NEWSದೇಶ-ವಿದೇಶ

ಕರ್ನಾಟಕ – ಮಹಾರಾಷ್ಟ್ರ ಗಡಿಭಾಗದಲ್ಲಿ  ಹೈ ಅಲರ್ಟ್‌

ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ವಾಹನಗಳ ಸಂಚಾರ  ನಿಷೇಧ l ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ತೆರಳದಂತೆ  ತಡೆ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಕೋವಿಡ್-19 ತಡೆಗಟ್ಟುವ ಹಿನ್ನೆಲೆಯಲ್ಲಿ ಚಿಕ್ಕೋಡಿಯ ಉಪವಿಭಾಗಧಿಕಾರಿ ರವೀಂದ್ರ ಕಲಿಂಗನ್ನವರ ಬೋರಗಾಂವ ಚೆಕ್ ಪೋಸ್ಟಗೆ ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ಮಾತನಾಡಿದ ಅವರು ಕರ್ನಾಟಕ – ಮಹಾರಾಷ್ಟ್ರದ ಗಡಿಭಾಗದಲ್ಲಿರುವ  ಬೋರಗಾಂವ ಪಟ್ಟಣದಲ್ಲಿ  ಚೆಕ್ ಪೋಸ್ಟ್ ನಿರ್ಮಿಸಿದ್ದು. ಮಹಾರಾಷ್ಟ್ರದಿಂದ ಕರ್ನಾಟಕ ರಾಜ್ಯಕ್ಕೆ ಬರುವಂತಹ ವಾಹನಗಳ ಸಂಚಾರ  ನಿಷೇಧಿಸಲಾಗಿದೆ ಹಾಗೂ ಕರ್ನಾಟಕ ರಾಜ್ಯದ ಜನರನ್ನು ಮಹಾರಾಷ್ಟ್ರ ರಾಜ್ಯಕ್ಕೆ ತೆರಳದಂತೆ  ತಡೆ ಹಿಡಿಯಲಾಗುತ್ತಿದೆ. ಒಂದೆಡೆಯಲ್ಲಿ ಮಹಾರಾಷ್ಟ್ರ ರಾಜ್ಯದ ದಲ್ಲಿ ಕೋವಿಡ್-೧೯  ಸೋಂಕಿನ ಪ್ರಕರಣಗಳು ದಿನದಿಂದ ದಿನ ಹೆಚ್ಚಾಗಿ ಕಂಡು ಬರುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಈಗಾಗಲೇ  144 ಕಲಂ ಜಾರಿಯಲ್ಲಿದ್ದು,   ಸಾರ್ವಜನಿಕರು    ಅನಗತ್ಯವಾಗಿ ಮನೆಯಿಂದ ಹೊರಗಡೆಗೆ   ಪ್ರಯಾಣಿಸಬಾರದು ನಿಯಮ‌ ಉಲ್ಲಂಘಿಸಿ ಪ್ರಯಾಣ‌ ಮಾಡಿದರೆ ಅಂತವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡಲು ಚೆಕ್ ಪೋಸ್ಟನಲ್ಲಿರುವ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು‌.

ಈ ಚೆಕ್ ಪೋಸ್ಟನಲ್ಲಿ  ಬೋರಗಾಂವ  ಪ್ರಾಥಮಿಕ  ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿಗಳು ಹಾಗೂ ಸದಲಗಾ ಪೊಲೀಸ್‌ ಠಾಣೆಯ ಪೋಲಿಸ  ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆತರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಬೋರಗಾಂವ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿಗಳಾದ ಡಾ. ಬೆಣ್ಣಿ ಮಾತನಾಡಿ, ಕೋವಿಡ್ 19 ಬಗ್ಗೆ ಭಯ ಬೇಡ ಏಚ್ಚರಿಕೆ  ಇರಲಿ ಸಾರ್ವಜನಿಕರು ಮನೆಯಿಂದ ಹೋರಗಡೆಗೆ ಹೊಗುವಾಗ  ಮುನ್ನೆಚ್ಚರಿಕೆಯಾಗಿ ಮಾಸ್ಕ ಹಾಗೂ ಸ್ಯಾನಿಟೈಸರಗಳನ್ನು ಬಳಕೆ ಮಾಡಬೇಕೆಂದು  ಸಲಹೆಗಳನ್ನು ನೀಡಿದರು.

ಚೆಕ್ ಪೋಸ್ಟ್ ನಲ್ಲಿ ಸ್ಕೀನೀಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು ದಿನಬಳಕೆಗೆ ಅವಶ್ಯಕವಿರುವಂತಹ ತರಕಾರಿ, ಹಾಲಿನ ಹಾಗೂ ದಿನಸಿ ವಾಹನಗಳಿಗೆ ಮಾತ್ರ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ದಿನದ  24×7 ಎಲ್ಲ ವಾಹನಗಳ ಮೇಲೆ ನಿಗಾ ವಹಿಸಲಾಗುತ್ತಿದ್ದು. ವಾಹನದಲ್ಲಿರುವ  ಚಾಲಕರು ಹಾಗೂ ಕ್ಲಿನರ್ಗಳಿಗೆ  ಸ್ಕ್ರೀನಿಂಗ್  ಮುಖಾಂತರ ಪರೀಕ್ಷೆ ಮಾಡಲಾಗುತ್ತಿದೆ.

ಸಾರ್ವಜನಿಕರು ತಾತ್ಕಾಲಿಕವಾಗಿ ಪ್ರವಾಸಗಳನ್ನು ರದ್ದು ಮಾಡಬೇಕು ಕೋವಿಡ್  19 ಪ್ರಕರಣಗಳು ತಡೆಗಟ್ಟಲು ಸಾರ್ವಜನಿಕರು ಸ್ಪಂದಿಸಬೇಕು, ಸರ್ಕಾರದ ನಿಯಮಗಳನ್ನು ಪ್ರತಿಯೊಬ್ಬರು ಪಾಲನೆ ಮಾಡಿದರೆ ಇದನ್ನು ನಿಯಂತ್ರಿಸಲು ಸಾಧ್ಯ ಏಂದು ಮಾಹಿತಿ ನೀಡಿದರು.

ಪಟ್ಟಣದಲ್ಲಿ ಧ್ವನಿವರ್ಧಕ ಮತ್ತಿತರ ಪರಿಕರಗಳನ್ನು ಬಳಸಿಕೊಂಡು ಸೋಂಕಿನ ಕುರಿತು ಮುಂಜಾಗ್ರತೆವಾಗಿ  ತೆಗೆದುಕೊಳ್ಳಬೇಕಾದ  ಕ್ರಮಗಳು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಕುರಿತು ಜನಜಾಗೃತಿ ಮಾಡಿಸಲಾಗುತ್ತಿದ್ದು ಜನರು ಈ ಎಲ್ಲ ನಿಯಮಗಳನ್ನು ಪಾಲನೆ‌ಮಾಡಬೇಕೆಂದು ಅವರು ತಿಳಿಸಿದರು.

ಚಿಕ್ಕೋಡಿಯ ಉಪವಿಭಾಗಾಧಿಕಾರಿ ರವೀಂದ್ರದ   ಕರಲಿಂಗನ್ನವರ,  ತಹಶಿಲ್ದಾರ ಸುಭಾಶ ಸಂಪಗಾವಿ, ಸಿ.ಪಿ.ಐ ಆರ್.ಆರ್ ಪಾಟೀಲ  ಬೋರಗಾಂವ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿ  ಡಾ. ಎಸ್ ಬೆಣ್ಣಿ, ಸದಲಗಾ ಪೊಲೀಸ್‌ ಸಬ್ ಇನ್ಸ್ಪೆಕ್ಟರ್ ಅನಿಲ ಕುಂಬಾರ ಹಾಗೂ ಆಶಾ ಕಾರ್ಯಕರ್ತೆಯರು ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...