NEWSನಮ್ಮರಾಜ್ಯ

ಕಲಬುರಗಿ ಇಎಸ್ಐಸಿ, ಜಿಮ್ಸ್ ಆಸ್ಪತ್ರೆ‌‌ ಅವರಣದಲ್ಲಿ ಔಷಧ ಸಿಂಪರಣೆ

ಕೊರೊನಾ ಬಗ್ಗೆ ಮುನ್ನೆಚರಿಕೆ ಕ್ರಮ l ವೈರಸ್‌ ನಿಯಂತ್ರಣಕ್ಕೆ ಜಾಗೃತಿ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕೊರೊನಾ ಸಾಂಕ್ರಾಮಿಕ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ  ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಜಿಮ್ಸ್ ಮತ್ತು ಇ.ಎಸ್.ಐ.ಸಿ ಮೆಡಿಕಲ್ ಕಾಲೇಜಿನ ಆಸ್ಪತ್ರೆ ಮತ್ತು ಸುತ್ತಮುತ್ತ ಶುಚಿತ್ವ ಮತ್ತು ನೈರ್ಮಲ್ಯ ಕಾಪಾಡುವ ಉದ್ದೇಶದಿಂದ ಮಂಗಳವಾರ ಬೆಳಗ್ಗೆ ಡಿಸ್ ಇನ್ಫೆಕ್ಷನ್ ಔಷಧ ಸಿಂಪರಣೆ ಕಾರ್ಯ ನಡೆಯಿತು.

ನೀರು, ಫಿನೈಲ್ ಹಾಗೂ ಡೆಟಾಲ್ ಮಿಶ್ರಣವುಳ್ಳ ಡಿಸ್‍ಇನ್‍ಫೆಕ್ಷನ್ ಔಷಧಿ ಬೆಳಗ್ಗೆ ಸಿಂಪಡಿಸಲಾಯಿತು. ಸಾಯಂಕಾಲ ನೀರು ಮತ್ತು ಬ್ಲೀಚಿಂಗ್ ಪೌಡರ್ ಮಿಶ್ರಣವುಳ್ಳ ಹೈಪೊಫ್ಲೋರೈಡ್ ಸೊಲ್ಯೂಷನ್ ಲಿಕ್ವಿಡ್ ಫಾಗಿಂಗ್ ಸಹ ಮಾಡಲಾಗುತ್ತಿದೆ. ಈ ಅಸ್ಪತ್ರೆಗಳ ಆವರಣದ ಮತ್ತು ಸುತ್ತಮುತ್ತ ಪ್ರತಿ ದಿನವು ಔಷಧ ಸಿಂಪಡಿಸುವ ಕಾರ್ಯ ಮುಂದುವರಿಯಲಿದೆ.

ಕಲಬುರಗಿಯಲ್ಲಿ ಸಂಪೂರ್ಣವಾಗಿ ಕೊರೋನಾವನ್ನು ಹತೋಟಿಯಲ್ಲಿಡಲು ಜಿಲ್ಲಾಡಳಿತ ಮತ್ತು ಸ್ಥಳೀಯ ಶಾಸಕರ ನಿರ್ದೇಶನದಂತೆ ಈ ರೀತಿಯ ಔಷಧ ಸಿಂಪರಣೆ ಕಾರ್ಯ ಸೋಮವಾರದಿಂದ ಆರಂಭಗೊಂಡಿದೆ.

ಸೋಮವಾರ ನಗರದ ಪ್ರಮುಖ ರಸ್ತೆಗಳಾದ ಹುಮನಾಬಾದ್ ಬೇಸ್ -ಸೂಪರ್ ಮಾರ್ಕೆಟ್-ಜಗತ್ ವೃತ್ತ-ಸರ್ದಾರ ವಲ್ಲಭಭಾಯಿ ಪಟೇಲ್ -ರಾಷ್ಟ್ರಪತಿ ಚೌಕ್-ರಾಮ ಮಂದಿರ-ಹಳೇ ಜೇವರ್ಗಿ ರಸ್ತೆಯಲ್ಲಿ ಔಷಧಿ ಸಿಂಪಡಿಸಲಾಗಿದೆ.

ಮಂಗಳವಾರ ಬೆಳಿಗ್ಗೆ ನಗರದ ಟೌನ್ ಹಾಲ್ ನಿಂದ ಅರ್.ಟಿ.ಓ.ಕ್ರಾಸ್-ಖರ್ಗೆ ಪೆಟ್ರೋಲ್ ಪಂಪ್-ಇ.ಎಸ್.ಐ.ಸಿ. ಮೆಡಿಕಲ್ ಕಾಲೇಜಿನ ವರೆಗೆ ಸಿಂಪಡಿಸಲಾಯಿತು.

ಕಂಟೇನ್ ಮೆಂಟ್ ಝೋನ್ ನಲ್ಲಿ ಇಂದು ಸಿಂಪರಣೆ: ನಗರದಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾದ ವ್ಯಕ್ತಿಗಳ ವಾಸಸ್ಥಾನಗಳಾದ ಕಲಬುರಗಿಯ ವಾರ್ಡ್ ನಂ.14 ಮತ್ತು 30 ರಲ್ಲಿ ಮಂಗಳವಾರ ಔಷಧ ಸಿಂಪರಣೆ ಜೊತೆ ಸ್ಯಾನಿಟೈಸರ್‌ ಔಷಧ ಸಿಂಪರಣೆ‌ ಸಹ ನಡೆಯಲಿದೆ. ಮುಂದಿನ ಒಂದು ತಿಂಗಳು ಕಾಲ ನಗರದೆಲ್ಲೆಡೆ ಈ ರೀತಿಯ ನಿರಂತರ ಔಷಧ ಸಿಂಪರಣೆ ಕಾರ್ಯ ಮುಂದುವರೆಯಲಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ರಾಹುಲ ಪಾಂಡ್ವೆ ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ