CrimeNEWSಆರೋಗ್ಯಮೈಸೂರು

ಕೃಷಿ ಸಚಿವರ ಕೀಳು ಮಟ್ಟದ ರಾಜಕೀಯಕ್ಕೆ KSRTC ನೌಕರ ಬಲಿಯಾಗಬೇಕಾ: ಮಾಜಿ ಸಿಎಂ ಎಚ್‌ಡಿಕೆ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಆರೋಪ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಂಡ್ಯ ಜಿಲ್ಲೆಯ ನಾಗಮಂಗಲ KSRTC ಘಟಕದ ಚಾಲಕ ಕಂ ನಿರ್ವಾಹಕ ಜಗದೀಶ್ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಜಗದೀಶ್ ಅವರ ಆರೋಗ್ಯವನ್ನು ಮಾಜಿ ಮುಖ್ಯಮಂತ್ರಿ ಎಚ್.​​ಡಿ. ಕುಮಾರಸ್ವಾಮಿ ವಿಚಾರಿಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿ ಸಚಿವರ ಕೀಳು ಮಟ್ಟದ ರಾಜಕೀಯಕ್ಕೆ ಸಾರಿಗೆ ನೌಕರನೊಬ್ಬ ಬಲಿಯಾಗುತ್ತಿದ್ದಾನೆ ಇದು ಆಗಬೇಕಾ? ಸಚಿವರಾದವರಿಗೆ ರಾಜ್ಯದ ಜನರ ಜತೆ ಯಾವರೀತಿ ನಡೆದುಕೊಳ್ಳಬೇಕು ಎಂಬ ಅರಿವಿಲ್ಲವೇ ಎಂದು ಕುಮಾರಸ್ವಾಮಿ ಚಲುವರಾಯಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.

ಜಗದೀಶ್ ವೆಂಟಿಲೇಟರ್​ನಲ್ಲಿದ್ದಾರೆ. ಸರ್ಕಾರ ಬಂದು ಐವತ್ತು ದಿನ ಕೂಡ ಆಗಿಲ್ಲ, ಆಗಲೇ ವರ್ಗಾವಣೆ ದಂಧೆ ಶುರುವಾಗಿದೆ. ವರ್ಗಾವಣೆ ಮಾಡಿಕೊಳ್ಳುವುದಾದರೆ ಮಾಡಿಕೊಳ್ಳಲಿ, ಈ ರೀತಿ ಮಾಡುವುದು ಸರಿಯಲ್ಲ. ಊರಿನಲ್ಲಿರುವ ರೌಡಿ, ಚೇಲಾ‌ ಮಹದೇವ ಎಂಬಾತ ಜಗದೀಶ್ ಅವರ ಕುಟುಂಬಕ್ಕೆ ಕಿರುಕುಳ ನೀಡಿದ್ದಾನೆ. ಹೆಣ್ಣು ಮಗಳು ಜೆಡಿಎಸ್ ಪಕ್ಷ ಬಿಡುವಂತೆ, ಕಾಂಗ್ರೆಸ್ ಸೇರುವಂತೆ ಒತ್ತಡ ಹೇರಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಮತ್ತೊಂದೆಡೆ ಜಗದೀಶ್​​ಗೆ ಅಧಿಕಾರಿಗಳ ಮೂಲಕ‌ ಕಿರುಕುಳ ಕೊಡಲಾಗಿದೆ. ಡೆತ್​ನೋಟ್‌ನಲ್ಲಿ‌ ಜಗದೀಶ್ ಅವರು ಸ್ಪಷ್ಟವಾಗಿ ಬರೆದಿದ್ದಾರೆ. ಸಚಿವರ ಆದೇಶ ಇದೆ, ಒತ್ತಡ ಇದೆ ಎಂದು ಅಧಿಕಾರಿಗಳು‌ ಹೇಳಿದ್ದಾರೆ ಅಂತಾ. ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಅವರನ್ನು ಮಂತ್ರಿ ಸ್ಥಾನದಿಂದ ಕೆಳಗಿಳಿಸಿ. ಮಂತ್ರಿ ಸ್ಥಾನ ಏನು ಶಾಶ್ವತನಾ ಎಂದು ಪ್ರಶ್ನಿಸಿದ್ದಾರೆ.

ಇನ್ನೂ ಸತ್ತಿಲ್ಲ, ಅದ್ಕೆ FIR ಹಾಕಿಲ್ಲ ಅಂತಾರೆ: ಘಟನೆ ಸಂಬಂಧ ಅಧಿಕಾರಿಗಳನ್ನು ಕೇಳಿದರೆ ಇನ್ನೂ ವ್ಯಕ್ತಿ ಸತ್ತಿಲ್ಲ. ಆ ಕಾರಣಕ್ಕೆ ಎಫ್‌ಐಆರ್ ಹಾಕಿಲ್ಲ ಅಂತಾರೆ. ಇವರಿಗೆ ಮತ ಹಾಕಿದ್ದು ಜನರ ಜೀವದ ಜತೆ ಚೆಲ್ಲಾಟವಾಡಲು ಅಲ್ಲ. ನಿನ್ನೆ ಅವರ ಕುಟುಂಬಕ್ಕೆ ಕರೆ ಮಾಡಿದಾಗ ಕುಟುಂಬದವರು ಕಣ್ಣೀರಿಟ್ಟರು. ರಾತ್ರಿ 1.30ಕ್ಕೆ ಮೈಸೂರಿಗೆ ಶಿಫ್ಟ್ ಮಾಡಿದ್ದಾರೆ. ವೈದ್ಯರು ತಮ್ಮ ಕೈಯಲ್ಲಿ ಆದ ಪ್ರಯತ್ನವನ್ನು ಮಾಡುತ್ತೇನೆ ಎಂದಿದ್ದಾರೆ.

ಮುಖ್ಯಮಂತ್ರಿಗಳು ತಕ್ಷಣ ಈ ಮಂತ್ರಿಯನ್ನು ವಜಾ ಮಾಡಬೇಕು. ಸರಿಯಾದ ತನಿಖೆ ನಡೆಸಿ. ಕೀಳು ಮಟ್ಟದ ರಾಜಕಾರಣ ಮಾಡುತ್ತಿರುವವರನ್ನು ಕೂಡಲೇ ಕಿತ್ತುಹಾಕುಬೇಕು ಎಂದು ಆಗ್ರಹಿಸಿದ ಅವರು, ನನ್ನ ಕ್ಷೇತ್ರ ಚನ್ನಪಟ್ಟಣದಲ್ಲಿ ಅಧಿಕಾರದ ಅವಧಿಯಲ್ಲಿ ಒಂದೇ ಒಂದು ಅಧಿಕಾರಿಯನ್ನು ವರ್ಗಾವಣೆ ಮಾಡಿಲ್ಲ. ಚಲುವರಾಯಸ್ವಾಮಿ ಜೀವದ ಜತೆ ಚೆಲ್ಲಾಟ ಆಡುತ್ತಿದ್ದಾರೆ. ವಿಧಾನಸೌಧದಲ್ಲಿ ಈ ವಿಚಾರವನ್ನೇ ಪ್ರಶ್ನೆ ಎತ್ತುತ್ತೇನೆ ಎಂದು ಹೇಳಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು