NEWS

ಕೋಲಾರದಲ್ಲಿ ಸಾರಿಗೆ ನೌಕರರ ಬೃಹತ್‌ ಸಮಾವೇಶ – ವಿವಿಧೆಡೆಯಿಂದ ತಮ್ಮದೇ ನಿಗಮಗಳ ಬಸ್‌ ಬಾಡಿಗೆಗೆ ಪಡೆದು ಬರುತ್ತಿರುವ ನೌಕರರು

ವಿಜಯಪಥ ಸಮಗ್ರ ಸುದ್ದಿ

ಕೋಲಾರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ರಾಜ್ಯಾದ್ಯಂತ ಕಳೆದ ಅ.10ರಂದು ಬಳ್ಳಾರಿಯಲ್ಲಿ ಚಾಲನೆ ನೀಡಿರುವ ಬೃಹತ್‌ ಸೈಕಲ್‌ ಜಾಥಾವು  ಇಂದಿಗೆ 47ನೇ ದಿನಕ್ಕೆ ಕಾಳಿಟ್ಟಿದ್ದು ಕೋಲಾರದಲ್ಲಿ ಬೃಹತ್‌ ಸಮಾವೇಶವನ್ನು ಹಮ್ಮಿಕೊಂಡಿದೆ.

ಈ ಸೈಕಲ್‌ ಜಾಥಾ ಕಳೆದ 46ದಿನಗಳಿಂದ ಬಳ್ಳಾರಿ, ಹೊಸಪೆಟೆ, ಕಲಬುರಗಿ, ಬೀದರ್‌, ದಾವಣಗೆರೆ, ಚಿತ್ರದುರ್ಗ, ಹುಬ್ಬಳಿ, ವಿಜಯಪುರ, ತುಮಕೂರು ಸೇರಿದಂತೆ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸಂಚರಿಸಿದ್ದು, ಹೋದೆಡೆಯಲ್ಲ ಜಿಲ್ಲಾಧಿಕಾರಿಗಳ ಕಚೇರಿಗೆ ಸೈಕಲ್‌ ಜಾಥಾದ ಜತೆಗ ಪಾದಯಾತ್ರೆಯನ್ನು ನಡೆಸಿ ಜಿಲ್ಲಾಧಿಕಾರಿಗಳಿಗೆ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಒತ್ತಾಯಿಸುವಂತೆ ಮನವಿ ಪತ್ರವನ್ನು ಸಲ್ಲಿಸಿದೆ.

ಇನ್ನು ಈ ಸೈಕಲ್‌ ಜಾಥಾ ಸಂಚರಿಸಿರುವ ಜಿಲ್ಲೆಗಳಲ್ಲಿ ಸಾರಿಗೆ ನೌಕರರು ನಾ ಆ ಸಂಘಟನೆ ಈ ಸಂಘಟನೆಯವನು ಎಂಬುದನ್ನು ಬದಿಗೊತ್ತಿ ಒಗ್ಗಟ್ಟಿನಿಂದ ಒಂದೆಡೆ ಸೇರಿ ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲೇ ಬೇಕು ಎಂದು ಸರ್ಕಾರವನ್ನು ಎಚ್ಚರಿಸಿದ್ದಾರೆ.

ಇನ್ನು ಸೈಕಲ್‌ ಜಾಥಾ ಆರಂಭವಾಗಿ 47 ದಿನಗಳು ಇಂದಿಗೆ ಆಗಿದ್ದು, ಇಂದು ಕೋಲಾರದಲ್ಲಿ ಮೊದಲ ಹಂತದ ಸೈಕಲ್‌ ಜಾಥಾವನ್ನು ಪೂರ್ಣಗೊಳಿಸಲಾಗುವುದು. ಹೀಗಾಗಿ ನಾವು ಇಂದು ಇಲ್ಲಿ ಬೃಹತ್‌ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ ಎಂದು ಜಾಥಾದ ರೂವಾರಿ ಮತ್ತು ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್‌ ವಿಜಯಪಥಕ್ಕೆ ತಿಳಿಸಿದ್ದಾರೆ.

ಈ ಬೃಹತ್‌ ಸಮಾವೇಶಕ್ಕೆ ಮಠಾಧೀಶರು ಸೇರಿದಂತೆ ಹಲವಾರು ಸಂಘಟನೆಗಳ ಪ್ರಮುಖರು ಅವರ ಜತೆಗೆ ನಮ್ಮ ಸಾರಿಗೆಯ ನಾಲ್ಕೂ ನಿಗಮಗಳ ಸಾವಿರಾರು ನೌಕರರು ಭಾಗವಹಿಸುತ್ತಿದ್ದಾರೆ ಎಂದು ವಿವರಿಸಿದರು.

ಇನ್ನು ಇಂದು ಕೋಲಾರದಲ್ಲಿ ನಡೆಯುತ್ತಿರುವ ಮೊದಲ ಹಂತದ ಎರಡನೆಯ ಬೃಹತ್‌ ಸಾರಿಗೆ ನೌಕರರ ಸಮಾವೇಶಕ್ಕೆ ಬರುವ ಸಲುವಾಗಿಯೇ ತಮ್ಮದೆ ನಿಗಮದ ಬಸ್‌ಗಳನ್ನು ಸಾರಿಗೆ ನೌಕರರು ಬುಕ್‌ ಮಾಡಿದ್ದು, ರಾಜ್ಯದ ವಿವಿಧ ಘಟಕಗಳಿಂದ ಬಸ್‌ಗಳು ಸಾರಿಗೆ ನೌಕರರನ್ನು ಹೊತ್ತು ಕೋಲಾರದತ್ತ ಬರುತ್ತಿವೆ ಎಂದು ಕಲಬುರಗಿಯ ಕೂಟದ ಪದಾಧಿಕಾರಿಗಳು ತಿಳಿಸಿದ್ದಾರೆ.

ಒಟ್ಟಾರೆ ತಮ್ಮ ದಶಕಗಳ ಬೇಡಿಕೆಗಳನ್ನು ಈಡೇರಿಸಿಕೊಳ್ಳಲೇ ಬೇಕು ಎಂದು ಪಣ ತೊಟ್ಟಿರುವ ಸಾರಿಗೆ ನೌಕರರು ತೆರೆ ಮರೆಯಲ್ಲಿ ಮತ್ತು ನೇರನೇರವಾಗಿಯೇ ಕಸಲರತ್ತು ನಡೆಸುತ್ತಿದ್ದಾರೆ. ನೌಕರರ ಬೇಡಿಕೆಗಳು ನ್ಯಾಯಯುತವಾಗಿದ್ದು, ಅವುಗಳನ್ನು ಸರ್ಕಾರ ಈಡೇರಿಸಲೇ ಬೇಕು ಎಂದು ಹಲವಾರು ಮಠಾಧೀಶರು ಮತ್ತು ವಿವಿಧ ಸಂಘಟನೆಗಳು ಪ್ರಮುಖರು ಸರ್ಕಾರವನ್ನು ಒತ್ತಾಯಿಸುತ್ತಿದ್ದು, ನೌಕರರಿಗೆ ಬೆಂಬಲವನ್ನು ನೀಡುತ್ತಿದ್ದಾರೆ.

ಇಂದು ನಡೆಯುವ ಸಾರಿಗೆ ನೌಕಕರರ ಬೃಹತ್‌ ಸಮಾವೇಶಕ್ಕೆ ಸಾರಿವರಾರು ನೌಕರರು ಸಾಕ್ಷಿಯಾಗಿಲಿದ್ದು, ಈ ಮೂಲಕ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶವನ್ನು ರವಾನಿಸಲಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ