CrimeNEWSನಮ್ಮಜಿಲ್ಲೆ

ಕೋಲಾರ: KSRTC ಶ್ರೀನಿವಾಸಪುರ ಘಟಕ ವ್ಯವಸ್ಥಾಪಕರ ಕಿರುಕುಳದಿಂದ ನೊಂದ ನಿರ್ವಾಹಕ ನೇಣಿಗೆ ಶರಣು

ವಿಜಯಪಥ ಸಮಗ್ರ ಸುದ್ದಿ

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್ ಒಬ್ಬರು ಅಧಿಕಾರಿಗಳ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ.

ಉಪ್ಪುಕುಂಟೆ ಗ್ರಾಮದ ಸೋಮಾಚಾರಿ (50) ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ನಿರ್ವಾಹಕರು. ಮೃತ ಕಂಡಕ್ಟರ್​ ಇತ್ತೀಚೆಗೆ ಪೆರಾಲಿಸಿಸ್ ಕಾಯಿಲೆಗೆ ತುತ್ತಾಗಿದ್ದರು. ಈ ಮಧ್ಯೆ ಕೆಲಸದ ವೇಳೆ ಶ್ರೀನಿವಾಸಪುರ ಡಿಪೋ ವ್ಯವಸ್ಥಾಪಕ ವೆಂಕಟೇಶ್ ಎಂಬುವವರು ಉದ್ದೇಶಪೂರ್ವಕವಾಗಿ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ಹಿರಿಯ ಅಧಿಕಾರಿಯ ಕಿರುಕುಳದಿಂದ ಮಾನಸಿಕವಾಗಿ ನೊಂದಿದ್ದ ಸೋಮಾಚಾರಿ ಅವರು, ಇಂದು ಬೆಳಗಿನ ಜಾವ ಅವರ ತೋಟದ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಡ್ಯದಲ್ಲಿ ಕಂಡಕ್ಟರ್​ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಾಸುವ ಮುನ್ನವೇ ಇದೀಗ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿರುವುದು ನೌಕರರಲ್ಲಿ ಆತಂಕ ಹೆಚ್ಚಿಸಿದೆ. ಈ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣಾ‌ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹೌದು ಇದೇ ತಿಂಗಳ ಜು.5ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ಡಿಪೋ ಆವರಣದಲ್ಲೇ ಕೆಎಎಸ್​ಆರ್​​ಟಿಸಿ ಬಸ್ ಚಾಲಕ ಕಂ ನಿರ್ವಾಹಕ ಜಗದೀಶ್​ ಎಂಬುವವರು, ಸಚಿವ ಎನ್. ಚಲುವರಾಯಸ್ವಾಮಿಯವರು ರಾಜಕೀಯ ದ್ವೇಷದಿಂದ ನನ್ನನ್ನು ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ, ವರ್ಗಾವಣೆಯಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿತ್ತು. ಕೂಡಲೇ ಅಸ್ವಸ್ಥಗೊಂಡ ಜಗದೀಶ್ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿ, ಚಿಕಿತ್ಸೆ ಪಡೆದು ಪ್ರಾಣಾಪಾಯದಿಂದ ಪಾರಾಗಿದ್ದರು.

ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ಪರ ಕೆಲಸ ಮಾಡಿದ್ದಕ್ಕಾಗಿ ನನ್ನನ್ನು, ರಾಜಕೀಯ ದ್ವೇಷದಿಂದ ವರ್ಗಾವಣೆ ಮಾಡಿದ್ದಾರೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಚಾಲಕ ಜಗದೀಶ್ ವಿಷ ಸೇವಿಸಿದ್ದರು.

ಈ ಕಹಿ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಬ್ಬ ಕೆಎಸ್​ಆರ್​ಟಿಸಿ ಕಂಡಕ್ಟರ್​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಅಧಿಕಾರಿಗಳ ಕಿರುಕುಳದಿಂದ ಈಗಾಗಲೇ ಹಲವು ಮಂದಿ ನೌಕರರು ತಮ್ಮ ಜೀವವನ್ನೇ ಕಳೆದುಕೊಂಡಿದ್ದಾರೆ. ಆದರೂ ಯಾವೊಬ್ಬ ಅಧಿಕಾರಿಗೂ ಶಿಕ್ಷೆ ಮಾತ್ರ ಆಗಿಲ್ಲ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು