CrimeNEWSದೇಶ-ವಿದೇಶ

ಕ್ರಿಸ್ಮಸ್ ಸಂಭ್ರಮಾಚರಣೆ ವೇಳೆ ಕ್ರಿಶ್ಚಿಯನ್ ಸಮುದಾಯದ 19 ಮನೆಗಳಿಗೆ ಬೆಂಕಿ ಹಚ್ಚಿದ ಪಾಪಿಗಳು

ವಿಜಯಪಥ ಸಮಗ್ರ ಸುದ್ದಿ

ಢಾಕಾ: ಮಧ್ಯಂತರ ಸರ್ಕಾರ ಬಾಂಗ್ಲಾದೇಶದಲ್ಲಿ ಬಂದ ಬಳಿಕ ಅಲ್ಪಸಂಖ್ಯಾತರ ಮೇಲಿನ ದಾಳಿ ಹೆಚ್ಚಾಗುತ್ತಲೇ ಇದೆ. ಹಿಂದೂ ದೇಗುಲಗಳ ಮೇಲೆ ದಾಳಿ ಮಾಡಿದ ಬಳಿಕ ಈಗ ಕ್ರಿಸ್ಮಸ್ ಸಂಭ್ರಮಾಚರಣೆ ವೇಳೆ ಕ್ರಿಶ್ಚಿಯನ್ ಸಮುದಾಯದ 19 ಮನೆಗಳಿಗೆ ಬೆಂಕಿ ಹಚ್ಚಿ ಸಂಪೂರ್ಣ ಸುಟ್ಟುಹಾಕಿರುವ ಘಟನೆ ಚಿತ್ತಗಾಂಗ್ ಪ್ರದೇಶದಲ್ಲಿ ನಡೆದಿದೆ.

ಬಂದರ್ಬನ್ ಜಿಲ್ಲೆಯ ನೋಟುನ್ ತೊಂಗ್‌ಹಿರಿ ತ್ರಿಪುರಾ ಪರಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 17 ಮನೆಗಳು ಸಂಪೂರ್ಣ ಭಸ್ಮವಾಗಿದ್ದು, ಎರಡು ಮನೆಗಳು ಭಾಗಶಃ ಸುಟ್ಟುಹೋಗಿವೆ. ಈ ಬಗ್ಗೆ ಬಾಂಗ್ಲಾ ಸರ್ಕಾರ ಒಂದೇ ಸಮುದಾಯದ ಎರಡು ಗುಂಪುಗಳ ನಡುವಿನ ವೈಷಮ್ಯವೇ ಇದಕ್ಕೆ ಕಾರಣ ಎಂದು ಹೇಳಿಕೊಂಡಿದೆ.

ಕ್ರಿಸ್ಮಸ್ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆಗೆಂದು ಚರ್ಚ್‌ಗೆ ಹೋಗಿದ್ದಾಗ ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇನ್ನು ಸಮುದಾಯದ ಮುಖಂಡರ ದೂರು ಆಧರಿಸಿ ಎಫ್‌ಐಆ‌ರ್ ದಾಖಲಿಸಿಕೊಂಡಿರುವ ಪೊಲೀಸರು ಈಗಾಗಲೇ ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ.

ಒಟ್ಟಾರೆ ಚಿತ್ತಗಾಂಗ್ ಪ್ರದೇಶದಲ್ಲಿ ಮನೆಗಳನ್ನು ಕಳೆದುಕೊಂಡವರಿಗೆ ಕೂಡಲೇ ಪರ್ಯಾಯ ವ್ಯವಸ್ಥೆ ಮಾಡಬೇಕು ಜತೆಗೆ ಹೊಸ ಮನೆಗಳನ್ನು ಕಟ್ಟಿಕೊಡಬೇಕು. ಅಲ್ಲದೆ ಈ ರೀತಿ ದೌರ್ಜನ್ಯ ಎಸಗಿರುವ ಪಾಪಿಗಳ ಹೆಡೆಮುರಿಕಟ್ಟಬೇಕು ಬೇಕು ಮನೆ ಕಳೆದುಕೊಂಡ ಕುಟುಂಬದವರು ಕಣ್ಣೀರು ಹಾಕುತ್ತಿದ್ದಾರೆ.

ಬಾಂಗ್ಲಾ ದೇಶದಲ್ಲಿ ಇತ್ತೀಚೆಗೆ ಭಾರಿ ಪ್ರಮಾಣದಲ್ಲಿ ಮಾನವ ನಷ್ಟ ಹಾಗೂ ಆಸ್ತಿ ಪಾಸ್ತಿಗಳ ನಷ್ಟವಾಗುತ್ತಿರುವುದು ವಿಶ್ವಕ್ಕೆ ಅಘಾತವನ್ನುಂಟು ಮಾಡುತ್ತಿದೆ. ಈ ರೀತಿ ಪಾಪಿಗಳ ದುಶ್ಕೃತ್ಯಕ್ಕೆ ಜನರ ಜೀವ ಹಾಗೂ ಜೀವನ ಹಾಳಾಗುತ್ತಿರುವುದು ಭಾರಿ ನೋವಿನ ಸಂಗತಿಯಾಗಿದೆ ಎಂದು ಸಾಮಾನ್ಯರು ನೊಂದುಕೊಳ್ಳುತ್ತಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ