ಸಂಸ್ಕೃತಿ

ಕೊರೊನಾ ಭೀತಿಗೆ ಬೇಲೂರಿನ ಶ್ರೀಚನ್ನಕೇಶವಸ್ವಾಮಿ ದೇಗುಲ ಬಂದ್‌

ವಿಜಯಪಥ ಸಮಗ್ರ ಸುದ್ದಿ

ಬೇಲೂರು: ಇಡಿ ಜಗತ್ತನ್ನೆ ಬೆಚ್ಚಿಬೀಳಿಸುತ್ತಿರುವ ಕೊರೊನಾ ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ 900 ವರ್ಷಗಳ ಇತಿಹಾಸವಿರುವ ಬೇಲೂರಿನ ಶ್ರೀಚನ್ನಕೇಶವಸ್ವಾಮಿ ದೇಗುಲದ ಬಾಗಿಲನ್ನು ಮಂಗಳವಾರ (ಮಾ.17)ದಿಂದ ಮಾ.31ರ ವರೆಗೆ ಮುಚ್ಚಲಾಗಿದೆ.

ಕೇಂದ್ರ ಸರಕಾರದ ಆದೇಶದಂತೆ ಕೇಂದ್ರಪುರಾತತ್ವ ಇಲಾಖೆ ಅಧಿಕಾರಿಗಳು ದೇಗುಲದ ದ್ವಾರಗೋಪುರದ ಬಾಗಿಲನ್ನು ಮುಚ್ಚಿದರು. ಬೆಳಗ್ಗೆ ಅರ್ಚಕರು ದೇಗುಲಕ್ಕೆ ಆಗಮಿಸುವ ವೇಳೆಗೆ ಬಾಗಿಲು ಮುಚ್ಚಲ್ಪಟ್ಟಿತ್ತಾದರೂ ಪೂಜಾಕಾರ್ಯ ನಿಮಿತ್ತ ನಂತರ ಭಾಗಶಃ ತೆರೆಯಲಾಯಿತು. ಅರ್ಚಕರು ಎಂದಿನಂತೆ ದೇವರಿಗೆ ಪೂಜೆ ಸಲ್ಲಿಸಿದರು. ಆದರೆ ಪ್ರವಾಸಿಗರಿಗೆ, ಭಕ್ತರಿಗೆ ಪ್ರವೇಶ ನೀಡಲಿಲ್ಲ. ಇದರಿಂದ ದೂರದೂರಿನಿಂದ ಆಗಮಿಸಿದ್ದ ಭಕ್ತರು ನಿರಾಸೆಗೊಂಡರು. ಭಕ್ತರು, ದ್ವಾರಗೋಪುರದ ಬಾಗಿಲ ಬಳಿಯಿರುವ ಬಲಿಪೀಠದ ಮೇಲೆ ಕರ್ಪೂರ ಹಚ್ಚಿ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು. ದೇಗುಲ ನಿರ್ಮಾಣದ ನಂತರ ಈವರಗೆ ದ್ವಾರಗೋಪುರದ ಬಾಗಿಲನ್ನು ಮುಚ್ಚಿರಲಿಲ್ಲ. ಹಲವು ವರ್ಷಗಳ ಹಿಂದೆ ಸಾಮೂಹಿಕವಾಗಿ ಪ್ಲೇಗ್, ಕಾಲರ ರೋಗ ಬಂದಿದ್ದ ಸಮಯದಲ್ಲೂ ಸಹ ದೇಗುಲದ ಬಾಗಿಲನ್ನು ಮುಚ್ಚಿರಲಿಲ್ಲ. ಇದೀಗ ಇದು ಅನಿವಾರ್ಯ ಎನ್ನಲಾಗಿದೆ. ದೇಗುಲದ ಬಾಗಿಲು ಇದೇ ಮಾರ್ಚ್‌ 31ರವರೆಗೆ ಮುಚ್ಚಲಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ