CrimeNEWSನಮ್ಮಜಿಲ್ಲೆ

ಕಾರು-ಲಾರಿ ನಡುವೆ ಭೀಕರ ಅಪಘಾತ- ಒಂದೇ ಕುಟುಂಬದ ನಾಲ್ವರು ಸಾವು, ಮೂವರ ಸ್ಥಿತಿ ಗಂಭೀರ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಕಾರು ಮತ್ತು ಲಾರಿ ನಡುವೆ ಸಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಧಾರುಣವಾಗಿ ಸಾವನ್ನಪ್ಪಿದ್ದು ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಬಳಿ ನಡೆದಿದೆ.

ಕಾರು-ಸಿಮೆಂಟ್ ಸಾಗಾಟ ಮಾಡುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ದುರಂತ ಸಂಭವಿಸಿದ್ದು, ಕಾರಿನಲ್ಲಿದ್ದ ಬ್ಯಾಂಕ್ ಉದ್ಯೋಗಿ ಅರ್ಜುನ್ ಹಾಗೂ ಅವರ ಮಗ ಮೇಘರಾಜ, ಮಾವ ರವಿನಾಥ್, ಅತ್ತೆ ಸಾವನ್ನಪ್ಪಿದ್ದಾರೆ. ಮತ್ತೋರ್ವ ಬಾಲಕಿಯ ಸ್ಥಿತಿ ಗಂಭೀರವಾಗಿದ್ದು, ಬಾಲಕಿಯನ್ನು ವಿಜಯಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿ ಒಟ್ಟು ಏಳು ಜನರಿದ್ದರು. ಅವರಲ್ಲಿ ಅರ್ಜುನ್ ಅವರ ಹೆಂಡತಿ, ಇಬ್ಬರು ಮಕ್ಕಳಿಗೆ ಗಂಭೀರ ಗಾಯವಾಗಿದೆ. ಅರ್ಜುನ್​ ಅವರಿಗೆ ರವಿನಾಥ್ ಮಗಳು ಜಯಶ್ರೀಯನ್ನು ಮದುವೆ ಮಾಡಿಕೊಟ್ಟಿದ್ದರು. ಅರ್ಜುನ್ ಅವರಿಗೆ​ ಮೂವರು ಮಕ್ಕಳಿದ್ದು, ಅವರಲ್ಲಿ ಮೇಘರಾಜ ಮತ್ತ ಅಪ್ಪ ಮೃತಪಟ್ಟಿದ್ದಾರೆ.

6 ವರ್ಷದ ನಯನಾ ಸ್ಥಿತಿ ಗಂಭೀರವಾಗಿದ್ದು, 13 ವರ್ಷದ ಮತ್ತೊಬ್ಬ ಮಗ ಪ್ರೇಮಸಿಂಗ್​ಗೂ ಗಾಯವಾಗಿದೆ. ಇವರು ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಬರಟಗಿ ತಾಂಡಾದ ನಿವಾಸಿಗಳು. ಮೃತ ರವಿನಾಥ ಸುನಿಲಾಲ್ ಪತ್ತಾರ (68 ), ಪುಷ್ಪಾ ರವಿನಾಥ ಪತ್ತಾರ ( 59) ಇಬ್ಬರು ಗಂಡ-ಹೆಂಡತಿ. ಇವರು ಬಾಗಲಕೋಟೆ ಜಿಲ್ಲೆ ಮುಧೋಳ ಪಟ್ಟಣದ ನಿವಾಸಿಗಳು.

33 ವರ್ಷದ ಜಯಶ್ರೀ ಅರ್ಜುನ ರಜಪೂತ, 6 ವರ್ಷದ ನಯಾರಾ ಅರ್ಜುನ ರಜಪೂತ, 13 ವರ್ಷದ ಪ್ರೇಮಸಿಂಗ್ ಅರ್ಜುನ ರಜಪೂತಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಜಯಪುರದಿಂದ ಮಹಾಲಿಂಗಪುರಕ್ಕೆ ಮನೆ ಸ್ಥಳಾಂತರಿಸಲು ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

ಬ್ಯಾಂಕ್ ಉದ್ಯೋಗಿಯಾಗಿದ್ದ ಅರ್ಜುನ್ ಸಿಂಗ್​​ಗೆ ಮಹಾಲಿಂಗಪುರದಿಂದ ವಿಜಯಪುರಕ್ಕೆ ವರ್ಗಾವಣೆ ಆಗಿತ್ತು. ಮನೆ ಸ್ಥಳಾಂತರಿಸಲು ವಿಜಯಪುರದಿಂದ ಜಮಖಂಡಿ ಮಾರ್ಗವಾಗಿ ಮಹಾಲಿಂಗಪುರಕ್ಕೆ ತೆರಳುತ್ತಿದ್ದರು. (KA 28 D 1021) ಕಾರಿನಲ್ಲಿ ಏಳು ಜನ ತೆರಳುತ್ತಿದ್ದರು. ಜಮಖಂಡಿಯಿಂದ ಸಿಮೆಂಟ್ ಲೋಡ್ ಇದ್ದ (KA 16 B 6472) ಲಾರಿ ವಿಜಯಪುರದತ್ತ ಬರುತ್ತಿದ್ದ ವೇಳೆ ಮುಖಾಮುಖಿ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ