NEWSನಮ್ಮಜಿಲ್ಲೆಸಂಸ್ಕೃತಿ

ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ

ವಿಜಯಪಥ ಸಮಗ್ರ ಸುದ್ದಿ

ಕೃಷ್ಣರಾಜಪೇಟೆ: ಪಟ್ಟಣದ ನೇಕಾರ ತೊಗಟವೀರ ಸಮಾಜದ ವತಿಯಿಂದ ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವವನ್ನು ಶ್ರದ್ದಾ ಭಕ್ತಿಯಿಂದ ಅದ್ದೂರಿಯಾಗಿ ಆಚರಿಸಲಾಯಿತು.

ಇತಿಹಾಸ ಪ್ರಸಿದ್ಧವಾದ ಶ್ರೀ ದೇವಿರಮ್ಮಣ್ಣಿ ಕೆರೆಯಲ್ಲಿ ಕರಗವನ್ನು ಸ್ಥಾಪಿಸಿ ಬಾಲಕಿಯರ ತಲೆಯ ಮೇಲೆ ಕರಗವನ್ನು ಹೊರಿಸಿ ನಡೆಮುಡಿಯೊಂದಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ, ಮಂಗಳ ವಾಧ್ಯಗಳು ಹಾಗೂ ಜಾನಪದ ಕಲಾ ತಂಡಗಳ ವೈಭವದ ಮೆರವಣಿಗೆಯೊಂದಿಗೆ ಬಸವೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಶ್ರೀ ರಾಮ ಮಂದಿರದ ಆವರಣಕ್ಕೆ ಕರಗದ ಕಳಸವನ್ನು ತಂದು ಪ್ರತಿಷ್ಟಾಪಿಸಿ ವಿಶೇಷ ಪೂಜೆ ಸಲ್ಲಿಸಿ ಲೋಕ ಕಲ್ಯಾಣಕ್ಕಾಗಿ ಪ್ರಾರ್ಥಿಸಲಾಯಿತು.

ನೇಕಾರ ತೊಗಟವೀರ ಸಮಾಜದ ಮುಖಂಡ ಹಂಸ ರಮೇಶ್ ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವದ ನೇತೃತ್ವ ವಹಿಸಿ ಮಾತನಾಡಿ ಹಾಲಿಗೆ ಸಕ್ಕರೆ ಬೆರೆತರೆ ಹಾಲಿನ ರುಚಿಯು ಹೆಚ್ಚಾಗುವಂತೆ ಸಮಾಜದಲ್ಲಿ ಅತ್ಯಂತ ಹಿಂದುಳಿದಿರುವ ನೇಕಾರ ತೊಗಟವೀರ ಸಮಾಜ ಎಲ್ಲ ಜಾತಿ ವರ್ಗಗಳ ಜನರೊಂದಿಗೆ ಪರಸ್ಪರ ಪ್ರೀತಿ ವಿಶ್ವಾಸದಿಂದ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಎಂಧರು.

ಮೈಸೂರು ವಿಭಾಗದ ತೊಗಟವೀರ ಸಮಾಜದ ಅಧ್ಯಕ್ಷ ಇಂಜಿನಿಯರ್ ವೆಂಕಟೇಶ್, ಪಿಎಲ್ ಡಿ ಬ್ಯಾಂಕ್ ಮಾಜಿ ನಿರ್ದೇಶಕ ಕೆ.ಆರ್. ಪುಟ್ಟಸ್ವಾಮಿ, ಪುರಸಭೆ ಸದಸ್ಯೆ ಇಂದ್ರಾಣಿ ವಿಶ್ವನಾಥ್, ಪದ್ಮರಾಜು, ಪುರಸಭೆ ಮಾಜಿ ಅಧ್ಯಕ್ಷ ರಾಮಕೃಷ್ಣ ಮಾಸ್ಟರ್, ರಾಚಿ ನಂಜುಂಡಣ್ಣ, ಮೈಲಾರಿ ರವಿ, ಕ್ಯಾಂಟೀನ್ ರಾಮಣ್ಣ, ಅಂಗಡಿ ಲಕ್ಷ್ಮಣ, ಕೈಗೋನಹಳ್ಳಿ ಈರಪ್ಪಣ್ಣ, ಚಂದ್ರಕಲಾ ರಮೇಶ್.

ಮೀಸೆ ರಮೇಶಣ್ಣ, ಮಲ್ಲಿಕಾರ್ಜುನ, ನಿರಂಜನ, ಮಧುಸೂದನ್, ಕ್ಯಾಂಟೀನ್ ವಾಸು ಸೇರಿದಂತೆ ಅಂಚನಹಳ್ಳಿ, ತಗಡೂರು, ತೆಂಡೆಕೆರೆ, ಹೊನ್ನಾವರ, ಮಾಳಗೂರು, ಸರಗೂರು, ಶ್ರೀರಂಗಪಟ್ಟಣ, ಪಾಂಡವಪುರ, ಉಂಡಿಗನಹಾಳು, ಹರವು ಅರಳಕುಪ್ಪೆ, ಕೈಗೋನಹಳ್ಳಿ, ಸಿಂಧಘಟ್ಟ ಗ್ರಾಮಗಳಿಂದ ಸಾವಿರಾರು ಜನರು ಕರಗ ಮಹೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಕರಗ ಮಹೋತ್ಸವದ ಅಂಗವಾಗಿ ನಡೆದ ಅನ್ನ ದಾಸೋಹ ಕಾರ್ಯಕ್ರಮದಲ್ಲಿ ಐದು ಸಾವಿರಕ್ಕೂ ಹೆಚ್ಚಿನ ಭಕ್ತಾದಿಗಳಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.
ವರದಿ.ಡಾ.ಕೆ.ಆರ್.ನೀಲಕಂಠ , ಕೃಷ್ಣರಾಜಪೇಟೆ

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ