NEWSನಮ್ಮಜಿಲ್ಲೆಸಂಸ್ಕೃತಿ

ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ

ವಿಜಯಪಥ ಸಮಗ್ರ ಸುದ್ದಿ

ಕೃಷ್ಣರಾಜಪೇಟೆ: ತಾಲೂಕಿನ ಪವಿತ್ರ ತ್ರಿವೇಣಿ ಸಂಗಮದ ಶ್ರೀ ಮಲೈ ಮಹದೇಶ್ವರರ ದೇವಾಲಯದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರದ ಅಂಗವಾಗಿ ಶ್ರದ್ಧಾಭಕ್ತಿಯಿಂದ ಹುಲಿ ವಾಹನ ಉತ್ಸವ ಮೆರವಣಿಗೆ ಅದ್ದೂರಿಯಾಗಿ ಜರುಗಿತು.

ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ ಮಹದೇಶ್ವರರ ಶಿಲಾ ಮೂರ್ತಿಗೆ ಅಭಿಷೇಕ, ವಿಶೇಷ ಪೂಜೆ ನೆರವೇರಿಸಿ ಭಕ್ತಿ ಸಮರ್ಪಿಸಿದರು.

ಹೇಮಾವತಿ, ಕಾವೇರಿ ಹಾಗೂ ಲಕ್ಷ್ಮಣ ತೀರ್ಥ ನದಿಗಳ ತ್ರಿವೇಣಿ ಸಂಗಮದ ಒಡಲಿನಲ್ಲಿ ವಿಶಾಲವಾದ ಜಲಸಾಗರದ ಮಧ್ಯದಲ್ಲಿರುವ ಮಹದೇಶ್ವರರ ದೇವಾಲಯವು ನಯನ ಮನೋಹರವಾಗಿದ್ದು ಎತ್ತ ಕಣ್ಣು ಹಾಯಿಸಿದರೂ ಕಾಣುವ ಜಲರಾಶಿಯ, ಜಲ ಸಾಗರದ ವೈಭವದ ನೋಟವನ್ನು ಕಣ್ತುಂಬಿಕೊಳ್ಳಲು ಎರಡು ಕಣ್ಣುಗಳು ಸಾಲದಾಗಿವೆ.

ಕಾರ್ತಿಕ ಮಾಸದ ಮೊದಲ ಸೋಮವಾರದ ಅಂಗವಾಗಿ ಇಂದು ಮುಂಜಾನೆಯಿಂದಲೇ ಮಲೈ ಮಹದೇಶ್ವರ ಸ್ವಾಮಿ ಶಿಲಾ ಮೂರ್ತಿಗೆ ಅಭಿಷೇಕ, ಪುಷ್ಪಾಭಿಷೇಕ ಹಾಗೂ ಹುಲಿವಾಹನ ಉತ್ಸವಗಳು ಸಾವಿರಾರು ಭಕ್ತಾದಿಗಳ ಸಮಕ್ಷಮದಲ್ಲಿ ವಿಶ್ರಾಂತ ಶಿಕ್ಷಕ, ಸಂಸ್ಕೃತಿ ಸಂಘಟಕ ಡಾ. ಅಂಚಿ ಸಣ್ಣಸ್ವಾಮಿಗೌಡ ಹಾಗೂ ಕಮಲ ಸಣ್ಣಸ್ವಾಮಿಗೌಡ ಹಾಗೂ ವೇದಬ್ರಹ್ಮ ನವೀನ್ ಕುಮಾರ್ ಹಿರೇಮಠ ಅವರ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನಗಳು ಶ್ರದ್ಧಾ ಭಕ್ತಿಯಿಂದ ನಡೆದವು.

ಹುಲಿವಾಹನ ಉತ್ಸವ ಹಾಗೂ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಭಕ್ತಾದಿಗಳಿಗೆ ಬಿಸಿಬೇಳೆ ಭಾತ್, ಮೊಸರನ್ನ, ಸಿಹಿ ಪೊಂಗಲ್ ಹಾಗೂ ಸಜ್ಜೆ ಪಾಯಸ ಪ್ರಸಾದವನ್ನು ವಿತರಿಸಲಾಯಿತು.

ಕೃಷ್ಣರಾಜ ಸಾಗರ ಜಲಾಶಯವು ಭರ್ತಿಯಾಗಿದ್ದು ಜಲಾಶಯದ ಹಿನ್ನೀರು ತ್ರಿವೇಣಿ ಸಂಗಮವನ್ನು ಸಂಪೂರ್ಣವಾಗಿ ಆವರಿಸಿಕೊಂಡಿರುವ ಹಿನ್ನೆಲೆಯಲ್ಲಿ ಕಣ್ಣು ಹಾಯಿಸಿದಷ್ಟು ವಿಶಾಲವಾದ ಪ್ರದೇಶದಲ್ಲಿ ಹರಡಿಕೊಂಡಿರುವ ನೀರಿನ ಸೊಬಗನ್ನು ಕಣ್ತುಂಬಿಕೊಳ್ಳಲು ಎರಡು ಕಣ್ಣುಗಳು ಸಾಲದಾಗಿವೆ.

2022ರಲ್ಲಿ ತ್ರಿವೇಣಿ ಸಂಗಮದಲ್ಲಿ ಮೂರು ದಿನಗಳ ಕಾಲ ನಡೆದ ಮಹಾ ಕುಂಭಮೇಳ ಹಾಗೂ ಮಹದೇಶ್ವರರ ದೇವಾಲಯವು ಲೋಕಾರ್ಪಣೆಗೊಂಡ ಹಿನ್ನೆಲೆಯಲ್ಲಿ ತ್ರಿವೇಣಿ ಸಂಗಮವು ದೇಶಾದ್ಯಂತ ಪ್ರಖ್ಯಾತವಾಗಿತ್ತು. ಮಹಾಕುಂಭಮೇಳ ನಡೆದ ನಂತರ ತ್ರಿವೇಣಿ ಸಂಗಮವು ಅಭಿವೃದ್ಧಿ ಕೆಲಸ ಕಾರ್ಯಗಳಿಂದ ವಂಚಿತವಾಗಿದ್ದು, ಪವಿತ್ರ ತ್ರಿವೇಣಿ ಸಂಗಮ ಸುಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳಿಗೆ ಕನಿಷ್ಠ ಮೂಲಭೂತ ಸೌಲಭ್ಯಗಳು ದೊರೆಯುತ್ತಿಲ್ಲ.

ಸಂಗಮ ಕ್ಷೇತ್ರಕ್ಕೆ ಭಕ್ತಾದಿಗಳು ಆಗಮಿಸಲು ಬಸ್ ಸೌಲಭ್ಯವಂತೂ ಇಲ್ಲವೇ ಇಲ್ಲ. ಆದ್ದರಿಂದ ಜಿಲ್ಲಾಡಳಿತ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಕ್ಷೇತ್ರದಲ್ಲಿ ಅರ್ಧಕ್ಕೆ ನಿಂತಿರುವ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಆರಂಭಿಸಿ ಭಕ್ತರು ಹಾಗೂ ಯಾತ್ರಾರ್ಥಿಗಳಿಗೆ ಮೂಲ ಭೂತ ಸೌಲಭ್ಯಗಳನ್ನು ದೊರಕಿಸಿಕೊಡಲು ಮುಂದಾಗಬೇಕು.

ಕೃಷ್ಣರಾಜಪೇಟೆ, ಕೆ.ಆರ್.ನಗರ ಹಾಗೂ ಮೈಸೂರಿನಿಂದ ಪವಿತ್ರ ತ್ರಿವೇಣಿ ಸಂಗಮಕ್ಕೆ ಭಕ್ತರು ಓಡಾಡಲು ಅನುಕೂಲವಾಗುವಂತೆ ಬಸ್ ಸೌಲಭ್ಯವನ್ನು ದೊರಕಿಸಿಕೊಡಬೇಕು ಎಂದು ತ್ರಿವೇಣಿ ಸಂಗಮ ಅಭಿವೃದ್ಧಿ ಹೋರಾಟ ಸಮಿತಿಯ ಸಂಚಾಲಕ ಡಾ. ಅಂಚಿ ಸಣ್ಣಸ್ವಾಮಿಗೌಡ ಮನವಿ ಮಾಡಿದ್ದಾರೆ.

ಕಾರ್ತಿಕ ಮಾಸದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಮುಖಂಡ ಗುಡುಗನಹಳ್ಳಿ ರಾಯಪ್ಪ, ಬಿ.ನಾಗೇಂದ್ರ ಕುಮಾರ್, ಎ.ಎಂ.ಸಂಜೀವಪ್ಪ, ಸಂಸ್ಕೃತ ವಿಶ್ವ ವಿದ್ಯಾ ನಿಲಯದ ವಿಶ್ರಾಂತ ಉಪಕುಲಪತಿ ಡಾ.ಪದ್ಮಾ ಶೇಖರ್, ರಾಜ್ಯ ಆರ್.ಟಿ.ಓ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ, ಶಿಕ್ಷಕರ ಸಂಘದ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ, ಕಟ್ಟೆಕ್ಯಾತನಹಳ್ಳಿ ಪಾಪಣ್ಣ, ಬಲ್ಲೇನಹಳ್ಳಿ ನಂಧೀಶ್, ಬೋರೇಗೌಡ ಸೇರಿದಂತೆ ಅಂಬಿಗರಹಳ್ಳಿ, ದಗ್ಗನಾಳು, ತಿಪ್ಪುರು, ಸಾಲಿಗ್ರಾಮ, ಸೋಮನಹಳ್ಳಿ, ಪುರ, ಸಂಗಾಪುರ ಗ್ರಾಮಗಳ ನೂರಾರು ಜನರು ಭಾಗವಹಿಸಿದ್ದರು. -ವರದಿ.ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ