CrimeNEWS

ಕಾಳಿಕಾದೇವಿ ಜಾತ್ರಾ ರಥೋತ್ಸವ-15 ಜನರ ವಿರುದ್ಧ FIR

ಲಾಕ್ ಡೌನ್ ಆದೇಶ ಉಲ್ಲಂಘಿಸಿದ ಗೊಲ್ಲರಹಳ್ಳಿಯ ಜನತೆ

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ: ಕೋವಿಡ್-19 ಹಿನ್ನೆಲೆ ಈಗಾಗಲೇ ದೇಶದಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ. ಕೋರೊನಾ ವೈರಸ್ ಸೊಂಕು ವ್ಯಾಪಕವಾಗಿ ಹರಡದಂತೆ ತಡೆಗಟ್ಟುವ ಹಾಗೂ ಅದರ ಸರಪಳಿಯನ್ನು ತುಂಡರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕರ್ಫ್ಯೂ ಜಾರಿಗೊಳಿಸಲಾಗಿದ್ದರೂ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗೊಲ್ಲರಹಳ್ಳಿಯಲ್ಲಿ ಆದೇಶ ಉಲ್ಲಂಘಿಸಿ ಕಾಳಿಕಾದೇವಿ ರಥೋತ್ಸವ ನಡೆಸಲಾಗಿದ್ದು, ಈ ಹಿನ್ನೆಲೆಯಲ್ಲಿ 15ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಗೊಲ್ಲರಹಳ್ಳಿ ಗ್ರಾಮದ ಮುಖಂಡರಾದ ಕಾಳಪ್ಪ ಫಕ್ಕಿರಪ್ಪ(42),ಜಿ.ಬಿ.ನಾಗರಾಜ (50),ದಾಸರ ವೆಂಕಟೇಶ (46),ಕೋಮಾರಪ್ಪ(70),ಅನಂತಪ್ಪ ಡಿ.ಕೆ(58),ಸುರೇಶ ಮೈಲಪ್ಪ(36),ಕೆಂಚಪ್ಪ ಕಾಳಪ್ಪ(45),ಸಣ್ಣ ಹನುಮಂತಪ್ಪ(85),ನಾಗರಾಜ ಬನ್ನಿಯಪ್ಪ(40),ಈರಮ್ಮನವರ್ ಕೆಂಚಪ್ಪ(70),ಪುರ್ಲಿ ಕಾಳಶ್ರಪ್ಪ(40),ಸೋಮಪ್ಪ ಹುಚ್ಚಪ್ಪ(32),ಸುಣಗಾರ ದುರ್ಗೇಶ(37),ಗುರಿಕಾರ ಕಾಳಪ್ಪ ಮತ್ತು ಬಲವಂತಪ್ಪ ಎಂಬುವರ ವಿರುದ್ಧ   ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಸರಕಾರ ಹಾಗೂ ಜಿಲ್ಲಾಧಿಕಾರಿಗಳ ಆದೇಶ ಉಲ್ಲಂಘಿಸಿ 5ಜನಕ್ಕಿಂತ ಹೆಚ್ಚು ಜನ ಸೇರಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳದೇ ಪ್ರಾಣಕ್ಕೆ ಅಪಾಯಕಾರಿಯಾದ  ಕೊರೊನಾ ಸಾಂಕ್ರಮಿಕ ರೋಗ ಹರಡುತ್ತದೆ ಅಂತ ಗೊತ್ತಿದ್ದರೂ ನಿರ್ಲಕ್ಷ್ಯ ವಹಿಸಿ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿ ರಥವನ್ನು ಎಳೆದಿದ್ದಾರೆ.

6ರ ಸುಮಾರಿಗೆ ಎಳೆಯಬೇಕಾದ ತೇರನ್ನು ಮಧ್ಯಾಹ್ನ 3:30ಕ್ಕೆ ಎಳೆಯಲಾಗಿದೆ. ರಥ ಎಳೆಯುವ ಸಮಯದಲ್ಲಿ ಗ್ರಾಮದ ಜಿ.ಬಿ.ನಾಗರಾಜ ಇವರ ಕಾಲಿನ ಮೇಲೆ ರಥದ ಚಕ್ರ ಹಾಯ್ದು ಕಾಲಿಗೆ ರಕ್ತಗಾಯವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗ್ರಾಮದಲ್ಲಿ ಒಂದು ದಿನ ಮುಂಚೆ ತೆರಳಿ ರಥೋತ್ಸವ ಜರುಗಿಸದಂತೆ ಹಾಗೂ ಕೊರೊನಾ ವೈರಸ್ ಕುರಿತು ತಿಳಿವಳಿಕೆ ನೀಡಿ ಬರಲಾಗಿದೆ. ಆದರೂ ಮಾ.29ರಂದು ಆದೇಶ ಉಲ್ಲಂಘಿಸಿ ರಥೋತ್ಸವ ಜರುಗಿಸಲಾಗಿದೆ ಎಂದು ಡಣಾಯನಕೇರೆ ಪಿಡಿಒ ಜಿಲಾನ್ ರಜಾಕ್ ಸಾಬ್ ಅವರು ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು