NEWSಕೃಷಿದೇಶ-ವಿದೇಶ

ಕಾವೇರಿ ನೀರು ತಡೆಗಟ್ಟಿ ಎರಡು ರಾಜ್ಯಗಳ ರೈತರು ಬಳಸಿಕೊಂಡರೆ ತಪ್ಪೇನು: ಕುರುಬೂರು ಶಾಂತಕುಮಾರ್

ವಿಜಯಪಥ ಸಮಗ್ರ ಸುದ್ದಿ

ಕೃಷ್ಣಗಿರಿ: ಹೆಚ್ಚು ಮಳೆ ಬಂದಾಗ ಕಾವೇರಿ ನೀರು ಸಮುದ್ರಕ್ಕೆ ಹರಿಯುವುದನ್ನು ತಡೆಗಟ್ಟಿ ಎರಡು ರಾಜ್ಯದ ರೈತರು ಬಳಸಿಕೊಂಡರೆ ತಪ್ಪೇನು ಎಂದು ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ರೈತರತ್ನ ಕುರುಬೂರು ಶಾಂತಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ತಮಿಳುನಾಡಿನ ಕೃಷ್ಣಗಿರಿಯಲ್ಲಿ ಇಂದು (ಜು.5) ಆಯೋಜಿಸಿದ್ದ ಬೃಹತ್ ರೈತ ಸಮಾವೇಶದಲ್ಲಿ ಮಾತನಾಡಿದರು.

ತಮಿಳುನಾಡು- ಕರ್ನಾಟಕ ಈ ಎರಡೂ ರಾಜ್ಯಗಳ ರಾಜಕೀಯ ಪಕ್ಷಗಳು ಸರ್ಕಾರಗಳು ರಾಜಕೀಯ ಗೊಂದಲ ಮಾಡಬಾರದು ಇದು ರೈತರ ಬದುಕಿನ ಪ್ರಶ್ನೆಯಾಗಿದೆ ಎಂಬುದನ್ನು ಅರಿತುಕೊಳ್ಳಬೇಕು. ಮೇಕೆದಾಟು ಯೋಜನೆ ಸಾಧ್ಯವಾದರೆ 50 ಟಿಎಂಸಿ ನೀರು ಸಂಗ್ರಹಿಸಬಹುದು ಎಂದು ವಿವರಿಸಿದರು.

ಮಳೆ ಬರದ ಇಂಥ ಸಂಕಷ್ಟ ಕಾಲದಲ್ಲಿ ನೀರು ಸಂಗ್ರಹವಾಗಿದ್ದರೆ ಅದನ್ನು ಬಳಸಿಕೊಳ್ಳಬಹುದು ಎಂಬುದನ್ನು ನಾವೆಲ್ಲ ಚಿಂತನೆ ಮಾಡಬೇಕಾಗಿದೆ ಎಂದು ಹೇಳಿದರು.

ಇನ್ನು ವಿಶ್ವ ವ್ಯಾಪಾರ ಒಪ್ಪಂದ ನೀತಿಯಿಂದ ಕೇಂದ್ರ ಸರ್ಕಾರ ಆಮದು ಸುಂಕ ವಿನಾಯಿತಿ ನೀಡಿದ ಕಾರಣ ಮಲೇಶಿಯಾ ದೇಶದಿಂದ ತಾಳೆ ಎಣ್ಣೆ, ಚೀನಾ ದೇಶದಿಂದ ರೇಷ್ಮೆ ಆಮದು ಮಾಡಿಕೊಂಡ ಕಾರಣ ದೇಶದ ತೆಂಗು ಬೆಳೆಗಾರರು ಹಾಗೂ ರೇಷ್ಮೆ ಬೆಳೆಗಾರರು ಬೆಲೆ ಕುಸಿತದ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.

ಸಮಾವೇಶದಲ್ಲಿ ತೆಲಂಗಾಣ ರಾಜ್ಯದ ನರಸಿಂಹ ನಾಯ್ಡು ಮಾತನಾಡಿದರು. ತಮಿಳುನಾಡಿನ ರೈತ ಮುಖಂಡ ರಾಮನ್ ಗೌ೦ಡರ ಸಮಾವೇಶ ಆಯೋಜಿಸಿ ಅಧ್ಯಕ್ಷತೆ ವಹಿಸಿದ್ದರು. ನೂರಾರು ರೈತರು, ರೈತ ಮುಖಂಡರು ಭಾಗವಹಿಸಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು