NEWSನಮ್ಮಜಿಲ್ಲೆ

ಕೊರೊನಾ ಸೋಂಕಿತನ ಸಂಪರ್ಕದಲ್ಲಿದ್ದವರ ಸ್ಯಾಂಪಲ್ಸ್ ಕಳುಹಿಸಿ  

ತಾಲೂಕು ಆರೋಗ್ಯಾಧಿಕಾರಿ ಡಾ. ಸುರೇಶ ಮೇಕಿನ್‌ಗೆ ಜಿಲ್ಲಾಧಿಕಾರಿ ಬಿ.ಶರತ್ ಸಲಹೆ‌ 

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಶಹಾಬಾದ ಪಟ್ಟಣದ ಅಪ್ಪರ್ ಮಡ್ಡಿ ಪ್ರದೇಶದಲ್ಲಿ ಶನಿವಾರ 16 ವರ್ಷದವನಿಗೆ  ಕೊರೋನಾ ಪಾಸಿಟಿವ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಆತನ ನೇರ ಸಂಪರ್ಕದಲ್ಲಿದ್ದವರ  ಮಾಹಿತಿ ಕಲೆ ಹಾಕಿ ಎಲ್ಲರ ಸ್ಯಾಂಪಲ್ಸ್ ಗಳನ್ನು ಕೋವಿಡ್-19 ಪರೀಕ್ಷೆಗೆ ಕಳುಹಿಸಿ ಎಂದು ಡಿ.ಸಿ. ಶರತ್ ಬಿ.   ತಾಲೂಕು ಆರೋಗ್ಯಾಧಿಕಾರಿ ಡಾ. ಸುರೇಶ ಮೇಕಿನ್ ಅವರಿಗೆ ಸೂಚಿಸಿದರು.

ಶನಿವಾರ ಪಟ್ಟಣದ ಅಪ್ಪರ್ ಮಡ್ಡಿ ಪ್ರದೇಶದಲ್ಲಿ‌ ಪತ್ತೆಯಾದ ಕೊರೊನಾ ಸೋಂಕಿತರ ಮನೆ ಹಾಗೂ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಅವರು ಪ್ರಸ್ತುತ ಕೊರೊನಾ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿದರು.

ಯಾವುದೇ ಕಾರಣಕ್ಕೂ ಜನಸಮೂಹ ಸೇರದಂತೆ ಮತ್ತು ಸಾರ್ವಜನಿಕರು ಅನಗತ್ಯ ರಸ್ತೆ ಮೇಲೆ ಸಂಚಾರ ಮಾಡದಂತೆ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಮತ್ತು ಲಾಕ್ ಡೌನ್ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು ಎಂದು   ತಿಳಿಸಿದರು.

ಈ ಹಿಂದೆ ಪಟ್ಟಣದಲ್ಲಿ ಕಂಡುಬಂದ ಎರಡು ಕೊರೊನಾ ಸೋಂಕಿತರ ನೇರ ಸಂಪರ್ಕದಲ್ಲಿ ಬಂದಿರುವ ವ್ಯಕ್ತಿಗಳ ಆರೋಗ್ಯದ ಸ್ಥಿತಿಗತಿ ನೋಡಿಕೊಂಡು ಅಗತ್ಯವಿದ್ದಲ್ಲಿ 14 ದಿನದ ಗೃಹ ಬಂಧನ ಅವಧಿ ಮುಗಿಯುವ ಹಂತದಲ್ಲಿರುವವರಿಗೆ ಮತ್ತೊಮ್ಮೆ ತಪಾಸಣೆ ಮಾಡಬೇಕು ಎಂದು  ಡಾ.ಸುರೇಶ ಮೇಕಿನ್ ಅವರಿಗೆ ನಿರ್ದೇಶನ ನೀಡಿದರು.

ಅಪ್ಪರ್ ಮಡ್ಡಿ ಪ್ರದೇಶವನ್ನು ಈಗಾಗಲೆ ಕಂಟೇನ್ ಮೆಂಟ್ ಝೋನ್ ಘೋಷಿಸಿರುವ ಹಿನ್ನೆಲೆಯಲ್ಲಿ ಪ್ರದೇಶಕ್ಕೆ ಸಂಪರ್ಕ‌ ಕಲ್ಪಿಸುವ ಎಲ್ಲಾ ರಸ್ತೆ ಬಂದ್ ಮಾಡಲಾಗಿದೆ. ಕೇವಲ ಒಂದು ಕಡೆ ಪ್ರವೇಶ ಮತ್ತು ನಿರ್ಗಮನಕ್ಕಾಗಿ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಪ್ರತಿನಿತ್ಯ ಅರೋಗ್ಯ ಸಿಬ್ಬಂದಿಗಳಿಂದ ಸ್ಕ್ರೀನಿಂಗ್ ಮತ್ತು ಅರಿವು ಮೂಡಿಸುವ ಕಾರ್ಯಕ್ರಮಗಳು ನಿರಂತರ ಸಾಗಿವೆ ಎಂದು ತಹಸೀಲ್ದಾರ್‌ ಸುರೇಶ ಶರ್ಮಾ  ಡಿ‌ಸಿ  ಅವರಿಗೆ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಸಿ‌.ಇ.ಒ ಡಾ.ಪಿ‌.ರಾಜಾ, ಸೇಡಂ ಸಹಾಯಕ ಆಯುಕ್ತ ರಮೇಶ ಕೋಲಾರ, ಶಹಾಬಾದ ತಾಲೂಕು ಪಂಚಾಯಿತಿ   ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಣ ಶೃಂಗೇರಿ, ಡಿವೈ.ಎಸ್.ಪಿ. ವೆಂಕಣಗೌಡ ಪಾಟೀಲ, ನಗರಸಭೆ ಪೌರಾಯುಕ್ತ ವೆಂಕಟೇಶ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು