NEWSಕೃಷಿದೇಶ-ವಿದೇಶ

ಕಾವೇರಿ ನೀರು ತಡೆಗಟ್ಟಿ ಎರಡು ರಾಜ್ಯಗಳ ರೈತರು ಬಳಸಿಕೊಂಡರೆ ತಪ್ಪೇನು: ಕುರುಬೂರು ಶಾಂತಕುಮಾರ್

ವಿಜಯಪಥ ಸಮಗ್ರ ಸುದ್ದಿ

ಕೃಷ್ಣಗಿರಿ: ಹೆಚ್ಚು ಮಳೆ ಬಂದಾಗ ಕಾವೇರಿ ನೀರು ಸಮುದ್ರಕ್ಕೆ ಹರಿಯುವುದನ್ನು ತಡೆಗಟ್ಟಿ ಎರಡು ರಾಜ್ಯದ ರೈತರು ಬಳಸಿಕೊಂಡರೆ ತಪ್ಪೇನು ಎಂದು ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ರೈತರತ್ನ ಕುರುಬೂರು ಶಾಂತಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ತಮಿಳುನಾಡಿನ ಕೃಷ್ಣಗಿರಿಯಲ್ಲಿ ಇಂದು (ಜು.5) ಆಯೋಜಿಸಿದ್ದ ಬೃಹತ್ ರೈತ ಸಮಾವೇಶದಲ್ಲಿ ಮಾತನಾಡಿದರು.

ತಮಿಳುನಾಡು- ಕರ್ನಾಟಕ ಈ ಎರಡೂ ರಾಜ್ಯಗಳ ರಾಜಕೀಯ ಪಕ್ಷಗಳು ಸರ್ಕಾರಗಳು ರಾಜಕೀಯ ಗೊಂದಲ ಮಾಡಬಾರದು ಇದು ರೈತರ ಬದುಕಿನ ಪ್ರಶ್ನೆಯಾಗಿದೆ ಎಂಬುದನ್ನು ಅರಿತುಕೊಳ್ಳಬೇಕು. ಮೇಕೆದಾಟು ಯೋಜನೆ ಸಾಧ್ಯವಾದರೆ 50 ಟಿಎಂಸಿ ನೀರು ಸಂಗ್ರಹಿಸಬಹುದು ಎಂದು ವಿವರಿಸಿದರು.

ಮಳೆ ಬರದ ಇಂಥ ಸಂಕಷ್ಟ ಕಾಲದಲ್ಲಿ ನೀರು ಸಂಗ್ರಹವಾಗಿದ್ದರೆ ಅದನ್ನು ಬಳಸಿಕೊಳ್ಳಬಹುದು ಎಂಬುದನ್ನು ನಾವೆಲ್ಲ ಚಿಂತನೆ ಮಾಡಬೇಕಾಗಿದೆ ಎಂದು ಹೇಳಿದರು.

ಇನ್ನು ವಿಶ್ವ ವ್ಯಾಪಾರ ಒಪ್ಪಂದ ನೀತಿಯಿಂದ ಕೇಂದ್ರ ಸರ್ಕಾರ ಆಮದು ಸುಂಕ ವಿನಾಯಿತಿ ನೀಡಿದ ಕಾರಣ ಮಲೇಶಿಯಾ ದೇಶದಿಂದ ತಾಳೆ ಎಣ್ಣೆ, ಚೀನಾ ದೇಶದಿಂದ ರೇಷ್ಮೆ ಆಮದು ಮಾಡಿಕೊಂಡ ಕಾರಣ ದೇಶದ ತೆಂಗು ಬೆಳೆಗಾರರು ಹಾಗೂ ರೇಷ್ಮೆ ಬೆಳೆಗಾರರು ಬೆಲೆ ಕುಸಿತದ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.

ಸಮಾವೇಶದಲ್ಲಿ ತೆಲಂಗಾಣ ರಾಜ್ಯದ ನರಸಿಂಹ ನಾಯ್ಡು ಮಾತನಾಡಿದರು. ತಮಿಳುನಾಡಿನ ರೈತ ಮುಖಂಡ ರಾಮನ್ ಗೌ೦ಡರ ಸಮಾವೇಶ ಆಯೋಜಿಸಿ ಅಧ್ಯಕ್ಷತೆ ವಹಿಸಿದ್ದರು. ನೂರಾರು ರೈತರು, ರೈತ ಮುಖಂಡರು ಭಾಗವಹಿಸಿದ್ದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ