ದೇಶ-ವಿದೇಶ

ಕೊರೋನಾ ವೈರಸ್ ತಡೆಗಟ್ಟಲು ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಿ: ತಹಸೀಲ್ದಾರ್‌ ವೆಂಕಟೇಶಯ್ಯ

ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ಕೊರೋನಾ ವೈರಸ್ (ಕೋವಿಡ್-19) ಸೋಂಕು ಹರಡದಂತೆ ತಡೆಗಟ್ಟಲು ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ವೈಯಕ್ತಿಕ ಸ್ವಚ್ಛತೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು, ಅಲ್ಲದೆ ಇತರೆ ರೋಗಗಳು ಹರಡದಂತೆ ತಡೆಗಟ್ಟಲು ಒಳಚರಂಡಿ ಸ್ವಚ್ಛತೆ,  ಔಷಧಿ ಸಿಂಪಡಣೆ ಮಾಡಬೇಕು.  ಸ್ವಚ್ಛತೆ ಕುರಿತು ಕೈಗೊಂಡ ಕ್ರಮಗಳ ಕುರಿತು ನಿತ್ಯವೂ ವರದಿ ಸಲ್ಲಿಸುವಂತೆ ತಹಸೀಲ್ದಾರ್ ವೆಂಕಟೇಶಯ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಕೊರೋನಾ ವೈರಸ್ ಸೋಂಕು ತಡೆ ಕುರಿತು ಬುಧವಾರ ಏರ್ಪಡಿಸಿದ ಮುಂಜಾಗ್ರತಾ ಕ್ರಮಗಳ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ  ಮಾತನಾಡಿದರು.

ಕೊರೋನಾ ವೈರಸ್ ಸೋಂಕು ಹರಡದಂತೆ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ವೈಯಕ್ತಿಕ ಸ್ವಚ್ಛತೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು, ಅಲ್ಲದೆ ಇತರೆ ರೋಗಗಳು ಹರಡದಂತೆ ತಡೆಗಟ್ಟಲು ಒಳಚರಂಡಿ ಸ್ವಚ್ಛತೆ,  ಔಷಧಿ ಸಿಂಪಡಣೆ ಮಾಡಬೇಕು.  ಕೊಳಚೆ ಪ್ರದೇಶಗಳಲ್ಲಿ ಸೊಳ್ಳೆಗಳು ಹೆಚ್ಚಾಗಿರುವುದರಿಂದ ಪ್ರತಿನಿತ್ಯವೂ ಸ್ವಚ್ಛಗೊಳಿಸಿ  ಕೈಗೊಂಡ ಕ್ರಮಗಳ ಕುರಿತು ನಿತ್ಯವೂ ವರದಿ ಸಲ್ಲಿಸಬೇಕು.  ವಿದೇಶದಿಂದ ಯಾರಾದರೂ ತಾಲೂಕಿನ ವಿವಿಧ ಗ್ರಾಮಗಳಿಗೆ ಬಂದಿರುವ ಜನರ ಬಗ್ಗೆ ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಪ್ರತಿದಿನವೂ ವರದಿ ಮಾಡಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಎಂದರು. ಗ್ರಾಮಮಟ್ಟದಲ್ಲಿ ಪಿಡಿಒ, ಗ್ರಾಮಲೆಕ್ಕಾಧಿಕಾರಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು, ಕಂದಾಯ ನಿರೀಕ್ಷಕರು ತಂಡ ರಚಿಸಲಾಗಿದ್ದು, ತಂಡವು ನಿತ್ಯವೂ ವರದಿ ನೀಡಬೇಕು ಎಂದು ಹೇಳಿದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಬಿ.ವಿ.ಗಿರೀಶ್ ಮಾತನಾಡಿ, ಕೊರೋನಾ ವೈರಸ್ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ. ಎಲ್ಲರೂ ಮಾಸ್ಕ್ ಧರಿಸುವ ಅವಶ್ಯಕತೆ ಇಲ್ಲ. ನೆಗಡಿ, ಕೆಮ್ಮ, ಜ್ವರದಿಂದ ಬಳಲುತ್ತಿರುವವರು ಮಾತ್ರ ಮಾಸ್ಕ್ ಧರಿಸಬಹುದು ಎಂದು ಹೇಳಿದರು.

ಕೊರೋನಾ ಶಂಕಿತ ಪ್ರಕರಣಗಳು ಪತ್ತೆಯಾದಲ್ಲಿ ರಾಜ್ಯದ ಬೆಂಗಳೂರು, ಶಿವಮೊಗ್ಗ, ಹಾಸನ, ಮೈಸೂರು ಸೇರಿದಂತೆ ಐದು ಭಾಗಗಳಲ್ಲಿ ಪರೀಕ್ಷಾ ಕೇಂದ್ರಗಳಿವೆ.  ಜಿಲ್ಲೆಯಲ್ಲಿ ಕೊರೋನ ವೈರಸ್ ಲಕ್ಷಣ ಕಂಡುಬಂದರೆ ಅಂತವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ 10 ಹಾಸಿಗೆಯ ಐಸೊಲೆಶನ್ ವಾರ್ಡ್, ಬಸವೇಶ್ವರ ಆಸ್ಪತ್ರೆಯಲ್ಲಿ 15 ಬೆಡ್‍ನ ಐಸೋಲೇಷನ್ ವಾರ್ಡ್ ತೆರೆಯಲಾಗಿದೆ ಎಂದು ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿ ಡಾ. ಭಾಗ್ಯಶ್ರೀ, ತಾಪಂ ಇಒ ಕೃಷ್ಣನಾಯ್ಕ್, ನಗರಸಭೆ ಪೌರಯುಕ್ತ ಜೆ.ಟಿ. ಹನುಮಂತರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಪ್ಪ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್ ಮಂಜುನಾಥ್, ಬಸವೇಶ್ವರ ವೈದ್ಯಕೀಯ ಕಾಲೇಜ್‍ನ ಸಿಬ್ಬಂದಿಗಳು, ಸಮುದಾಯ ಔಷಧ ವಿಭಾಗದವರು,  ಪಿಡಿಒ ಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ