NEWSನಮ್ಮಜಿಲ್ಲೆ

ಕ್ವಾರಂಟೈನ್‌ನಲ್ಲಿದ್ದ ಹೊಂಗಸಂದ್ರದ ಮಹಿಳೆ ಸಾವು, ವೈದ್ಯರಲ್ಲಿ ಹೆಚ್ಚಿದ ಆತಂಕ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹೊಂಗಸಂದ್ರದಲ್ಲಿ ಕ್ವಾರಂಟೈನ್‌‌ನಲ್ಲಿದ್ದ ಮಹಿಳೆ ಇದ್ದಕ್ಕಿದ್ದಂತೆ ಮೃತಪಟ್ಟಿದ್ದಾರೆ. ಆದರೆ, ಈ ಸಾವಿಗೆ ನಿಖರ ಕಾರಣ ಗೊತ್ತಾಗದಿರುವುದು ಆರೋಗ್ಯ ಇಲಾಖೆ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಹೊಂಗಸಂದ್ರದಲ್ಲಿ ವಾರದ ಹಿಂದೆ ಮಹಿಳೆಯನ್ನು ಕೊರೊನಾ ಸೋಂಕು ತಗುಲಿರಬಹುದು ಎಂಬ ಅನುಮಾನದಿಂದ ಕ್ವಾರಂಟೈನ್ ಮಾಡಲಾಗಿತ್ತು. ಅಲ್ಲದೆ, ಜಯನಗರ ಆಸ್ಪತ್ರೆಗೆ ದಾಖಲಿಸಿ ಕೊರೊನಾ ಪರೀಕ್ಷೆಗೂ ಒಳಪಡಿಸಲಾಗಿತ್ತು. ಆದರೆ, ವೈದ್ಯರು ವರದಿಗಾಗಿ ಕಾಯುತ್ತಿದ್ದಾರೆ. ಆ ವರದಿ ಬರುವ ಮುನ್ನವೇ ಮಹಿಳೆ ಅಸುನೀಗಿರುವುದು ಭಾರಿ ಆತಂಕಕ್ಕೆ ಕಾರಣವಾಗಿದೆ.

ಈ ಮಹಿಳೆಗೆ ಕೊರೊನಾ ಪಾಸಿಟಿವ್‌ ಇತ್ತೆ ಇದರಿಂದಲೇ ಮೃತಪಟ್ಟರೆ ಅಥವಾ ಇನ್ನಾವುದಾದರೂ ಕಾಯಿಲೆ ಇತ್ತೆ ಎಂಬ ಅನುಮಾನ ಈಗ ವೈದ್ಯರನ್ನು ಕಾಡುತ್ತಿದೆ. ಜತೆಗೆ ಕೊರೊನಾ ಪಾಸಿಟಿವ್‌ ಆಗಿದ್ದರೆ ಆಕೆಯ ಮೊದಲ ಸಂಪರ್ಕದಲ್ಲಿವರು ಮತ್ತು ವೈದ್ಯರನ್ನು ಕ್ವಾರಂಟೈನ್‌ ಮಾಡಬೇಕಾಗುತ್ತದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು