿ ಸೋಂಕು ಪತ್ತೆಯಾಗಿರುವವರು ವಾಸವಿರುವ ನಗರವನ್ನು ಕ್ವಾರೆಂಟೈನ್ ಮಾಡುವ ರೀತಿ ಕ್ರಮ ಕೈಗೊಳ್ಳುತ್ತಿದೆ. ಪ್ರತಿ ಆಸ್ಪತ್ರೆಗಳಲ್ಲಿ, ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ವ್ಯಕ್ತಿಗಳು ಸ್ಯಾನಿಟೈಸರ್ ಬಳಸಿ ಒಳಗೆ ಪ್ರವೇಶ ಮಾಡಬೇಕು. ಅಧಿಕವಾಗಿ ಸಾರ್ವಜನಿಕರು ಸೇರುವ ಸ್ಥಳಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ
Related
admin.savhn