NEWSವಿಜ್ಞಾನ

ಕೈಗಾರಿಕೆಗಳ ಸಮಸ್ಯೆ  ಅರಿವು ಸರ್ಕಾರಕ್ಕಿದೆ

ಎಫ್ ಕೆಸಿಸಿಐ ಪದಾಧಿಕಾರಿಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕೈಗಾರಿಕೆಗಳ ಸಮಸ್ಯೆಗಳ ಬಗ್ಗೆ ಸರ್ಕಾರದ ಅರಿವಿದೆ. ಕೈಗಾರಿಕಾ ಸಚಿವರು ನಿಮ್ಮ ಹಲವಾರು ಸಮಸ್ಯೆಗಳ ಬಗ್ಗೆ ಸಂಪುಟದಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತಲೇ ಇದ್ದಾರೆ. ಇನ್ನು ನೀವೂ ಸಹ ನಿಮ್ಮ ಸಮಸ್ಯೆಗಳನ್ನು ನನ್ನ ಗಮನಕ್ಕೆ ತನ್ನಿ. ನಾನು ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹರಿಸಲು ಯತ್ನಿಸುತ್ತೇನೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಎಫ್ ಕೆಸಿಸಿಐ ಪದಾಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಸಚಿವರು, ಸರ್ಕಾರ ತೆಗೆದುಕೊಳ್ಳುವ ನಿರ್ಧಾರದಿಂದ ಇಡೀ ರಾಜ್ಯದ ಕೈಗಾರಿಕೆಗಳಿಗೆ ಅನುಕೂಲವಾಗಬೇಕು. ಈ ನಿಟ್ಟಿನಲ್ಲಿ ಎಲ್ಲರಿಗೂ ಸಹಕಾರಿಯಾಗುವಂತೆ ನಿರ್ಧಾರ ತೆಗೆದುಕೊಳ್ಳಲಾಗುವುದು. ಸರ್ಕಾರ, ಮೈಸೂರು ಜಿಲ್ಲಾಡಳಿತ ಹಾಗೂ ಮೈಸೂರು ಉಸ್ತುವಾರಿ ಸಚಿವರು ಕೈಗಾರಿಕೆಗಳ ಪರ ಇರುವುದಾಗಿ ತಿಳಿಸಿದರು.

ಅದೃಷ್ಟವಶಾತ್ ಕರೋನಾ ನಿಯಂತ್ರಣಕ್ಕೆ ಬಂದಿದೆ. ಇದಕ್ಕೆ ಜಿಲ್ಲಾಧಿಕಾರಿ, ಪೆÇಲೀಸ್ ಅಧಿಕಾರಿಗಳು, ವೈದ್ಯರು, ನರ್ಸ್ ಹಾಗೂ ಆಶಾಕಾರ್ಯಕರ್ತೆಯರು ಸಾಕಷ್ಟು ಶ್ರಮ ಹಾಕಿದ್ದಾರೆ. ಅವರ ಈ ಸೇವೆಗೆ ನಾನು ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುವೆ ಎಂದು ತಿಳಿಸಿದರು.

ಕೈಗಾರಿಕಾ ಪ್ರತಿನಿಧಿಗಳ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ಅಭಿರಾಮ್.ಜಿ.ಶಂಕರ್ ಅವರು ಕಾರ್ಖಾನೆಗಳು ನೌಕರರಿಗೆ ನೀಡಿರುವ ಕಂಪನಿಯ ಗುರುತಿನ ಚೀಟಿ ಹೊಂದಿದ್ದರೆ ಪಾಸ್ ಕಡ್ಡಾಯ ಮಾಡುವುದಿಲ್ಲ. ಅಗರಬತ್ತಿ ಮುಂತಾದ ಅಸಂಘಟಿತ ಗೃಹ ಕೈಗಾರಿಕೆಗಳ ಪ್ರತಿನಿಧಿಗಳಿಗೆ ಅಗತ್ಯವಿದ್ದಲ್ಲಿ ಪಾಸ್ ನೀಡಲಾಗುವುದು ಎಂದರು.

ಕಂಪನಿಯಲ್ಲಿ ಕಾರ್ಯನಿರ್ವಹಿಸುವಾಗ ಹವಾ ನಿಯಂತ್ರಣಗಳನ್ನು ಕಡ್ಡಾಯವಾಗಿ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಗಳು ಕೈಗಾರಿಕಾ ಉದ್ಯಮಿಗಳಿಗೆ ಸೂಚನೆ ನೀಡಿದರು.

ನಗರವು ಕೆಂಪು ವಲಯಕ್ಕೆ ಸೇರಿರುವದರಿಂದ ಟ್ಯಾಕ್ಸಿ, ಆಟೋ, ಗೂಡ್ಸ್, ಟೆಂಪೋಗಳ ಸಂಚಾರಕ್ಕೆ ಅವಕಾಶವಿರುವುದಿಲ್ಲ. ಸೋಮವಾರದಿಂದ ಟ್ಯಾನ್ಸ್‍ಫೋರ್ಟ್ ಇಂಡಸ್ಟ್ರಿಗಳಿಗೆ ಅವಕಾಶವನ್ನು ಕಲ್ಪಿಸಲಾಗಿದೆ. ಮಾರುಕಟ್ಟೆ ಸಂಕಿರಣಗಳನ್ನು ತೆರೆಯುವಂತಿಲ್ಲ ಎಂಬ ಸೂಚನೆ ಇದೆ. ದೇವರಾಜ ಮಾರುಕಟ್ಟೆಯನ್ನು ಹೇಗೆ ಪರಿಗಣಿಸಬೇಕು ಎಂಬ ಸ್ಪಷ್ಟತೆ ಇಲ್ಲ. ಆ ಬಗ್ಗೆ ಒಂದೆರಡು ದಿನದಲ್ಲಿ ತಿಳಿಸಲಾಗುವುದು. ದೇವರಾಜ ಅರಸು ರಸ್ತೆ ಹಾಗೂ ಇತರೆ ಜನಸಂದಣಿ ಸೇರುವ ಅಂಗಡಿಗಳನ್ನು ತೆರೆಯಲು ಸದ್ಯಕ್ಕೆ ಅವಕಾಶ ನೀಡುವುದಿಲ್ಲ. ಈ ಬಗ್ಗೆ ಸ್ಪಷ್ಟನೆ ಪಡೆದು ಕ್ರಮ ವಹಿಸಲಾಗುವುದು ಎಂದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...