CrimeNEWSದೇಶ-ವಿದೇಶವಿದೇಶ

ಕೆರೆಬಿಯನ್‌ನಲ್ಲಿ ಭೂಕಂಪ : ನೂರಾರು ಮಂದಿ ಮೃತ: ಅವಶೇಷಗಳಡಿ ಸಿಲುಕಿರುವ ನೂರಾರು ಜನರು

ವಿಜಯಪಥ ಸಮಗ್ರ ಸುದ್ದಿ

ಪೋರ್ಟ್‌ ಔ ಪ್ರಿನ್ಸ್‌: ಕೆರೆಬಿಯನ್‌ ರಾಷ್ಟ್ರದ ಹೈಟಿಯಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ 320ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ನೂರಾರು ಮನೆಗಳು ಧರೆಗುರುಳಿವೆ.

ರಿಕ್ಟರ್‌ ಮಾಪಕದಲ್ಲಿ 7.2ರಷ್ಟು ಭೂ ಕಂಪನದ ತೀವ್ರತೆ ದಾಖಲಾಗಿದ್ದು, ಕ್ಷಣ ಮಾತ್ರಲ್ಲೇ ನೂರಾರು ಕಟ್ಟಡಗಳು ನೆಲಕಚ್ಚದನ್ನು ಕಂಡು ಹಲವರು ಭಯಭೀತರಾಗಿ ದಿಕ್ಕಪಾಲಾಗಿ ಓಡಾಡಿದ್ದಾರೆ.

ಹೈಟಿ ರಾಜಧಾನಿ ಪೋರ್ಟ್-ಔ-ಪ್ರಿನ್ಸ್ ನಿಂದ 160 ಕಿಲೋಮೀಟರ್ ದೂರದಲ್ಲಿ ಈ ಭೂಕಂಪ ಸಂಭವಿಸಿದ್ದು, ಈ ಪ್ರಕೃತಿ ವಿಕೋಪಕ್ಕೆ ಇಂದು ಸಾವಿರಾರು ಜನ ಬೀದಿಗೆ ಬೀಳುವಂತಾಗಿದೆ.

ಇನ್ನು ಭೂಕಂಪವಾಗುತ್ತಿದ್ದಂತೆ ಮನೆಯೊಳಗಿದ್ದ ಸಾವಿರಾರು ಮಂದಿ ತಮ್ಮ ತಮ್ಮ ಮನೆಗಳಿಂದ ಹೊರಗೆ ಓಡೋಡಿ ಬಂದಿದ್ದಾರೆ. ಆದರೆ ಮನೆಯಲ್ಲೇ ಇದ್ದವರು ಅವಶೇಷಗಳಡಿ ಸಿಲುಕಿ ಸಾವು-ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ.

ನೂರಾರು ಮಂದಿ ಭೂಕಂಪಕ್ಕೆ ಸಿಲುಕಿ ಕಣ್ಮರೆಯಾಗಿದ್ದಾರೆ. ಸದ್ಯ ಅವಶೇಷಗಳಡಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಇನ್ನು ಭೂಕಂಪದಿಂದ ಹೈಟಿಯಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಕೂಡಲೇ ಸೂಕ್ತ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು