NEWSಕೃಷಿನಮ್ಮರಾಜ್ಯ

ಕಾವೇರಿಗಾಗಿ ಧರಣಿ ಸತ್ಯಾಗ್ರಹ 5ನೇ ದಿನವೂ ಮುಂದುವರಿಕೆ: ಕರ್ನಾಟಕ ಜಲ ಸಂರಕ್ಷಣಾ ಸಮಿತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ರೈತರಿಗೆ ಗಿಳಿಪಾಠ ಹೇಳುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮಿಳುನಾಡು ರಾಜ್ಯದಲ್ಲಿ ಮೂರು ಬೆಳೆ ಬೆಳೆಯುವುದಕ್ಕೆ ಕಡಿವಾಣ ಹಾಕುವ ಕೆಲಸಕ್ಕೆ ಮುಂದಾಗಲಿ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.

ಕರ್ನಾಟಕ ಜಲಸಂರಕ್ಷಣ ಸಮಿತಿ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಕನ್ನಡ ಸಂಘಟನೆಗಳು 5ನೇ ದಿನವಾದ ಇಂದು ಪ್ರತಿಭಟನಾ ಧರಣಿಯಲ್ಲಿ ಭಾಗವಹಿಸುವ ಮೂಲಕ ಸಾಥ್‌ ನೀಡಿದವು.

ಈ ವೇಳೆ ಮಾತನಾಡಿದ ಅವರು, ನೀರಾವರಿ ಮಂತ್ರಿಯಾಗಿ ಇಂಡಿಯಾ ಒಕ್ಕೂಟ ಬಲಪಡಿಸುವ ಚಿಂತಿಯಲ್ಲಿದ್ದಾರೆ, ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಓಲೈಸುವ ಕಾರಣದಿಂದಲೇ ರಾಜ್ಯದ ನೀರು ಬಿಟ್ಟು ರೈತರನ್ನು ಬಲಿಕೊಟ್ಟಿದ್ದಾರೆ. ಅವರ ಸ್ನೇಹ ಬೇಕು ಅದಕ್ಕಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.

ರಾಷ್ಟ್ರಪತಿಗಳು, ಕೇಂದ್ರ ಜಲ ಸಂಪನ್ಮೂಲ ಸಚಿವರು ಹಾಗೂ ಕಾವೇರಿ ಪ್ರಾಧಿಕಾರದ ಮುಖ್ಯಸ್ಥರನ್ನು ಕರ್ನಾಟಕ ಜಲ ಸಂರಕ್ಷಣ ಸಮಿತಿ ನಿಯೋಗ ಇದೇ ಅ.9ರಂದು ಭೇಟಿ ಮಾಡಲು ದೆಹಲಿಗೆ ತೆರಳುತ್ತಿದೆ. ಭೇಟಿಗಾಗಿ ಸಮಯ ನಿಗದಿಗೊಳಿಸುವಂತೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಕಾರ್ಯಅಧ್ಯಕ್ಷರು, ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ವಿ.ವೆಂಕಟಸ್ವಾಮಿ ಮಾತನಾಡಿ, ರಾಜ್ಯದ ಜನರನ್ನು ಮರೆತು ನೀರು ಹರಿಸುವ ಮೂಲಕ ತಮಿಳುನಾಡಿನ ಓಲೈಕೆ ನೀತಿಯನ್ನು ರಾಜ್ಯ ಸರ್ಕಾರ ಮಾಡಬಾರದು ಎಂದರು.

ಇಂದು ದಲಿತ ಸಂಘಟನೆಗಳ ನೂರಾರು ಕಾರ್ಯಕರ್ತರು ಧರಣಿ ಆರಂಭಿಸಿ ಉಳಿಸಿ ಉಳಿಸಿ ಕಾವೇರಿ ಉಳಿಸಿ, ಕಾವೇರಿ ನಮ್ಮದು ಘೋಷಣೆ ಕೂಗಿದರು. ಧರಣಿಯಲ್ಲಿ ಕನ್ನಡ ಚಳವಳಿಯ ದಲಿತ ಸಂಘಟನೆಗಳ ಮುಖಂಡ ವೆಂಕಟೇಶ, ಸತೀಸ್, ಕನ್ನಡ ಚಳವಳಿ ಗುರುದೇವ ನಾರಾಯಣ್, ಅಮ್ ಆದ್ಮಿಪಕ್ಷದ ಉಷಾ ಮೋಹನ್ ಮತ್ತಿತರರು ಭಾಗವಹಿಸಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು