NEWS

ಕೊರೊನಾ ವಾರಿಯರ್ಸ್ ಸ್ವಯಂ ಸೇವಕರು ಸೇವೆಗೆ ಸಜ್ಜು

ಜಿಲ್ಲಾಡಳಿತದ ನಿರ್ದೇಶನದ ಪ್ರಕಾರ ಕಾರ್ಯ l ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಶಿವಮೊಗ್ಗ: ಕೊರೊನಾ ವೈರಸ್ ನಿಯಂತ್ರಣ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ನೆರವಾಗಲು ನೋಂದಣಿ ಮಾಡಿಸಿರುವ ಕರೋನಾ ವಾರಿಯರ್ಸ್ ಸ್ವಯಂ ಸೇವಕರು ಜಿಲ್ಲಾಡಳಿತದ ನಿರ್ದೇಶನದ ಪ್ರಕಾರ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲೆಯ ಕೊರೊನಾ ವಾರಿಯರ್ಸ್ ಪ್ರಥಮ ತಂಡಕ್ಕೆ ಅಗತ್ಯ ಸೂಚನೆಗಳನ್ನು ನೀಡಿ ಮಾತನಾಡಿದರು.

ಸಾಮಾಜಿಕ ಜಾಲತಾಣಗಳಲ್ಲಿ ಬರುವ ವದಂತಿಗಳನ್ನು ಜಿಲ್ಲಾಡಳಿತದ ಗಮನಕ್ಕೆ ತಕ್ಷಣ ತರುವುದು, ಲಾಕ್‍ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವವರಿಗೆ ಮನೆ ಬಾಗಿಲಿಗೆ ಆಹಾರ, ಅಗತ್ಯವಿರುವವರಿಗೆ ಪಡಿತರ ಪೂರೈಕೆ ಮಾಡುವುದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು, ಅಂಗಡಿಗಳ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಕ್ರಮ ವಹಿಸುವುದು, ಜನರು ಗುಂಪು ಸೇರದಂತೆ ಸೂಚನೆಗಳನ್ನು ನೀಡುವುದು, ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಆಶ್ರಯ ಇತ್ಯಾದಿ ಕಾರ್ಯಗಳನ್ನು ಕೈಗೊಳ್ಳುವುದು ಸೇರಿದಂತೆ ಜಿಲ್ಲಾಡಳಿತ ಸೂಚಿಸುವ ಕಾರ್ಯಗಳನ್ನು ಕೊರೊನಾ ವಾರಿಯರ್ಸ್ ನಿರ್ವಹಿಸಬೇಕಾಗಿದೆ ಎಂದು ಹೇಳಿದರು.

ಸಾಮಾಜಿಕ ಜಾಲ ತಾಣಗಳಲ್ಲಿ ಕಂಡು ಬರುವ ಯಾವುದೇ ವದಂತಿಗಳು, ಅನಧಿಕೃತ ಸುದ್ದಿಗಳನ್ನು ತಕ್ಷಣ ಜಿಲ್ಲಾ ವಾರ್ತಾಧಿಕಾರಿ ಗಮನಕ್ಕೆ ತರಬೇಕು. ಕೊರೊನಾ ವಾರಿಯರ್ಸ್ ಸ್ವಯಂ ಸೇವಕರಿಗೆ ಸರ್ಕಾರದ ವತಿಯಿಂದ ಗುರುತಿನ ಪತ್ರ ಒದಗಿಸಲಾಗಿದ್ದು, ಯಾವುದೇ ಕಾರಣಕ್ಕೂ ಅದನ್ನು ದುರುಪಯೋಗ ಪಡಿಸಿಕೊಳ್ಳಬಾರದು. ದುರುಪಯೋಗ ಪಡಿಸಿದರೆ ಕಾನೂನು ಕ್ರಮ ಜರುಗಿಸಲಾಗುವುದು. ಸ್ವಯಂ ಸೇವಾ ಕಾರ್ಯಗಳಿಗೆ ಮಾತ್ರ ಗುರುತಿನ ಚೀಟಿ ಬಳಕೆ ಮಾಡಬೇಕು ಎಂದು ಅವರು ಸ್ಪಷ್ಟಪಡಿಸಿದರು.

ರೆಡ್‍ಕ್ರಾಸ್ ಸಂಸ್ಥೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕಾರ್ಮಿಕ ಸೊಸೈಟಿ ಜಂಟಿಯಾಗಿ ಕೊರೊನಾ ವಾರಿಯರ್ಸ್‍ಗಳನ್ನು ಆನ್‍ಲೈನ್ ಮೂಲಕ ನೋಂದಣಿ ಮಾಡಿಸಿ ಈಗಾಗಲೇ ತರಬೇತಿ ನೀಡಿದೆ. ಜಿಲ್ಲೆಯಲ್ಲಿ 200ಕ್ಕೂ ಅಧಿಕ ಮಂದಿ ಸ್ವಯಂ ಸೇವಕರಾಗಿ ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ