NEWSದೇಶ-ವಿದೇಶನಮ್ಮಜಿಲ್ಲೆ

ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ ಸಲ್ಲಿಸಿದ ಕೆಎಚ್‌ಎಂ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೌಶಲ್ಯ ತರಬೇತಿಯನ್ನು ನೀಡಲು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗಾಗಿ ಕೇಂದ್ರದ ಸೂಕ್ಷ್ಮ ಮತ್ತು ಸಣ್ಣ, ಮದ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಸಚಿವರಾದ ಶೋಭಾ ಕರಂದ್ಲಾಜೆ ಅವರಿಗೆ ಸಚಿವ ಕೆ.ಎಚ್. ಮುನಿಯಪ್ಪ ಮನವಿ ಮಾಡಿದರು.

ದೆಹಲಿಯ ಇಎಸ್ಐಸಿ ಭವನದಲ್ಲಿ ಇಂದು ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವ ಮುನಿಯಪ್ಪ ಅವರು, ಜಿಲ್ಲೆಯಲ್ಲಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ಆದ್ಯತೆ ನೀಡಬೇಕು ಎಂದು ಮನವಿ ಪತ್ರ ನೀಡಿದರು.

ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕ್ಷೇತ್ರದಲ್ಲಿ ಉದ್ಯಮ ಪೋರ್ಟಲ್ ಅಡಿಯಲ್ಲಿ ನೋಂದಾಯಿಸಲಾದ 45000 MSME ಘಟಕಗಳು ಸುಮಾರು ನಾಲ್ಕು ಲಕ್ಷ ಉದ್ಯೋಗಾವಕಾಶದೊಂದಿಗೆ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.

ಇನ್ನು ಗ್ರಾಮಾಂತರ ಜಿಲ್ಲೆಯು ನುರಿತ ಮತ್ತು ಕೌಶಲ್ಯ ರಹಿತ ಯುವಕರನ್ನು ಹೊಂದಿದ್ದು, ಬೇಡಿಕೆ ಆಧಾರಿತ ಕೌಶಲ್ಯ ತರಬೇತಿಗಳನ್ನು ನೀಡುವ ಮೂಲಕ ಮೇಲಿನ ವಲಯಗಳಲ್ಲಿ ಕೌಶಲ್ಯ ತರಬೇತಿ ಹೆಚ್ಚಿಸುವ ಸಲುವಾಗಿ ಸಹಕರಿಸುವಂತೆ ಮನವಿ ಮಾಡಿದರು.

ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿಗೆ ಉದ್ಯಮದ ಬೇಡಿಕೆ ಆಧಾರಿತ NSIC ತಾಂತ್ರಿಕ ಸೇವಾ ಕೇಂದ್ರ / ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಮಂಜೂರು ಮಾಡಲು ಸಚಿವರಿಗೆ ಮನವಿ‌ ಮಾಡಿದರು.

ಉತ್ತಮ ಕೈಗಾರಿಕೆಗಳ ನಿರ್ಮಾಣಕ್ಕಾಗಿ ಅಗತ್ಯವಿರುವ ಭೂಮಿ ಮತ್ತು ಇತರ ಮೂಲಸೌಕರ್ಯಗಳಾದ ರಸ್ತೆ, ವಿದ್ಯುತ್ ಮತ್ತು ನೀರಿನ ಪೂರೈಕೆಯನ್ನು ಒದಗಿಸಲು ಸಿದ್ದರಿದ್ದು, ತಾವು ಅನುಮತಿ ನೀಡಿ ಗ್ರಾಮಾಂತರ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಸಹಕರಿಸಿ ಎಂದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ KSRTC ಬಸ್‌-ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್...