NEWSಕೃಷಿನಮ್ಮರಾಜ್ಯರಾಜಕೀಯ

 ಕೈಮಗ್ಗ, ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ  

 ಕೈಮಗ್ಗ, ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ  

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನೇಕಾರರಿಗೆ ನೇಕಾರಿಕೆ ಉದ್ದೇಶಕ್ಕಾಗಿ ಸಹಕಾರ ಸಂಘಗಳು, ಸಹಕಾರ ಬ್ಯಾಂಕುಗಳು ,  ರಾಷ್ಟ್ರೀಕೃತ ಬ್ಯಾಂಕುಗಳಿಂದ ನೀಡಲಾದ ಸಾಲದ ಕುರಿತಾಗಿ ಜಿಲ್ಲಾವಾರು ಮಾಹಿತಿ ಪಡೆದು ಸಾಲಮನ್ನಾ ಮಾಡಲು ಸರ್ಕಾರ ಕ್ರವಹಿಸಿದೆ ಎಂದು ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ  ತಿಳಿಸಿದರು.

ವಿಧಾನಪರಿಷತ್ತಿನಲ್ಲಿ ನಡೆದ ಪ್ರಶ್ನೋತ್ತರ ವೇಳೆ ಎಚ್.ಎಂ. ರೇವಣ್ಣ (ವಿಧಾನ ಸಭೆಯಿಂದ ಚುನಾಯಿತರಾದವರು)  ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 2019-20ನೇ ಸಾಲಿಗೆ ಸರ್ಕಾರದಿಂದ ನೇಕಾರರ ಸಾಲದ ಮೇಲೆ 227.86 ಲಕ್ಷ ರೂ.ಗಳ ಬಡ್ಡಿ ಮನ್ನಾ ಮಾಡಲಾಗಿದೆ. 9765 ಫಲಾನುಭವಿಗಳಿಗೆ ಸಾಲದ ಮೇಲಿನ ಬಡ್ಡಿ ಮನ್ನಾ ಅನುಕೂಲವಾಗಿದೆ ಎಂದು   ತಿಳಿಸಿದರು.

ಜವಳಿ ಉದ್ಯಮವನ್ನು ಉತ್ತೇಜಿಸುವ ಸಂಬಂಧ ಬೇರೆ ಬೇರೆ ರಾಜ್ಯಗಳು ರೂಪಿಸಿಕೊಂಡಿರುವ ಜವಳಿ ನೀತಿಯನ್ನು ಅಧ್ಯಯನ ಮಾಡಿ  ಹೊಸ ಟೆಕ್ಸ್‍ಟೈಲ್ ಪಾಲಿಸಿ ಜಾರಿಗೆ ತರಲಾಗುವುದು. ಜವಳಿ ಉದ್ಯಮವನ್ನು ಉತ್ತೇಜಿಸುವ ಸಲುವಾಗಿ ಟೆಕ್ಸ್‍ಟೈಲ್ ಪಾರ್ಕ್ ಸ್ಥಾಪನೆ ಮಾಡಲು ಕ್ರಮ ವಹಿಸಲಾಗುವುದು. ಜವಳಿ ಉದ್ಯಮದ ಮೇಲೆ ಹೂಡಿಕೆ ಮಾಡಿದ ಬಂಡವಾಳದ ಮೇಲೆ ಶೇಕಡ 30 ರಷ್ಟು ಸಹಾಯಧನ ನೀಡಲು ಕ್ರಮವಹಿಸಲಾಗುವುದು ಅಲ್ಲದೆ ನೇಕಾರರಿಗೆ ಪ್ರತಿ ತಿಂಗಳು ಒಂದು ಸಾವಿರದಂತೆ 5ವರ್ಷ ನೀಡಲು ಚಿಂತಿಸಲಾಗಿದೆ ಎಂದು  ತಿಳಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ