NEWSಕೃಷಿ

ಕೇಂದ್ರ ಸರ್ಕಾರ ಕೃಷಿ ಸಮ್ಮಾನ್ ಜತೆಗೆ ರಾಜ್ಯ ಸರ್ಕಾರವೂ 2 ಸಾವಿರ ರೂ. ಬಿಡುಗಡೆ ಮಾಡಲಿ

ರಾಜ್ಯ ಕಬ್ಬು ಬೆಳೆಗಾರರ ಸಂಘದ  ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಒತ್ತಾಯ

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ಕೊರೊನಾ ಬಾಧೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೃಷಿ ಸಮ್ಮಾನ್ ಯೋಜನೆಯಡಿ  ರೈತರಿಗೆ ನೀಡುತ್ತಿರುವ ಮೊದಲ ಕಂತಿನ ಹಣದ ಜೊತೆಗೆ ರಾಜ್ಯ ಸರ್ಕಾರದ ಪಾಲನ್ನು ಸೇರಿಸಿ 4000 ರೂ.ಗಳನ್ನು ನೀಡುವಂತೆ ರಾಜ್ಯ ಕಬ್ಬು ಬೆಳೆಗಾರರ ಸಂಘದ  ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಒತ್ತಾಯಿಸಿದ್ದಾರೆ.

ಕೊರೊನಾ ನಿಯಂತ್ರಣಕ್ಕಾಗಿ ದೇಶಾದ್ಯಂತ 21 ದಿನಗಳ ಕಾಲ ಲಾಕ್ ಡೌನ್ ಜಾರಿಯಾಗಿದೆ. ಪರಿಣಾಮ ಕೃಷಿ ಕ್ಷೇತ್ರ ಹಾಗೂ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದನ್ನು ಮನಗಂಡಿರುವ ಕೇಂದ್ರ ಸರ್ಕಾರ ಕೃಷಿ ಉಳಿವಿಗೆ ರೈತರ ನೆರವಿಗಾಗಿ ಹಲವಾರು ಉಪಯುಕ್ತ ಯೋಜನೆ ಜಾರಿಗೆ ತಂದಿರುವುದು ಅಭಿನಂದನಾರ್ಹವಾಗಿದ್ದು ಕೃಷಿ ಸಮ್ಮಾನ್ ಯೋಜನೆಯಡಿ ಮೊದಲ ಕಂತಿನ ಹಣವಾಗಿ 2000 ರೂ.ಗಳನ್ನು ರೈತರಿಗೆ ನೀಡಲು ಮುಂದಾಗಿದೆ. ಈ ಕಂತಿನ ಜೊತೆಗೆ ರಾಜ್ಯ ಸರ್ಕಾರದ ಪಾಲಿನ 2000 ರೂ.ಗಳನ್ನು ಸೇರಿಸಿ ಒಟ್ಟಾಗಿ 4000 ರೂ.ಕೊಟ್ಟರೆ ರೈತ ವರ್ಗಕ್ಕೆ ಹೆಚ್ಚಿನ ಅನುಕೂಲವಾಗಲಿದ್ದು ರಾಜ್ಯ ಸರ್ಕಾರ ಇದರ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

ಅಲ್ಲದೆ ರೈತ ಬೆಳೆದ ಹಣ್ಣು-ತರಕಾರಿಗೆ ಮಾರುಕಟ್ಟೆ ವ್ಯವಸ್ಥೆ ಇಲ್ಲದೇ ರೈತ ಪರಿತಪಿಸುವಂತಾಗಿದೆ. ರಾಜ್ಯ ಸರ್ಕಾರವು ಮಧ್ಯ ಪ್ರವೇಶಿಸಿ ಹಾಪ್ ಕಾಮ್ಸ್ ಗಳ ಮೂಲಕ ಸರ್ಕಾರವೇ ಖರೀದಿಸಿ ‌ನಗರ ಪ್ರದೇಶಗಳಲ್ಲಿ  ಮಾರಾಟ ಮಾಡುವ ವ್ಯವಸ್ಥೆ ಜಾರಿಗಿಳಿಸಿದಲ್ಲಿ ರೈತರ ಬೆಳೆಗಳಿಗೆ ನಿಖರವಾದ ಬೆಲೆ ಸಿಗಲಿದೆ ಎಂದರು.

ಭತ್ತ ಖರೀದಿ ಕೇಂದ್ರದ ಮೂಲಕ ರೈತರಿಂದ ಭತ್ತ ಖರೀದಿ ಮಾಡಿ ಮೂರು ತಿಂಗಳಾದರೂ ಹಣ ನೀಡಿಲ್ಲ.ರೈತರು ಭತ್ತ ಬೆಳೆಯಲು ಸಾಲ ಸೋಲ ಮಾಡಿ ಈಗ ಬಡ್ಡಿ ಕಟ್ಟುವ ಪರಿಸ್ಥಿತಿ ಎದುರಾಗಿದೆ.ರೈತರಿಗೆ ಕೊರೀನಾಕ್ಕಿಂತ ಸಾಲಭಾದೆಯೇ ಹೆಚ್ಚಾಗಿದ್ದು ಸರ್ಕಾರ ಶೀಘ್ರದಲ್ಲೇ ಖರೀದಿ ಮಾಡಿರುವ ಭತ್ತಕ್ಕೆ ಹಣ ನೀಡುವ ಮೂಲಕ ಅವರ ಕಷ್ಟದಲ್ಲಿ ಭಾಗಿಯಾಗಬೇಕೆಂದು  ಮನವಿ ಮಾಡಿದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...