NEWSನಮ್ಮಜಿಲ್ಲೆ

ಕೋವಿಡ್ -19 ಪರಿಹಾರ ನಿಧಿ: ಆನ್ ಲೈನ್‌ನಲ್ಲೇ ದೇಣಿಗೆ ನೀಡಿ

ಸಾರ್ವಜನಿಕರಲ್ಲಿ ಧಾರವಾಡ  ಜಿಲ್ಲಾಧಿಕಾರಿ ದೀಪಾ ಚೋಳನ್ ಮನವಿ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಕೋವಿಡ್ 19 ಪರಿಹಾರ ನಿಧಿಗೆ ದೇಣಿಗೆ ಅರ್ಪಿಸಲು ಬಯಸುವ ಸಾರ್ವಜನಿಕರು ಖುದ್ದಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡದೇ,  ತಮ್ಮ  ಆರೋಗ್ಯದ ಹಿತದೃಷ್ಟಿಯಿಂದ ಆನ್ ಲೈನ್   ಮೂಲಕವೇ  ಉದಾರ ನೆರವು ನೀಡಬಹುದು. ಇದಕ್ಕಾಗಿ ಮನೆಗಳಿಂದ ಹೊರಬರುವುದು ಬೇಡ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಮನವಿ ಮಾಡಿದ್ದಾರೆ.

ಕೊರೊನಾ ಸೋಂಕಿನಿಂದ ಬಳಲುತ್ತಿರುವ ಸಾರ್ವಜನಿಕರಿಗೆ ವೈದ್ಯೋಪಚಾರವನ್ನು ಸರ್ಕಾರದಿಂದ ಮಾಡಲಾಗುತ್ತಿದೆ. ರೋಗವನ್ನು ಪತ್ತೆ ಹಚ್ಚಲು ಹುಬ್ಬಳ್ಳಿಯ ಕಿಮ್ಸ್ ನಲ್ಲಿಯೂ  ಪ್ರಯೋಗಾಲಯ ಸ್ಥಾಪಿಸಲು  ಸರ್ಕಾರ ಕ್ರಮ ಕೈಗೊಂಡಿದೆ. ಸೋಂಕು ಹರಡದಂತೆ ಸಾರ್ವಜನಿಕರು ಸರ್ಕಾರದೊಂದಿಗೆ ಕೈಜೋಡಿಸಬೇಕು. ಮತ್ತು ಸರ್ಕಾರ ನೀಡುವ ಪ್ರತಿಯೊಂದು ಸೂಚನೆಗಳನ್ನು ಪಾಲಿಸಬೇಕು ಎಂದರು.

ಕೋವಿಡ್ – 19 ಕೊರೊನಾ ಸೋಂಕು  ರೋಗವನ್ನು ತಡೆಗಟ್ಟಲು ಕರ್ನಾಟಕ ಸರ್ಕಾರವು ಯುದ್ಧೋಪಾದಿಯಲ್ಲಿ  ಕ್ರಮ ಕೈಗೊಳ್ಳುತ್ತಿದೆ. ಈ ಕಾರ್ಯಕ್ಕೆ ದೇಣಿಗೆ ಸಲ್ಲಿಸಲು ಬಯಸುವವರು ಸಾಧ್ಯವಾದಷ್ಟು  ಚೆಕ್ ಅಥವಾ ಡಿಡಿ ರೂಪದಲ್ಲಿ ನೀಡದೇ, ಮುಖ್ಯಮಂತ್ರಿಯವರ  ಪರಿಹಾರ ನಿಧಿ ಕೋವಿಡ್ -19 ಎಸ್.ಬಿ.ಐ.  (ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ)  ವಿಧಾನ ಸೌಧ ಶಾಖೆಯ ಖಾತೆ ಸಂಖ್ಯೆ 39234923151, ಐ.ಎಫ್.ಸಿ. ಕೋಡ್ SBIN0040277ಮತ್ತು MIRCಸಂಖ್ಯೆ 560002419 ಸಂಖ್ಯೆಗೆ ಆನ್ ಲೈನ್ ನಲ್ಲಿ ಇ-ಪೇಮೆಂಟ್ ಮೂಲಕ ಸಂದಾಯ ಮಾಡಿ, ಅದರ ಪ್ರತಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯ [email protected] ಇಮೇಲ್ ವಿಳಾಸಕ್ಕೆ, ಮಾಹಿತಿ ಮತ್ತು ಪಾಸ್ ಪೋರ್ಟ್ ಭಾವಚಿತ್ರ ಕಳಿಸಿದರೆ ಅವುಗಳನ್ನು ಮಾಧ್ಯಮಗಳಲ್ಲಿ ಪ್ರಕಟಣೆಗೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಈ ಕಾರ್ಯಕ್ಕಾಗಿ ಇಂತಹ ಸಂದರ್ಭದಲ್ಲಿ ಸಾರ್ವಜನಿಕರು ವೈಯಕ್ತಿಕವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಬರುವುದನ್ನು ಸಾಧ್ಯವಾದಷ್ಟು ಕಡಿಮೆ ಮಾಡಿ,  ಆರೋಗ್ಯ ಸಂರಕ್ಷಣೆಗೆ ಒತ್ತು ನೀಡಬೇಕು  ಎಂದು ಕೋರಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ