CrimeNEWSನಮ್ಮಜಿಲ್ಲೆ

ಕೋಲಾರ: KSRTC ಶ್ರೀನಿವಾಸಪುರ ಘಟಕ ವ್ಯವಸ್ಥಾಪಕರ ಕಿರುಕುಳದಿಂದ ನೊಂದ ನಿರ್ವಾಹಕ ನೇಣಿಗೆ ಶರಣು

ವಿಜಯಪಥ ಸಮಗ್ರ ಸುದ್ದಿ

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್ ಒಬ್ಬರು ಅಧಿಕಾರಿಗಳ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ.

ಉಪ್ಪುಕುಂಟೆ ಗ್ರಾಮದ ಸೋಮಾಚಾರಿ (50) ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ನಿರ್ವಾಹಕರು. ಮೃತ ಕಂಡಕ್ಟರ್​ ಇತ್ತೀಚೆಗೆ ಪೆರಾಲಿಸಿಸ್ ಕಾಯಿಲೆಗೆ ತುತ್ತಾಗಿದ್ದರು. ಈ ಮಧ್ಯೆ ಕೆಲಸದ ವೇಳೆ ಶ್ರೀನಿವಾಸಪುರ ಡಿಪೋ ವ್ಯವಸ್ಥಾಪಕ ವೆಂಕಟೇಶ್ ಎಂಬುವವರು ಉದ್ದೇಶಪೂರ್ವಕವಾಗಿ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ಹಿರಿಯ ಅಧಿಕಾರಿಯ ಕಿರುಕುಳದಿಂದ ಮಾನಸಿಕವಾಗಿ ನೊಂದಿದ್ದ ಸೋಮಾಚಾರಿ ಅವರು, ಇಂದು ಬೆಳಗಿನ ಜಾವ ಅವರ ತೋಟದ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಡ್ಯದಲ್ಲಿ ಕಂಡಕ್ಟರ್​ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಾಸುವ ಮುನ್ನವೇ ಇದೀಗ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿರುವುದು ನೌಕರರಲ್ಲಿ ಆತಂಕ ಹೆಚ್ಚಿಸಿದೆ. ಈ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣಾ‌ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹೌದು ಇದೇ ತಿಂಗಳ ಜು.5ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ಡಿಪೋ ಆವರಣದಲ್ಲೇ ಕೆಎಎಸ್​ಆರ್​​ಟಿಸಿ ಬಸ್ ಚಾಲಕ ಕಂ ನಿರ್ವಾಹಕ ಜಗದೀಶ್​ ಎಂಬುವವರು, ಸಚಿವ ಎನ್. ಚಲುವರಾಯಸ್ವಾಮಿಯವರು ರಾಜಕೀಯ ದ್ವೇಷದಿಂದ ನನ್ನನ್ನು ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ, ವರ್ಗಾವಣೆಯಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿತ್ತು. ಕೂಡಲೇ ಅಸ್ವಸ್ಥಗೊಂಡ ಜಗದೀಶ್ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿ, ಚಿಕಿತ್ಸೆ ಪಡೆದು ಪ್ರಾಣಾಪಾಯದಿಂದ ಪಾರಾಗಿದ್ದರು.

ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ಪರ ಕೆಲಸ ಮಾಡಿದ್ದಕ್ಕಾಗಿ ನನ್ನನ್ನು, ರಾಜಕೀಯ ದ್ವೇಷದಿಂದ ವರ್ಗಾವಣೆ ಮಾಡಿದ್ದಾರೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಚಾಲಕ ಜಗದೀಶ್ ವಿಷ ಸೇವಿಸಿದ್ದರು.

ಈ ಕಹಿ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಬ್ಬ ಕೆಎಸ್​ಆರ್​ಟಿಸಿ ಕಂಡಕ್ಟರ್​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಅಧಿಕಾರಿಗಳ ಕಿರುಕುಳದಿಂದ ಈಗಾಗಲೇ ಹಲವು ಮಂದಿ ನೌಕರರು ತಮ್ಮ ಜೀವವನ್ನೇ ಕಳೆದುಕೊಂಡಿದ್ದಾರೆ. ಆದರೂ ಯಾವೊಬ್ಬ ಅಧಿಕಾರಿಗೂ ಶಿಕ್ಷೆ ಮಾತ್ರ ಆಗಿಲ್ಲ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ