NEWSನಮ್ಮರಾಜ್ಯ

ಕ್ಷೌರಿಕ, ದಂತವೈದ್ಯ ವೃತ್ತಿ ಪುನರಾರಂಭಕ್ಕೆ ಅನುವುಮಾಡಿ

ಮುಖ್ಯಮಂತ್ರಿ ಯಡಿಯೂರಪ್ಪಗೆ ಸಚಿವ ಸುರೇಶ್ ಕುಮಾರ್ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವ ಕ್ಷೌರಿಕ ಸಮುದಾಯ ಹಾಗೂ ದಂತ ವೈದ್ಯ ಸಮುದಾಯದವರು ಸುಗಮ ಜೀವನ ನಡೆಸಲು ಅನುವಾಗುವಂತೆ ಅವರು ವೃತ್ತಿ ಆರಂಭಿಸಲು  ಅವಕಾಶ ನೀಡಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.

ಹಾಗೆಯೇ ಈ ವೃತ್ತಿಗಳಲ್ಲಿ ಸಾಮಾಜಿಕ  ಅಂತರ ಕಾಯ್ದುಕೊಳ್ಳಲು ಅಗತ್ಯ ನಿರ್ದೇಶನ  ನೀಡುವ ಮೂಲಕ ವೃತ್ತಿ ಪುನರಾರಂಭಿಸಲು ಅನುಮತಿ ನೀಡಬೇಕೆಂದು ಸಚಿವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಕೊರೊನಾ ಬಿಕ್ಕಟ್ಟಿನ ಕಾರಣದಿಂದಾಗಿ ಸರ್ಕಾರವು ಲಾಕ್‍ಡೌನ್ ಘೋಷಿಸಿರುವ ಹಿನ್ನಲೆಯಲ್ಲಿ ಹಲವಾರು ವೃತ್ತಿ ನಿರತರು ತೀವ್ರ ಸಂಕ್ಷಕ್ಕೊಳಗಾಗಿರುವುದು ಸರ್ವವೇದ್ಯವಾಗಿದೆ.

ಸರ್ಕಾರ ಕಾಲಕಾಲಕ್ಕೆ ಜಾರಿಗೊಳಿಸಿರುವ ನಿರ್ದೇಶನ, ಮಾರ್ಗಸೂಚನೆಗಳನ್ವಯ  Karnataka Shops and  Establishments Act  ಸ್ಥಾಪಿತವಾಗಿರುವ ಹಲವಾರು ಆರ್ಥಿಕ ಚಟುವಟಿಕೆಗಳು ಹಂತಹಂತವಾಗಿ ಪುನರಾರಂಭವಾಗುತ್ತಿವೆ.

ಸಮಾಜಕ್ಕೆ ತೀರಾ ಅನಿವಾರ್ಯವಾದ ಎರಡು ಪ್ರಮುಖ ವೃತ್ತಿಗಳಾದ ಕ್ಷಾರಿಕರು ಮತ್ತು ದಂತ ಚಿಕಿತ್ಸಕ ವೃತ್ತಿಗಳಿಗೆ ಸಂಬಂಧಿಸಿದಂತೆ ಚಟುವಟಿಕೆ ಆರಂಭಿಸಲು ಕ್ರಮ ರೂಪಿಸು0ವ ಅಗತ್ಯವಿದೆ. ಈ ಎರಡು ವೃತ್ತಿಗಳಲ್ಲಿ ಕಾರ್ಯನಿರತವಾಗಿರುವವರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಸಾಧ್ಯತೆಗಳು ತೀರ ಕಡಿಮೆ ಇರುವ ಹಿನ್ನೆಲೆಯಲ್ಲಿ ಪರಸ್ಪರ ಸೋಂಕು ಹರಡುವ ಸಾಧ್ಯತೆಗಳೂ ಇಲ್ಲದಿಲ್ಲ.

ಆದಾಗ್ಯೂ ಸೋಂಕು ಹರಡದಂತೆ ನೋಡಿಕೊಳ್ಳುವ ಮೂಲಕ ಈ ವೃತ್ತಿಗಳ ಪುನರಾರಂಭಕ್ಕೆ ಏನೆಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಯಾವ ಮಾರ್ಗದರ್ಶಿ ಸೂತ್ರಗಳನ್ನು ಅನುಸರಿಸಬೇಕೆಂಬುದರ ಕುರಿತು ಸೂತ್ತೋಲೆ ಹೊರಡಿಸಲು ಸಂಬಂಧಿಸಿದ ಇಲಾಖೆಗೆ ಅಗತ್ಯ ಸೂಚನೆ ನೀಡಬೇಕು. ಅಲ್ಲದೆ ವೃತ್ತಿಗಳನ್ನು ಅವಲಂಭಿಸಿರುವವರು ಸುಗಮ ಜೀವನ ನಡೆಸಲು ಅನುವು ಮಾಡಿಕೊಡಬೇಕೆಂದು  ಮನವಿ ಮಾಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ